Advertisement
ಸುದ್ದಿಗಳು

ಕೊಲ್ಲಮೊಗ್ರ ಬಂಗ್ಲೆಗುಡ್ಡೆ ಶಾಲೆಯಲ್ಲಿ ಶಿಕ್ಷಕರ ಕೊರತೆ : ಪ್ರತಿಭಟನೆಗೆ ನಿರ್ಧಾರ

Share

ಕೊಲ್ಲಮೊಗ್ರ: ತಾಲೂಕಿನ ಗ್ರಾಮೀಣ ಭಾಗವಾದ ಕೊಲ್ಲಮೊಗ್ರದ ಬಂಗ್ಲೆಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ಕೊರತೆ ಇದ್ದು ಈ ಬಗ್ಗೆ ಹಲವು ಬಾರಿ ಇಲಾಖೆಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಲು ಗ್ರಾಮಸ್ಥರು ನಿರ್ಧರಿಸಿದ್ದಾರೆ. ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಲು ಈಗಾಗಲೇ ಚಿಂತನೆ ನಡೆದಿದೆ.

ಗ್ರಾಮೀಣ ಭಾಗದ ವಿದ್ಯಾದೇಗುವಲವಾದ ಈ ಸರಕಾರಿ ಶಾಲೆಯಲ್ಲಿ ಕಳೆದ ವರ್ಷ 71 ವಿದ್ಯಾರ್ಥಿಗಳು ಇದ್ದರು. ಈ ಬಾರಿ 61 ಕ್ಕೆ ಇಳಿದಿದೆ. ಕಾರಣ ಶಿಕ್ಷಕರ ಕೊರತೆ. ಇಲ್ಲಿ ಪ್ರಭಾರ ಮುಖ್ಯೋಪಾಧ್ಯಾಯರು, ಒಬ್ಬರು ಶಿಕ್ಷಕರು ಹಾಗೂ ಅತಿಥಿ ಶಿಕ್ಷಕರು ಇದ್ದಾರೆ. ಆದರೆ ಈ ಶಾಲೆಗೆ ನೇಮಕವಾದ ಒಬ್ಬರು ಶಿಕ್ಷಕರು ಬೇರೆ ಶಾಲೆಗೆ ವರ್ಗಾವಣೆಯಾಗಿದೆ. ಹೀಗಾಗಿ   ಸಮಸ್ಯೆ ಕಾರಣವಾಗಿದೆ. ಪ್ರಭಾರ ಮುಖ್ಯೋಪಾಧ್ಯಾಯರು ಇರುವುದು  ದೈಹಿಕ ಶಿಕ್ಷಣ ಶಿಕ್ಷಕರಾಗಿದ್ದಾರೆ. ಹೀಗಾಗಿ ಈಗ ಶಿಕ್ಷಕರ ನೇಮಕವಾಗಬೇಕು ಎಂಬ ಒತ್ತಾಯ ಕೇಳಿಬಂದಿದೆ.

ಗ್ರಾಮಸ್ಥರ ಬೇಡಿಕೆ ಹೀಗಿದೆ:

ವರ್ಗಾವಣೆಯಾದ ಶಿಕ್ಷಕರು ಮತ್ತೆ ಇದೇ ಶಾಲೆಗೆ ಬರಬೇಕು, ಮುಖ್ಯೋಪಾಧ್ಯಾಯರ ನೇಮಕವಾಗಬೇಕು, ಹೆಚ್ಚುವರಿ ಇಬ್ಬರು ಅತಿಥಿ ಶಿಕ್ಷಕರ ನೇಮಕವಾಗಬೇಕು, ಕನಿಷ್ಠ 2 ಶಾಲಾ ಕೊಠಡಿ  ನಿರ್ಮಾಣವಾಗಬೇಕು  ಎಂದು  ಒತ್ತಾಯಿಸಿದ್ದಾರೆ. 15 ದಿನಗಳೊಳಗೆ ವ್ಯವಸ್ಥೆ ಆಗದೇ ಇದ್ದರೆ ಪ್ರತಿಭಟನೆ ನಡೆಸಲಾಗುವುದು. ಅದೂ ಕೈಗೆ ಕಪ್ಪುಪಟ್ಟಿ ಧರಿಸಿ ಶ್ರಮದಾನದ ಮೂಲಕ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

9 hours ago

ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ

ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್‌ಗೆ ಅಡಿಕೆ…

10 hours ago

ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…

10 hours ago

ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ

2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್‌ ಆ್ಯಪ್‌ ಮೂಲಕವೇ ಬೆಳೆ…

11 hours ago

ಮಾಣಿ–ಸಂಪಾಜೆ ರಸ್ತೆ ದುರಸ್ತಿಗೆ ₹49.22 ಕೋಟಿ ಮಂಜೂರು | ಚತುಷ್ಪಥ ಯೋಜನೆಗೆ ವೇಗ

ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…

11 hours ago

ಭೂಕುಸಿತದ ಬಗ್ಗೆ ಎಚ್ಚರಿಕೆ – ಜುಲೈ 7 ರಿಂದ 11 ರವರೆಗೆ ಪಶ್ಚಿಮಘಟ್ಟದಲ್ಲಿ ಭಾರೀ ಮಳೆ ಸಾಧ್ಯತೆ

ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…

11 hours ago