Advertisement
ಸುದ್ದಿಗಳು

ಕೊಲ್ಲಮೊಗ್ರ ಬಂಗ್ಲೆಗುಡ್ಡೆ ಶಾಲೆಯಲ್ಲಿ ಶಿಕ್ಷಕರ ಕೊರತೆ : ಪ್ರತಿಭಟನೆಗೆ ನಿರ್ಧಾರ

Share

ಕೊಲ್ಲಮೊಗ್ರ: ತಾಲೂಕಿನ ಗ್ರಾಮೀಣ ಭಾಗವಾದ ಕೊಲ್ಲಮೊಗ್ರದ ಬಂಗ್ಲೆಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ಕೊರತೆ ಇದ್ದು ಈ ಬಗ್ಗೆ ಹಲವು ಬಾರಿ ಇಲಾಖೆಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಲು ಗ್ರಾಮಸ್ಥರು ನಿರ್ಧರಿಸಿದ್ದಾರೆ. ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಲು ಈಗಾಗಲೇ ಚಿಂತನೆ ನಡೆದಿದೆ.

ಗ್ರಾಮೀಣ ಭಾಗದ ವಿದ್ಯಾದೇಗುವಲವಾದ ಈ ಸರಕಾರಿ ಶಾಲೆಯಲ್ಲಿ ಕಳೆದ ವರ್ಷ 71 ವಿದ್ಯಾರ್ಥಿಗಳು ಇದ್ದರು. ಈ ಬಾರಿ 61 ಕ್ಕೆ ಇಳಿದಿದೆ. ಕಾರಣ ಶಿಕ್ಷಕರ ಕೊರತೆ. ಇಲ್ಲಿ ಪ್ರಭಾರ ಮುಖ್ಯೋಪಾಧ್ಯಾಯರು, ಒಬ್ಬರು ಶಿಕ್ಷಕರು ಹಾಗೂ ಅತಿಥಿ ಶಿಕ್ಷಕರು ಇದ್ದಾರೆ. ಆದರೆ ಈ ಶಾಲೆಗೆ ನೇಮಕವಾದ ಒಬ್ಬರು ಶಿಕ್ಷಕರು ಬೇರೆ ಶಾಲೆಗೆ ವರ್ಗಾವಣೆಯಾಗಿದೆ. ಹೀಗಾಗಿ   ಸಮಸ್ಯೆ ಕಾರಣವಾಗಿದೆ. ಪ್ರಭಾರ ಮುಖ್ಯೋಪಾಧ್ಯಾಯರು ಇರುವುದು  ದೈಹಿಕ ಶಿಕ್ಷಣ ಶಿಕ್ಷಕರಾಗಿದ್ದಾರೆ. ಹೀಗಾಗಿ ಈಗ ಶಿಕ್ಷಕರ ನೇಮಕವಾಗಬೇಕು ಎಂಬ ಒತ್ತಾಯ ಕೇಳಿಬಂದಿದೆ.

ಗ್ರಾಮಸ್ಥರ ಬೇಡಿಕೆ ಹೀಗಿದೆ:

ವರ್ಗಾವಣೆಯಾದ ಶಿಕ್ಷಕರು ಮತ್ತೆ ಇದೇ ಶಾಲೆಗೆ ಬರಬೇಕು, ಮುಖ್ಯೋಪಾಧ್ಯಾಯರ ನೇಮಕವಾಗಬೇಕು, ಹೆಚ್ಚುವರಿ ಇಬ್ಬರು ಅತಿಥಿ ಶಿಕ್ಷಕರ ನೇಮಕವಾಗಬೇಕು, ಕನಿಷ್ಠ 2 ಶಾಲಾ ಕೊಠಡಿ  ನಿರ್ಮಾಣವಾಗಬೇಕು  ಎಂದು  ಒತ್ತಾಯಿಸಿದ್ದಾರೆ. 15 ದಿನಗಳೊಳಗೆ ವ್ಯವಸ್ಥೆ ಆಗದೇ ಇದ್ದರೆ ಪ್ರತಿಭಟನೆ ನಡೆಸಲಾಗುವುದು. ಅದೂ ಕೈಗೆ ಕಪ್ಪುಪಟ್ಟಿ ಧರಿಸಿ ಶ್ರಮದಾನದ ಮೂಲಕ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

7 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

17 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

18 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

18 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

24 hours ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

1 day ago