ಕೊಲ್ಲಮೊಗ್ರ: ತಾಲೂಕಿನ ಗ್ರಾಮೀಣ ಭಾಗವಾದ ಕೊಲ್ಲಮೊಗ್ರದ ಬಂಗ್ಲೆಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ಕೊರತೆ ಇದ್ದು ಈ ಬಗ್ಗೆ ಹಲವು ಬಾರಿ ಇಲಾಖೆಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಲು ಗ್ರಾಮಸ್ಥರು ನಿರ್ಧರಿಸಿದ್ದಾರೆ. ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಲು ಈಗಾಗಲೇ ಚಿಂತನೆ ನಡೆದಿದೆ.
ಗ್ರಾಮೀಣ ಭಾಗದ ವಿದ್ಯಾದೇಗುವಲವಾದ ಈ ಸರಕಾರಿ ಶಾಲೆಯಲ್ಲಿ ಕಳೆದ ವರ್ಷ 71 ವಿದ್ಯಾರ್ಥಿಗಳು ಇದ್ದರು. ಈ ಬಾರಿ 61 ಕ್ಕೆ ಇಳಿದಿದೆ. ಕಾರಣ ಶಿಕ್ಷಕರ ಕೊರತೆ. ಇಲ್ಲಿ ಪ್ರಭಾರ ಮುಖ್ಯೋಪಾಧ್ಯಾಯರು, ಒಬ್ಬರು ಶಿಕ್ಷಕರು ಹಾಗೂ ಅತಿಥಿ ಶಿಕ್ಷಕರು ಇದ್ದಾರೆ. ಆದರೆ ಈ ಶಾಲೆಗೆ ನೇಮಕವಾದ ಒಬ್ಬರು ಶಿಕ್ಷಕರು ಬೇರೆ ಶಾಲೆಗೆ ವರ್ಗಾವಣೆಯಾಗಿದೆ. ಹೀಗಾಗಿ ಸಮಸ್ಯೆ ಕಾರಣವಾಗಿದೆ. ಪ್ರಭಾರ ಮುಖ್ಯೋಪಾಧ್ಯಾಯರು ಇರುವುದು ದೈಹಿಕ ಶಿಕ್ಷಣ ಶಿಕ್ಷಕರಾಗಿದ್ದಾರೆ. ಹೀಗಾಗಿ ಈಗ ಶಿಕ್ಷಕರ ನೇಮಕವಾಗಬೇಕು ಎಂಬ ಒತ್ತಾಯ ಕೇಳಿಬಂದಿದೆ.
ಗ್ರಾಮಸ್ಥರ ಬೇಡಿಕೆ ಹೀಗಿದೆ:
ವರ್ಗಾವಣೆಯಾದ ಶಿಕ್ಷಕರು ಮತ್ತೆ ಇದೇ ಶಾಲೆಗೆ ಬರಬೇಕು, ಮುಖ್ಯೋಪಾಧ್ಯಾಯರ ನೇಮಕವಾಗಬೇಕು, ಹೆಚ್ಚುವರಿ ಇಬ್ಬರು ಅತಿಥಿ ಶಿಕ್ಷಕರ ನೇಮಕವಾಗಬೇಕು, ಕನಿಷ್ಠ 2 ಶಾಲಾ ಕೊಠಡಿ ನಿರ್ಮಾಣವಾಗಬೇಕು ಎಂದು ಒತ್ತಾಯಿಸಿದ್ದಾರೆ. 15 ದಿನಗಳೊಳಗೆ ವ್ಯವಸ್ಥೆ ಆಗದೇ ಇದ್ದರೆ ಪ್ರತಿಭಟನೆ ನಡೆಸಲಾಗುವುದು. ಅದೂ ಕೈಗೆ ಕಪ್ಪುಪಟ್ಟಿ ಧರಿಸಿ ಶ್ರಮದಾನದ ಮೂಲಕ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
Advertisement
ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…
ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ…
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.