ಸುಳ್ಯ: ನಗರ ಪಂಚಾಯತ್ ವ್ಯಾಪ್ತಿಯ ಬಿಡಿಎ ವಾರ್ಡ್ ನ ಬಾಳೆಮಕ್ಕಿ ಎಂಬಲ್ಲಿ ಹೋಟೆಲ್ ಮತ್ತಿತರ ಕಡೆಯಿಂದ ಹರಿಯುವ ಕೊಳಚೆ ನೀರು ಜನವಸತಿ ಪ್ರದೇಶದ ಸಮೀಪದಲ್ಲಿಯೇ ಹರಿದು ತೀವ್ರ ಆರೋಗ್ಯ ಸಮಸ್ಯೆ ಉಂಟಾಗುತಿದೆ. ಈ ಕುರಿತು ಕೂಡಲೇ ಕ್ರಮಕ್ಕೆ ಆಗ್ರಹಿಸಿ ಸಾರ್ವಜನಿಕರು ನಗರ ಪಂಚಾಯತ್ ಆಡಳಿತಾಧಿಕಾರಿ ಹಾಗು ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಅವರಿಗೆ ದೂರು ನೀಡಲಾಗಿದೆ.
ಒಳಚರಂಡಿಗೆ ಸಂಪರ್ಕ ಇಲ್ಲದೆ ಕೊಳಚೆ ನೀರು ಮನೆಗಳ ಸಮೀಪದಲ್ಲಿ ಹರಿಯುತಿದೆ ಮತ್ತು ಕೊಳಚೆ ನೀರು ಅಲ್ಲಲ್ಲಿ ಶೇಖರಗೊಂಡು ಸೊಳ್ಳೆಗಳು ಬೆಳೆದು ಸಾಂಕ್ರಾಮಿಕ ರೋಗ ಹರಡಲು ಕಾರಣವಾಗುತಿದೆ. ಇಲ್ಲಿ ಸೊಳ್ಳೆಗಳು ಬೆಳೆದು ಮಕ್ಕಳಿಗೆ ಮತ್ತು ಮನೆ ಮಂದಿಗೆ ಜ್ವರ, ವಾಂತಿ, ಭೇದಿ ಮತ್ತಿತರ ಸಾಂಕ್ರಾಮಿಕ ರೋಗಗಳು ಹರಡುತಿದೆ ಎಂದು ಬಾಳೆಮಕ್ಕಿಯ ಅಬ್ದುಲ್ ಲತೀಫ್ ತಹಶೀಲ್ದಾರ್ ರಿಗೆ ದೂರು ನೀಡಿದ್ದಾರೆ. ಚರಂಡಿಯಲ್ಲಿ ಕೊಳಚೆ ನೀರು ಹಲವು ಸಮಯದಿಂದ ಇದೇ ಭಾಗದಲ್ಲಿ ಹರಿಯುತ್ತಿದ್ದು ಇದನ್ನು ಸರಿಪಡಿಸಬೇಕು ಎಂದು ನಗರ ಪಂಚಾಯತ್ ಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಬ್ದುಲ್ ಲತೀಫ್ ಹೇಳುತ್ತಾರೆ. ಅಲ್ಲದೆ ಪ್ರದೇಶದಲ್ಲಿ ದುರ್ನಾತ ಬೀರುತ್ತಿದ್ದು ಮನೆಯಲ್ಲಿ ವಾಸಿಸಲು ಆಗದ ಪರಿಸ್ಥಿತಿ ಉಂಟಾಗಿದೆ ಎಂದು ಎಂದು ಸಾರ್ವಜನಿಕರು ದೂರಿದ್ದಾರೆ.
ಪ್ರತಿಭಟನೆಯ ಎಚ್ಚರಿಕೆ:
ಬಾಳೆಮಕ್ಕಿ ಭಾಗದಲ್ಲಿ ಜನವಸತಿ ಪ್ರದೇಶದಲ್ಲಿ ಕೊಳಚೆ ನೀರು ಹರಿದು ಸುಮಾರು ಆರು ಕುಟುಂಬಗಳಿಗೆ ತೀವ್ರ ಸಮಸ್ಯೆ ಆಗುತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದಿದೆ. ಇದನ್ನು ಕೂಡಲೇ ಸರಿಪಡಿಸದಿದ್ದರೆ ಸಾರ್ವಜನಿಕರನ್ನು ಸೇರಿಸಿ ನಗರ ಪಂಚಾಯತ್ ಎದುರಿನಲ್ಲಿ ಪ್ರತಿಭಟನೆ ನಡೆಸುವುದಾಗಿ ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದಿಕ್ ಕೊಕ್ಕೊ ಹೇಳಿದ್ದಾರೆ. ಈ ಕುರಿತು ಹಲವು ಬಾರಿ ನಗರ ಪಂಚಾಯತ್ ಗೆ ದೂರು ನೀಡಿದರೂ ಸರಿಪಡಿಸಿದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…