ಕೊಳಕೇರಿ ಶ್ರೀಭಗವತಿ ದೇವಾಲಯದಲ್ಲಿ ಕಳ್ಳತನ

December 22, 2019
7:53 PM

ಮಡಿಕೇರಿ : ನಾಪೋಕ್ಲು ಬಳಿಯ ಈಸ್ಟ್ ಕೊಳಕೇರಿ ಗ್ರಾಮದ ಮೂಟೇರಿ ಭಗವತಿ (ಶ್ರೀ ಉಮಾಮಹೇಶ್ವರಿ) ದೇವಸ್ಥಾನಕ್ಕೆ ನುಗ್ಗಿರುವ ಕಳ್ಳರು ಎರಡು ಬೆಳ್ಳಿಯ ವಿಗ್ರಹಗಳು, 40 ಸಾವಿರ ನಗದು ಸೇರಿದಂತೆ ಒಂದು ಲಕ್ಷಕ್ಕೂ ಅಧಿಕ ಬೆಲೆಯ ವಸ್ತುಗಳನ್ನು ಕಳ್ಳತನ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.

Advertisement

ಶನಿವಾರ ರಾತ್ರಿ ಕೃತ್ಯ ನಡೆದಿದ್ದು, ದೇವಾಲಯದ ಬಾಗಿಲು ತೆರೆದಿರುವ ಕಳ್ಳರು ಗಣಪತಿ ಗುಡಿಯಲ್ಲಿದ್ದ ಎರಡು ಬೆಳ್ಳಿಯ ವಿಗ್ರಹಗಳು, ಒಂದು ಬೆಳ್ಳಿಯ ಚೆಂಬು, ಒಂದು ಶಂಖ ಸೇರಿದಂತೆ ಭಂಡಾರದಲ್ಲಿದ್ದ ಅಂದಾಜು 40 ಸಾವಿರ ನಗದನ್ನು ದೋಚಿದ್ದಾರೆ. ಭಾನುವಾರ ಬೆಳಗ್ಗೆ ಗ್ರಾಮಸ್ಥರಾದ ಮುಕ್ಕಾಟಿರ ಅಣ್ಣಯ್ಯ ಎಂಬುವರು ದೇವಸ್ಥಾನಕ್ಕೆ ತೆರಳಿದ ಸಂದರ್ಭ ದೇವಸ್ಥಾನದ ಗರ್ಭಗುಡಿ, ಗಣಪತಿ ಗುಡಿಯ ಬಾಗಿಲು ತೆರೆದಿರುವುದನ್ನು ಗಮನಿಸಿ ದೇವಾಲಯದ ಆರ್ಚಕರಾದ ಗಜಾನನ ಭಟ್ ಹಾಗೂ ಗ್ರಾಮಸ್ಥರಿಗೆ ತಿಳಿಸಿದರು.

ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷರಾದ ಅಪ್ಪಚ್ಚೀರ ರಮ್ಮಿ ನಾಣಯ್ಯ ಹಾಗೂ ಪದಾಧಿಕಾರಿಗಳು ಮತ್ತು ಗ್ರಾಮಸ್ಥರು ನಾಪೋಕ್ಲು ಪೊಲೀಸರಿಗೆ ದೂರು ನೀಡಿದರು. ಮಡಿಕೇರಿ ಗ್ರಾಮಾಂತರ ವೃತ್ತ ನಿರೀಕ್ಷಕರಾದ ದಿವಾಕರ್, ನಾಪೋಕ್ಲು ಠಾಣಾಧಿಕಾರಿ ಮಂಚಯ್ಯ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಪೊಲೀಸ್ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೆಚ್ಚುತ್ತಿರುವ ಸೈಬರ್ ಅಪರಾಧ ಪ್ರಕರಣಗಳು | ಒಂದು ವರ್ಷದಲ್ಲಿ 22 ಸಾವಿರ ಸೈಬರ್ ಪ್ರಕರಣ ದಾಖಲು |
March 14, 2025
6:51 AM
by: The Rural Mirror ಸುದ್ದಿಜಾಲ
ಸೈಬರ್ ಅಪರಾಧ ತಡೆಗೆ ಪೊಲೀಸ್ ಇಲಾಖೆಯಿಂದ ನೂತನ ತಂತ್ರಜ್ಞಾನ ಬಳಕೆ
December 9, 2024
7:15 AM
by: The Rural Mirror ಸುದ್ದಿಜಾಲ
ಹೆಚ್ಚುತ್ತಿರುವ ಆನ್‌ಲೈನ್ ವಂಚನೆ ಪ್ರಕರಣಗಳು | ಸಾರ್ವಜನಿಕರ ಜಾಗೃತಿಗಾಗಿ ಅರಿವು ಕಾರ್ಯಕ್ರಮ
November 15, 2024
10:56 PM
by: The Rural Mirror ಸುದ್ದಿಜಾಲ
ನಕಲಿ ದಾಖಲೆ ಕೊಟ್ಟು ಪಡಿತರ ಚೀಟಿ ಮಾಡಿಸಿದರೆ ಜೋಕೆ : ರಾಜ್ಯದಲ್ಲಿ ಬರೋಬ್ಬರಿ 12 ಲಕ್ಷ ರೇಷನ್ ಕಾರ್ಡ್ ರದ್ದು : ಕಾರಣ ಏನು..?
August 2, 2024
2:13 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror