ಕೊಲ್ಲಮೊಗ್ರ: ತಾಲೂಕಿನ ಗ್ರಾಮೀಣ ಭಾಗವಾದ ಕೊಲ್ಲಮೊಗ್ರದ ಬಂಗ್ಲೆಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ಕೊರತೆ ಇದ್ದು ಈ ಬಗ್ಗೆ ಹಲವು ಬಾರಿ ಇಲಾಖೆಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಲು ಗ್ರಾಮಸ್ಥರು ನಿರ್ಧರಿಸಿದ್ದಾರೆ. ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಲು ಈಗಾಗಲೇ ಚಿಂತನೆ ನಡೆದಿದೆ.
ಗ್ರಾಮೀಣ ಭಾಗದ ವಿದ್ಯಾದೇಗುವಲವಾದ ಈ ಸರಕಾರಿ ಶಾಲೆಯಲ್ಲಿ ಕಳೆದ ವರ್ಷ 71 ವಿದ್ಯಾರ್ಥಿಗಳು ಇದ್ದರು. ಈ ಬಾರಿ 61 ಕ್ಕೆ ಇಳಿದಿದೆ. ಕಾರಣ ಶಿಕ್ಷಕರ ಕೊರತೆ. ಇಲ್ಲಿ ಪ್ರಭಾರ ಮುಖ್ಯೋಪಾಧ್ಯಾಯರು, ಒಬ್ಬರು ಶಿಕ್ಷಕರು ಹಾಗೂ ಅತಿಥಿ ಶಿಕ್ಷಕರು ಇದ್ದಾರೆ. ಆದರೆ ಈ ಶಾಲೆಗೆ ನೇಮಕವಾದ ಒಬ್ಬರು ಶಿಕ್ಷಕರು ಬೇರೆ ಶಾಲೆಗೆ ವರ್ಗಾವಣೆಯಾಗಿದೆ. ಹೀಗಾಗಿ ಸಮಸ್ಯೆ ಕಾರಣವಾಗಿದೆ. ಪ್ರಭಾರ ಮುಖ್ಯೋಪಾಧ್ಯಾಯರು ಇರುವುದು ದೈಹಿಕ ಶಿಕ್ಷಣ ಶಿಕ್ಷಕರಾಗಿದ್ದಾರೆ. ಹೀಗಾಗಿ ಈಗ ಶಿಕ್ಷಕರ ನೇಮಕವಾಗಬೇಕು ಎಂಬ ಒತ್ತಾಯ ಕೇಳಿಬಂದಿದೆ.
ಗ್ರಾಮಸ್ಥರ ಬೇಡಿಕೆ ಹೀಗಿದೆ:
ವರ್ಗಾವಣೆಯಾದ ಶಿಕ್ಷಕರು ಮತ್ತೆ ಇದೇ ಶಾಲೆಗೆ ಬರಬೇಕು, ಮುಖ್ಯೋಪಾಧ್ಯಾಯರ ನೇಮಕವಾಗಬೇಕು, ಹೆಚ್ಚುವರಿ ಇಬ್ಬರು ಅತಿಥಿ ಶಿಕ್ಷಕರ ನೇಮಕವಾಗಬೇಕು, ಕನಿಷ್ಠ 2 ಶಾಲಾ ಕೊಠಡಿ ನಿರ್ಮಾಣವಾಗಬೇಕು ಎಂದು ಒತ್ತಾಯಿಸಿದ್ದಾರೆ. 15 ದಿನಗಳೊಳಗೆ ವ್ಯವಸ್ಥೆ ಆಗದೇ ಇದ್ದರೆ ಪ್ರತಿಭಟನೆ ನಡೆಸಲಾಗುವುದು. ಅದೂ ಕೈಗೆ ಕಪ್ಪುಪಟ್ಟಿ ಧರಿಸಿ ಶ್ರಮದಾನದ ಮೂಲಕ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…
2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್ ಆ್ಯಪ್ ಮೂಲಕವೇ ಬೆಳೆ…
ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…
ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…