ಮಡಿಕೇರಿ : ನಾಪೋಕ್ಲು ಬಳಿಯ ಈಸ್ಟ್ ಕೊಳಕೇರಿ ಗ್ರಾಮದ ಮೂಟೇರಿ ಭಗವತಿ (ಶ್ರೀ ಉಮಾಮಹೇಶ್ವರಿ) ದೇವಸ್ಥಾನಕ್ಕೆ ನುಗ್ಗಿರುವ ಕಳ್ಳರು ಎರಡು ಬೆಳ್ಳಿಯ ವಿಗ್ರಹಗಳು, 40 ಸಾವಿರ ನಗದು ಸೇರಿದಂತೆ ಒಂದು ಲಕ್ಷಕ್ಕೂ ಅಧಿಕ ಬೆಲೆಯ ವಸ್ತುಗಳನ್ನು ಕಳ್ಳತನ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ಶನಿವಾರ ರಾತ್ರಿ ಕೃತ್ಯ ನಡೆದಿದ್ದು, ದೇವಾಲಯದ ಬಾಗಿಲು ತೆರೆದಿರುವ ಕಳ್ಳರು ಗಣಪತಿ ಗುಡಿಯಲ್ಲಿದ್ದ ಎರಡು ಬೆಳ್ಳಿಯ ವಿಗ್ರಹಗಳು, ಒಂದು ಬೆಳ್ಳಿಯ ಚೆಂಬು, ಒಂದು ಶಂಖ ಸೇರಿದಂತೆ ಭಂಡಾರದಲ್ಲಿದ್ದ ಅಂದಾಜು 40 ಸಾವಿರ ನಗದನ್ನು ದೋಚಿದ್ದಾರೆ. ಭಾನುವಾರ ಬೆಳಗ್ಗೆ ಗ್ರಾಮಸ್ಥರಾದ ಮುಕ್ಕಾಟಿರ ಅಣ್ಣಯ್ಯ ಎಂಬುವರು ದೇವಸ್ಥಾನಕ್ಕೆ ತೆರಳಿದ ಸಂದರ್ಭ ದೇವಸ್ಥಾನದ ಗರ್ಭಗುಡಿ, ಗಣಪತಿ ಗುಡಿಯ ಬಾಗಿಲು ತೆರೆದಿರುವುದನ್ನು ಗಮನಿಸಿ ದೇವಾಲಯದ ಆರ್ಚಕರಾದ ಗಜಾನನ ಭಟ್ ಹಾಗೂ ಗ್ರಾಮಸ್ಥರಿಗೆ ತಿಳಿಸಿದರು.
ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷರಾದ ಅಪ್ಪಚ್ಚೀರ ರಮ್ಮಿ ನಾಣಯ್ಯ ಹಾಗೂ ಪದಾಧಿಕಾರಿಗಳು ಮತ್ತು ಗ್ರಾಮಸ್ಥರು ನಾಪೋಕ್ಲು ಪೊಲೀಸರಿಗೆ ದೂರು ನೀಡಿದರು. ಮಡಿಕೇರಿ ಗ್ರಾಮಾಂತರ ವೃತ್ತ ನಿರೀಕ್ಷಕರಾದ ದಿವಾಕರ್, ನಾಪೋಕ್ಲು ಠಾಣಾಧಿಕಾರಿ ಮಂಚಯ್ಯ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಪೊಲೀಸ್ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಯಗಳನ್ನು ಸಂಪರ್ಕಿಸಿ 9535156490
ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಹಾಗೂ ಮೂರು ಮರಿಗಳು…
ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚಿನ ಮಳೆ ಬೀಳುವ ಸಾಧ್ಯತೆಯಿರುವುದರಿಂದ…
ಉತ್ತರ ಪ್ರದೇಶದ ಆಗ್ರಾ ಬಳಿಯ ಸಿಂಗ್ನಾದಲ್ಲಿ ಅಂತಾರಾಷ್ಟ್ರೀಯ ಆಲೂಗಡ್ಡೆ ದಕ್ಷಿಣ ಏಷ್ಯಾ ಪ್ರಾದೇಶಿಕ…
ರಾಜ್ಯದಲ್ಲಿ ಮಾರಾಟವಾಗುವ 15 ಬಗೆಯ ಔಷಧಗಳು ಹಾಗೂ ಸೌಂದರ್ಯ ವರ್ಧಕಗಳು ಪ್ರಾಮಾಣಿಕೃತ ಗುಣಮಟ್ಟದಲ್ಲಿ…
ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳನ್ನು ಹೊತ್ತ ಆಕ್ಸಿಯಮ್-4 ಮಿಷನ್…