Advertisement
ಸುದ್ದಿಗಳು

ಕೊಳಚೆ ನೀರು ಹರಿಯುತ್ತಿದೆ….. ಆರೋಗ್ಯ ಸಮಸ್ಯೆಗೆ ಕಾರಣವಾಗುತ್ತಿದೆ… ಅಧಿಕಾರಿಗಳೇ ಗಮನಹರಿಸುವಿರಾ

Share

ಸುಳ್ಯ: ನಗರ ಪಂಚಾಯತ್ ವ್ಯಾಪ್ತಿಯ ಬಿಡಿಎ ವಾರ್ಡ್ ನ ಬಾಳೆಮಕ್ಕಿ ಎಂಬಲ್ಲಿ ಹೋಟೆಲ್ ಮತ್ತಿತರ ಕಡೆಯಿಂದ ಹರಿಯುವ ಕೊಳಚೆ ನೀರು ಜನವಸತಿ ಪ್ರದೇಶದ ಸಮೀಪದಲ್ಲಿಯೇ ಹರಿದು ತೀವ್ರ ಆರೋಗ್ಯ ಸಮಸ್ಯೆ ಉಂಟಾಗುತಿದೆ. ಈ ಕುರಿತು ಕೂಡಲೇ ಕ್ರ‌ಮಕ್ಕೆ ಆಗ್ರಹಿಸಿ ಸಾರ್ವಜನಿಕರು ನಗರ ಪಂಚಾಯತ್ ಆಡಳಿತಾಧಿಕಾರಿ ಹಾಗು ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಅವರಿಗೆ ದೂರು ನೀಡಲಾಗಿದೆ.

ಒಳಚರಂಡಿಗೆ ಸಂಪರ್ಕ ಇಲ್ಲದೆ ಕೊಳಚೆ ನೀರು ಮನೆಗಳ ಸಮೀಪದಲ್ಲಿ ಹರಿಯುತಿದೆ ಮತ್ತು ಕೊಳಚೆ ನೀರು ಅಲ್ಲಲ್ಲಿ ಶೇಖರಗೊಂಡು ಸೊಳ್ಳೆಗಳು ಬೆಳೆದು ಸಾಂಕ್ರಾಮಿಕ ರೋಗ ಹರಡಲು ಕಾರಣವಾಗುತಿದೆ. ಇಲ್ಲಿ ಸೊಳ್ಳೆಗಳು ಬೆಳೆದು ಮಕ್ಕಳಿಗೆ ಮತ್ತು ಮನೆ ಮಂದಿಗೆ ಜ್ವರ, ವಾಂತಿ, ಭೇದಿ ಮತ್ತಿತರ ಸಾಂಕ್ರಾಮಿಕ ರೋಗಗಳು ಹರಡುತಿದೆ ಎಂದು ಬಾಳೆಮಕ್ಕಿಯ ಅಬ್ದುಲ್ ಲತೀಫ್ ತಹಶೀಲ್ದಾರ್ ರಿಗೆ ದೂರು ನೀಡಿದ್ದಾರೆ. ಚರಂಡಿಯಲ್ಲಿ ಕೊಳಚೆ ನೀರು ಹಲವು ಸಮಯದಿಂದ ಇದೇ ಭಾಗದಲ್ಲಿ ಹರಿಯುತ್ತಿದ್ದು ಇದನ್ನು ಸರಿಪಡಿಸಬೇಕು ಎಂದು ನಗರ ಪಂಚಾಯತ್ ಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಬ್ದುಲ್ ಲತೀಫ್ ಹೇಳುತ್ತಾರೆ. ಅಲ್ಲದೆ ಪ್ರದೇಶದಲ್ಲಿ ದುರ್ನಾತ ಬೀರುತ್ತಿದ್ದು ಮನೆಯಲ್ಲಿ ವಾಸಿಸಲು ಆಗದ ಪರಿಸ್ಥಿತಿ ಉಂಟಾಗಿದೆ ಎಂದು ಎಂದು ಸಾರ್ವಜನಿಕರು ದೂರಿದ್ದಾರೆ.

ಪ್ರತಿಭಟನೆಯ ಎಚ್ಚರಿಕೆ:

ಬಾಳೆಮಕ್ಕಿ ಭಾಗದಲ್ಲಿ ಜನವಸತಿ ಪ್ರದೇಶದಲ್ಲಿ ಕೊಳಚೆ ನೀರು ಹರಿದು ಸುಮಾರು ಆರು ಕುಟುಂಬಗಳಿಗೆ ತೀವ್ರ ಸಮಸ್ಯೆ ಆಗುತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದಿದೆ. ಇದನ್ನು ಕೂಡಲೇ ಸರಿಪಡಿಸದಿದ್ದರೆ ಸಾರ್ವಜನಿಕರನ್ನು ಸೇರಿಸಿ ನಗರ ಪಂಚಾಯತ್ ಎದುರಿನಲ್ಲಿ ಪ್ರತಿಭಟನೆ ನಡೆಸುವುದಾಗಿ ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದಿಕ್ ಕೊಕ್ಕೊ ಹೇಳಿದ್ದಾರೆ. ಈ ಕುರಿತು ಹಲವು ಬಾರಿ ನಗರ ಪಂಚಾಯತ್ ಗೆ ದೂರು ನೀಡಿದರೂ ಸರಿಪಡಿಸಿದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

2 hours ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

3 hours ago

ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ

ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"

6 hours ago

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ

ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…

15 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?

ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…

16 hours ago

ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!

ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…

22 hours ago