ಸುದ್ದಿಗಳು

ಕೊಳಚೆ ನೀರು ಹರಿಯುತ್ತಿದೆ….. ಆರೋಗ್ಯ ಸಮಸ್ಯೆಗೆ ಕಾರಣವಾಗುತ್ತಿದೆ… ಅಧಿಕಾರಿಗಳೇ ಗಮನಹರಿಸುವಿರಾ

Share

ಸುಳ್ಯ: ನಗರ ಪಂಚಾಯತ್ ವ್ಯಾಪ್ತಿಯ ಬಿಡಿಎ ವಾರ್ಡ್ ನ ಬಾಳೆಮಕ್ಕಿ ಎಂಬಲ್ಲಿ ಹೋಟೆಲ್ ಮತ್ತಿತರ ಕಡೆಯಿಂದ ಹರಿಯುವ ಕೊಳಚೆ ನೀರು ಜನವಸತಿ ಪ್ರದೇಶದ ಸಮೀಪದಲ್ಲಿಯೇ ಹರಿದು ತೀವ್ರ ಆರೋಗ್ಯ ಸಮಸ್ಯೆ ಉಂಟಾಗುತಿದೆ. ಈ ಕುರಿತು ಕೂಡಲೇ ಕ್ರ‌ಮಕ್ಕೆ ಆಗ್ರಹಿಸಿ ಸಾರ್ವಜನಿಕರು ನಗರ ಪಂಚಾಯತ್ ಆಡಳಿತಾಧಿಕಾರಿ ಹಾಗು ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಅವರಿಗೆ ದೂರು ನೀಡಲಾಗಿದೆ.

Advertisement
Advertisement

ಒಳಚರಂಡಿಗೆ ಸಂಪರ್ಕ ಇಲ್ಲದೆ ಕೊಳಚೆ ನೀರು ಮನೆಗಳ ಸಮೀಪದಲ್ಲಿ ಹರಿಯುತಿದೆ ಮತ್ತು ಕೊಳಚೆ ನೀರು ಅಲ್ಲಲ್ಲಿ ಶೇಖರಗೊಂಡು ಸೊಳ್ಳೆಗಳು ಬೆಳೆದು ಸಾಂಕ್ರಾಮಿಕ ರೋಗ ಹರಡಲು ಕಾರಣವಾಗುತಿದೆ. ಇಲ್ಲಿ ಸೊಳ್ಳೆಗಳು ಬೆಳೆದು ಮಕ್ಕಳಿಗೆ ಮತ್ತು ಮನೆ ಮಂದಿಗೆ ಜ್ವರ, ವಾಂತಿ, ಭೇದಿ ಮತ್ತಿತರ ಸಾಂಕ್ರಾಮಿಕ ರೋಗಗಳು ಹರಡುತಿದೆ ಎಂದು ಬಾಳೆಮಕ್ಕಿಯ ಅಬ್ದುಲ್ ಲತೀಫ್ ತಹಶೀಲ್ದಾರ್ ರಿಗೆ ದೂರು ನೀಡಿದ್ದಾರೆ. ಚರಂಡಿಯಲ್ಲಿ ಕೊಳಚೆ ನೀರು ಹಲವು ಸಮಯದಿಂದ ಇದೇ ಭಾಗದಲ್ಲಿ ಹರಿಯುತ್ತಿದ್ದು ಇದನ್ನು ಸರಿಪಡಿಸಬೇಕು ಎಂದು ನಗರ ಪಂಚಾಯತ್ ಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಬ್ದುಲ್ ಲತೀಫ್ ಹೇಳುತ್ತಾರೆ. ಅಲ್ಲದೆ ಪ್ರದೇಶದಲ್ಲಿ ದುರ್ನಾತ ಬೀರುತ್ತಿದ್ದು ಮನೆಯಲ್ಲಿ ವಾಸಿಸಲು ಆಗದ ಪರಿಸ್ಥಿತಿ ಉಂಟಾಗಿದೆ ಎಂದು ಎಂದು ಸಾರ್ವಜನಿಕರು ದೂರಿದ್ದಾರೆ.

ಪ್ರತಿಭಟನೆಯ ಎಚ್ಚರಿಕೆ:

ಬಾಳೆಮಕ್ಕಿ ಭಾಗದಲ್ಲಿ ಜನವಸತಿ ಪ್ರದೇಶದಲ್ಲಿ ಕೊಳಚೆ ನೀರು ಹರಿದು ಸುಮಾರು ಆರು ಕುಟುಂಬಗಳಿಗೆ ತೀವ್ರ ಸಮಸ್ಯೆ ಆಗುತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದಿದೆ. ಇದನ್ನು ಕೂಡಲೇ ಸರಿಪಡಿಸದಿದ್ದರೆ ಸಾರ್ವಜನಿಕರನ್ನು ಸೇರಿಸಿ ನಗರ ಪಂಚಾಯತ್ ಎದುರಿನಲ್ಲಿ ಪ್ರತಿಭಟನೆ ನಡೆಸುವುದಾಗಿ ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದಿಕ್ ಕೊಕ್ಕೊ ಹೇಳಿದ್ದಾರೆ. ಈ ಕುರಿತು ಹಲವು ಬಾರಿ ನಗರ ಪಂಚಾಯತ್ ಗೆ ದೂರು ನೀಡಿದರೂ ಸರಿಪಡಿಸಿದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

 

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರೆಂಟ್ ಹೊದ ಕೂಡ್ಲೆ ಬೊಬ್ಬೆ ಹೊಡೆಯೋದು ಯಾಕೆ..!?

ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…

2 hours ago

ಮಳೆ Update | ಕರಾವಳಿ ಜಿಲ್ಲೆಯಲ್ಲಿ ವ್ಯಾಪಕ ಮಳೆ | ಹಲವು ಕಡೆ 100 ಮಿಮೀಗಿಂತಲೂ ಅಧಿಕ ಮಳೆ | ಉಡುಪಿಯಲ್ಲಿ 164 ಮಿಮೀ ಮಳೆ |

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…

3 hours ago

ಬಿತ್ತನೆ ಬೀಜ ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆ

ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…

6 hours ago

ರೈತರು ಉತ್ತಮ ಇಳುವರಿ ಪಡೆಯಲು ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಸೂಚನೆ

ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…

6 hours ago

ಬದುಕು ಪುರಾಣ | ಎಲ್ಲರೊಳಗೂ ಏಕಲವ್ಯನಿದ್ದಾನೆ!

 ‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…

6 hours ago

ಮನೆಯಲ್ಲಿ ಸಂಪತ್ತು, ಸಂತೋಷ ಹೆಚ್ಚಾಗಲು ಮುಖ್ಯ ದ್ವಾರ ಹೀಗಿರಲಿ…

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

6 hours ago