Advertisement
ಅಪರಾಧ

ಕೊಳಕೇರಿ ಶ್ರೀಭಗವತಿ ದೇವಾಲಯದಲ್ಲಿ ಕಳ್ಳತನ

Share

ಮಡಿಕೇರಿ : ನಾಪೋಕ್ಲು ಬಳಿಯ ಈಸ್ಟ್ ಕೊಳಕೇರಿ ಗ್ರಾಮದ ಮೂಟೇರಿ ಭಗವತಿ (ಶ್ರೀ ಉಮಾಮಹೇಶ್ವರಿ) ದೇವಸ್ಥಾನಕ್ಕೆ ನುಗ್ಗಿರುವ ಕಳ್ಳರು ಎರಡು ಬೆಳ್ಳಿಯ ವಿಗ್ರಹಗಳು, 40 ಸಾವಿರ ನಗದು ಸೇರಿದಂತೆ ಒಂದು ಲಕ್ಷಕ್ಕೂ ಅಧಿಕ ಬೆಲೆಯ ವಸ್ತುಗಳನ್ನು ಕಳ್ಳತನ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.

Advertisement

ಶನಿವಾರ ರಾತ್ರಿ ಕೃತ್ಯ ನಡೆದಿದ್ದು, ದೇವಾಲಯದ ಬಾಗಿಲು ತೆರೆದಿರುವ ಕಳ್ಳರು ಗಣಪತಿ ಗುಡಿಯಲ್ಲಿದ್ದ ಎರಡು ಬೆಳ್ಳಿಯ ವಿಗ್ರಹಗಳು, ಒಂದು ಬೆಳ್ಳಿಯ ಚೆಂಬು, ಒಂದು ಶಂಖ ಸೇರಿದಂತೆ ಭಂಡಾರದಲ್ಲಿದ್ದ ಅಂದಾಜು 40 ಸಾವಿರ ನಗದನ್ನು ದೋಚಿದ್ದಾರೆ. ಭಾನುವಾರ ಬೆಳಗ್ಗೆ ಗ್ರಾಮಸ್ಥರಾದ ಮುಕ್ಕಾಟಿರ ಅಣ್ಣಯ್ಯ ಎಂಬುವರು ದೇವಸ್ಥಾನಕ್ಕೆ ತೆರಳಿದ ಸಂದರ್ಭ ದೇವಸ್ಥಾನದ ಗರ್ಭಗುಡಿ, ಗಣಪತಿ ಗುಡಿಯ ಬಾಗಿಲು ತೆರೆದಿರುವುದನ್ನು ಗಮನಿಸಿ ದೇವಾಲಯದ ಆರ್ಚಕರಾದ ಗಜಾನನ ಭಟ್ ಹಾಗೂ ಗ್ರಾಮಸ್ಥರಿಗೆ ತಿಳಿಸಿದರು.

ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷರಾದ ಅಪ್ಪಚ್ಚೀರ ರಮ್ಮಿ ನಾಣಯ್ಯ ಹಾಗೂ ಪದಾಧಿಕಾರಿಗಳು ಮತ್ತು ಗ್ರಾಮಸ್ಥರು ನಾಪೋಕ್ಲು ಪೊಲೀಸರಿಗೆ ದೂರು ನೀಡಿದರು. ಮಡಿಕೇರಿ ಗ್ರಾಮಾಂತರ ವೃತ್ತ ನಿರೀಕ್ಷಕರಾದ ದಿವಾಕರ್, ನಾಪೋಕ್ಲು ಠಾಣಾಧಿಕಾರಿ ಮಂಚಯ್ಯ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಪೊಲೀಸ್ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

51 minutes ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

11 hours ago

ಭಾರೀ ಬಿಸಿ ಹೊಡೆತ..! ಜಗತ್ತಿನ 1 ಬಿಲಿಯನ್ ಜನರ ಬದುಕಿಗೆ ಬಿಸಿ ಹೊಡೆತ

ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…

11 hours ago

ಹವಾಮಾನ ವರದಿ | 25-04-2026 | ಕರಾವಳಿ, ಮಲೆನಾಡಿನಲ್ಲಿ ಗುಡುಗು ಮಳೆ – ಮಳೆ ಹೆಚ್ಚಳ ಯಾವಾಗಿನಿಂದ…?

ರಾಜ್ಯದಲ್ಲಿ ಏಪ್ರಿಲ್ 26ರಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ.…

17 hours ago

ಹವಾಮಾನ ವರದಿ | 24-04-2026 | ಕರಾವಳಿ–ಮಲೆನಾಡು–ಒಳನಾಡಿನಲ್ಲಿ ಮಳೆ ಸೂಚನೆ

ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…

2 days ago

SSLC ಪಾಸ್ ಮಾಡಿದವರಿಗೆ ಸುವರ್ಣಾವಕಾಶ..! ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ

ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶ ಆರಂಭವಾಗಿದೆ.…

2 days ago