Advertisement
ಅಪರಾಧ

ಕೊಳಕೇರಿ ಶ್ರೀಭಗವತಿ ದೇವಾಲಯದಲ್ಲಿ ಕಳ್ಳತನ

Share

ಮಡಿಕೇರಿ : ನಾಪೋಕ್ಲು ಬಳಿಯ ಈಸ್ಟ್ ಕೊಳಕೇರಿ ಗ್ರಾಮದ ಮೂಟೇರಿ ಭಗವತಿ (ಶ್ರೀ ಉಮಾಮಹೇಶ್ವರಿ) ದೇವಸ್ಥಾನಕ್ಕೆ ನುಗ್ಗಿರುವ ಕಳ್ಳರು ಎರಡು ಬೆಳ್ಳಿಯ ವಿಗ್ರಹಗಳು, 40 ಸಾವಿರ ನಗದು ಸೇರಿದಂತೆ ಒಂದು ಲಕ್ಷಕ್ಕೂ ಅಧಿಕ ಬೆಲೆಯ ವಸ್ತುಗಳನ್ನು ಕಳ್ಳತನ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ಶನಿವಾರ ರಾತ್ರಿ ಕೃತ್ಯ ನಡೆದಿದ್ದು, ದೇವಾಲಯದ ಬಾಗಿಲು ತೆರೆದಿರುವ ಕಳ್ಳರು ಗಣಪತಿ ಗುಡಿಯಲ್ಲಿದ್ದ ಎರಡು ಬೆಳ್ಳಿಯ ವಿಗ್ರಹಗಳು, ಒಂದು ಬೆಳ್ಳಿಯ ಚೆಂಬು, ಒಂದು ಶಂಖ ಸೇರಿದಂತೆ ಭಂಡಾರದಲ್ಲಿದ್ದ ಅಂದಾಜು 40 ಸಾವಿರ ನಗದನ್ನು ದೋಚಿದ್ದಾರೆ. ಭಾನುವಾರ ಬೆಳಗ್ಗೆ ಗ್ರಾಮಸ್ಥರಾದ ಮುಕ್ಕಾಟಿರ ಅಣ್ಣಯ್ಯ ಎಂಬುವರು ದೇವಸ್ಥಾನಕ್ಕೆ ತೆರಳಿದ ಸಂದರ್ಭ ದೇವಸ್ಥಾನದ ಗರ್ಭಗುಡಿ, ಗಣಪತಿ ಗುಡಿಯ ಬಾಗಿಲು ತೆರೆದಿರುವುದನ್ನು ಗಮನಿಸಿ ದೇವಾಲಯದ ಆರ್ಚಕರಾದ ಗಜಾನನ ಭಟ್ ಹಾಗೂ ಗ್ರಾಮಸ್ಥರಿಗೆ ತಿಳಿಸಿದರು.

ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷರಾದ ಅಪ್ಪಚ್ಚೀರ ರಮ್ಮಿ ನಾಣಯ್ಯ ಹಾಗೂ ಪದಾಧಿಕಾರಿಗಳು ಮತ್ತು ಗ್ರಾಮಸ್ಥರು ನಾಪೋಕ್ಲು ಪೊಲೀಸರಿಗೆ ದೂರು ನೀಡಿದರು. ಮಡಿಕೇರಿ ಗ್ರಾಮಾಂತರ ವೃತ್ತ ನಿರೀಕ್ಷಕರಾದ ದಿವಾಕರ್, ನಾಪೋಕ್ಲು ಠಾಣಾಧಿಕಾರಿ ಮಂಚಯ್ಯ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಪೊಲೀಸ್ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಚಂಡಮಾರುತದ ಗಾಳಿಗೂ ಬಗ್ಗಿ ಉಳಿಯುವ ಅಡಿಕೆ ತಳಿ..! ಮೊಹಿತ್‌ನಗರ ತಳಿಗೆ ಹಲವು ರಾಜ್ಯಗಳಲ್ಲಿ ಬೇಡಿಕೆ

ಚಂಡಮಾರುತದ ಗಾಳಿಗೆ ಮುರಿಯದೆ ಬಾಗಿಕೊಂಡು ಉಳಿಯುವ ಮೊಹಿತ್‌ನಗರ ಅಡಿಕೆ ತಳಿಗೆ ಒಡಿಶಾ ಸೇರಿದಂತೆ…

23 minutes ago

ದಕ್ಷಿಣ ಕನ್ನಡದಲ್ಲಿ ಮಳೆ | 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ – ಕಾಸರಗೋಡಿನಲ್ಲೂ ಶಾಲೆಗಳಿಗೆ ರಜೆ

ಭಾರೀ ಮಳೆಯ ಹಿನ್ನೆಲೆಯಲ್ಲಿ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಶಾಲಾ-ಕಾಲೇಜುಗಳಿಗೆ…

45 minutes ago

ಸ್ವಾತಂತ್ರ್ಯ ದಿನಾಚರಣೆ : ಪ್ಲಾಸ್ಟಿಕ್ ಧ್ವಜ ಬಳಸದಂತೆ ಸೂಚನೆ

ಸ್ವಾತಂತ್ರ್ಯ ದಿನಾಚರಣೆ ಸೇರಿದಂತೆ ಪ್ರಮುಖ ರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್‌ನಿಂದ ತಯಾರಿಸಿದ ರಾಷ್ಟ್ರಧ್ವಜಗಳನ್ನು ಬಳಸದಂತೆ…

58 minutes ago

ಮಂಗಳೂರು, ಉಡುಪಿ, ಪುತ್ತೂರಿನಲ್ಲಿ ಉದ್ಯೋಗಾವಕಾಶ- 22 ಹುದ್ದೆಗಳಿಗೆ ಆಗಸ್ಟ್ 11ರಂದು ನೇರ ಸಂದರ್ಶನ

ಮಂಗಳೂರು, ಉಡುಪಿ ಹಾಗೂ ಪುತ್ತೂರಿನಲ್ಲಿ ವಿವಿಧ ಹುದ್ದೆಗಳಿಗೆ ಒಟ್ಟು 22 ಉದ್ಯೋಗಾವಕಾಶಗಳಿದ್ದು, ಆಗಸ್ಟ್…

1 hour ago

ಅನ್ನವೇ ಜೀವನ, ಅನ್ನವೇ ಮೃತ್ಯು

ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…

10 hours ago

ಕೃಷಿ ಕ್ಷೇತ್ರಕ್ಕೆ ಎಥೆನಾಲ್‌ ದೊಡ್ಡ ಅವಕಾಶ

ಎಥೆನಾಲ್‌ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…

10 hours ago