Advertisement
ಸುದ್ದಿಗಳು

ಕೊಳಚೆ ನೀರು ಹರಿಯುತ್ತಿದೆ….. ಆರೋಗ್ಯ ಸಮಸ್ಯೆಗೆ ಕಾರಣವಾಗುತ್ತಿದೆ… ಅಧಿಕಾರಿಗಳೇ ಗಮನಹರಿಸುವಿರಾ

Share

ಸುಳ್ಯ: ನಗರ ಪಂಚಾಯತ್ ವ್ಯಾಪ್ತಿಯ ಬಿಡಿಎ ವಾರ್ಡ್ ನ ಬಾಳೆಮಕ್ಕಿ ಎಂಬಲ್ಲಿ ಹೋಟೆಲ್ ಮತ್ತಿತರ ಕಡೆಯಿಂದ ಹರಿಯುವ ಕೊಳಚೆ ನೀರು ಜನವಸತಿ ಪ್ರದೇಶದ ಸಮೀಪದಲ್ಲಿಯೇ ಹರಿದು ತೀವ್ರ ಆರೋಗ್ಯ ಸಮಸ್ಯೆ ಉಂಟಾಗುತಿದೆ. ಈ ಕುರಿತು ಕೂಡಲೇ ಕ್ರ‌ಮಕ್ಕೆ ಆಗ್ರಹಿಸಿ ಸಾರ್ವಜನಿಕರು ನಗರ ಪಂಚಾಯತ್ ಆಡಳಿತಾಧಿಕಾರಿ ಹಾಗು ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಅವರಿಗೆ ದೂರು ನೀಡಲಾಗಿದೆ.

ಒಳಚರಂಡಿಗೆ ಸಂಪರ್ಕ ಇಲ್ಲದೆ ಕೊಳಚೆ ನೀರು ಮನೆಗಳ ಸಮೀಪದಲ್ಲಿ ಹರಿಯುತಿದೆ ಮತ್ತು ಕೊಳಚೆ ನೀರು ಅಲ್ಲಲ್ಲಿ ಶೇಖರಗೊಂಡು ಸೊಳ್ಳೆಗಳು ಬೆಳೆದು ಸಾಂಕ್ರಾಮಿಕ ರೋಗ ಹರಡಲು ಕಾರಣವಾಗುತಿದೆ. ಇಲ್ಲಿ ಸೊಳ್ಳೆಗಳು ಬೆಳೆದು ಮಕ್ಕಳಿಗೆ ಮತ್ತು ಮನೆ ಮಂದಿಗೆ ಜ್ವರ, ವಾಂತಿ, ಭೇದಿ ಮತ್ತಿತರ ಸಾಂಕ್ರಾಮಿಕ ರೋಗಗಳು ಹರಡುತಿದೆ ಎಂದು ಬಾಳೆಮಕ್ಕಿಯ ಅಬ್ದುಲ್ ಲತೀಫ್ ತಹಶೀಲ್ದಾರ್ ರಿಗೆ ದೂರು ನೀಡಿದ್ದಾರೆ. ಚರಂಡಿಯಲ್ಲಿ ಕೊಳಚೆ ನೀರು ಹಲವು ಸಮಯದಿಂದ ಇದೇ ಭಾಗದಲ್ಲಿ ಹರಿಯುತ್ತಿದ್ದು ಇದನ್ನು ಸರಿಪಡಿಸಬೇಕು ಎಂದು ನಗರ ಪಂಚಾಯತ್ ಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಬ್ದುಲ್ ಲತೀಫ್ ಹೇಳುತ್ತಾರೆ. ಅಲ್ಲದೆ ಪ್ರದೇಶದಲ್ಲಿ ದುರ್ನಾತ ಬೀರುತ್ತಿದ್ದು ಮನೆಯಲ್ಲಿ ವಾಸಿಸಲು ಆಗದ ಪರಿಸ್ಥಿತಿ ಉಂಟಾಗಿದೆ ಎಂದು ಎಂದು ಸಾರ್ವಜನಿಕರು ದೂರಿದ್ದಾರೆ.

ಪ್ರತಿಭಟನೆಯ ಎಚ್ಚರಿಕೆ:

ಬಾಳೆಮಕ್ಕಿ ಭಾಗದಲ್ಲಿ ಜನವಸತಿ ಪ್ರದೇಶದಲ್ಲಿ ಕೊಳಚೆ ನೀರು ಹರಿದು ಸುಮಾರು ಆರು ಕುಟುಂಬಗಳಿಗೆ ತೀವ್ರ ಸಮಸ್ಯೆ ಆಗುತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದಿದೆ. ಇದನ್ನು ಕೂಡಲೇ ಸರಿಪಡಿಸದಿದ್ದರೆ ಸಾರ್ವಜನಿಕರನ್ನು ಸೇರಿಸಿ ನಗರ ಪಂಚಾಯತ್ ಎದುರಿನಲ್ಲಿ ಪ್ರತಿಭಟನೆ ನಡೆಸುವುದಾಗಿ ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದಿಕ್ ಕೊಕ್ಕೊ ಹೇಳಿದ್ದಾರೆ. ಈ ಕುರಿತು ಹಲವು ಬಾರಿ ನಗರ ಪಂಚಾಯತ್ ಗೆ ದೂರು ನೀಡಿದರೂ ಸರಿಪಡಿಸಿದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 19-04-2026 | ಇಂದಿನಿಂದ ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಆರಂಭ

ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…

7 hours ago

ಜಾಗತಿಕ ಬಿಕ್ಕಟ್ಟಿನ ಪರಿಣಾಮ : ಬೆಂಗಳೂರಿಗೆ ಆಟೋ LPG ಪೂರೈಕೆ 300% ಹೆಚ್ಚಿಸಿದ ಇಂಡಿಯನ್ ಆಯಿಲ್

ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…

11 hours ago

ಕೃಷಿಗೆ ಹೊಸ ಚೈತನ್ಯ- ದೂರದರ್ಶನ ಚಂದನದಿಂದ “ರೈತ ರತ್ನ” ರಿಯಾಲಿಟಿ ಶೋ ಆರಂಭ

“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…

11 hours ago

ಮಿಜೋರಾಂನಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟಕ್ಕೆ ತಡೆ – ₹54.88 ಲಕ್ಷ ಮೌಲ್ಯದ 98 ಚೀಲ ವಶ

ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…

21 hours ago

ಹವಾಮಾನ ವರದಿ | 18-04-2026 | ರಾಜ್ಯದ ಬಹುತೇಕ ಕಡೆ ಸೆಖೆ ಮುಂದುವರಿಕೆ – ಏಪ್ರಿಲ್ 19 ರಿಂದ ಕರಾವಳಿಯಲ್ಲಿ ಮಳೆ ಆರಂಭ!

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…

1 day ago

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

1 day ago