ಕೊಲ್ಲಮೊಗ್ರ: ತಾಲೂಕಿನ ಗ್ರಾಮೀಣ ಭಾಗವಾದ ಕೊಲ್ಲಮೊಗ್ರದ ಬಂಗ್ಲೆಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ಕೊರತೆ ಇದ್ದು ಈ ಬಗ್ಗೆ ಹಲವು ಬಾರಿ ಇಲಾಖೆಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಲು ಗ್ರಾಮಸ್ಥರು ನಿರ್ಧರಿಸಿದ್ದಾರೆ. ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಲು ಈಗಾಗಲೇ ಚಿಂತನೆ ನಡೆದಿದೆ.
ಗ್ರಾಮೀಣ ಭಾಗದ ವಿದ್ಯಾದೇಗುವಲವಾದ ಈ ಸರಕಾರಿ ಶಾಲೆಯಲ್ಲಿ ಕಳೆದ ವರ್ಷ 71 ವಿದ್ಯಾರ್ಥಿಗಳು ಇದ್ದರು. ಈ ಬಾರಿ 61 ಕ್ಕೆ ಇಳಿದಿದೆ. ಕಾರಣ ಶಿಕ್ಷಕರ ಕೊರತೆ. ಇಲ್ಲಿ ಪ್ರಭಾರ ಮುಖ್ಯೋಪಾಧ್ಯಾಯರು, ಒಬ್ಬರು ಶಿಕ್ಷಕರು ಹಾಗೂ ಅತಿಥಿ ಶಿಕ್ಷಕರು ಇದ್ದಾರೆ. ಆದರೆ ಈ ಶಾಲೆಗೆ ನೇಮಕವಾದ ಒಬ್ಬರು ಶಿಕ್ಷಕರು ಬೇರೆ ಶಾಲೆಗೆ ವರ್ಗಾವಣೆಯಾಗಿದೆ. ಹೀಗಾಗಿ ಸಮಸ್ಯೆ ಕಾರಣವಾಗಿದೆ. ಪ್ರಭಾರ ಮುಖ್ಯೋಪಾಧ್ಯಾಯರು ಇರುವುದು ದೈಹಿಕ ಶಿಕ್ಷಣ ಶಿಕ್ಷಕರಾಗಿದ್ದಾರೆ. ಹೀಗಾಗಿ ಈಗ ಶಿಕ್ಷಕರ ನೇಮಕವಾಗಬೇಕು ಎಂಬ ಒತ್ತಾಯ ಕೇಳಿಬಂದಿದೆ.
ಗ್ರಾಮಸ್ಥರ ಬೇಡಿಕೆ ಹೀಗಿದೆ:
ವರ್ಗಾವಣೆಯಾದ ಶಿಕ್ಷಕರು ಮತ್ತೆ ಇದೇ ಶಾಲೆಗೆ ಬರಬೇಕು, ಮುಖ್ಯೋಪಾಧ್ಯಾಯರ ನೇಮಕವಾಗಬೇಕು, ಹೆಚ್ಚುವರಿ ಇಬ್ಬರು ಅತಿಥಿ ಶಿಕ್ಷಕರ ನೇಮಕವಾಗಬೇಕು, ಕನಿಷ್ಠ 2 ಶಾಲಾ ಕೊಠಡಿ ನಿರ್ಮಾಣವಾಗಬೇಕು ಎಂದು ಒತ್ತಾಯಿಸಿದ್ದಾರೆ. 15 ದಿನಗಳೊಳಗೆ ವ್ಯವಸ್ಥೆ ಆಗದೇ ಇದ್ದರೆ ಪ್ರತಿಭಟನೆ ನಡೆಸಲಾಗುವುದು. ಅದೂ ಕೈಗೆ ಕಪ್ಪುಪಟ್ಟಿ ಧರಿಸಿ ಶ್ರಮದಾನದ ಮೂಲಕ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…