Advertisement
MIRROR FOCUS

ಕೊಳವೆಬಾವಿಗೆ ನೀರಿಂಗಿಸಲು ಯೋಜನಾಬದ್ಧ ವ್ಯವಸ್ಥೆ ಮಾಡಿದ ಕೃಷಿಕ

Share

ಜಲಮರುಪೂರಣ ಈಗ ಎಲ್ಲೆಡೆ ಕೇಳಿಬರುತ್ತಿರುವ ಮಾತು. ಸುಳ್ಯ ತಾಲೂಕಿನ ಪಂಜದ ಕೃಷಿಕ ಹಾಗೂ ಉದ್ಯಮಿ ಸಂಗಾತಿ ಸ್ಟೋರ್ಸ್ ನ ವೆಂಕಟ್ರಮಣ ಭಟ್ ಯೋಜನಾಬದ್ಧವಾಗಿ ಕೊಳವೆಬಾವಿಗೆ ಜಲಮರುಪೂರಣ ಮಾಡುತ್ತಿದ್ದಾರೆ. ಇದೀಗ ಈ ವ್ಯವಸ್ಥೆ ಗಮನ ಸೆಳೆದಿದೆ.  ನೀರಿಗಾಗಿ 24 ಕೊಳವೆ ಬಾವಿ ತೆಗೆದು ಅದರಲ್ಲಿ 3 ಕೊಳವೆಬಾವಿಯಲ್ಲಿ ಮಾತ್ರವೇ ನೀರು ಕಾಣುತ್ತಿದೆ. ಉಳಿದವೆಲ್ಲಾ ಬತ್ತಿದೆ. ಇದೀಗ ಜಲಮರುಪೂರಣ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಮಳೆ ನೀರು ಒಂದಾದ ನಂತರ ಒಂದು ಕೊಳವೆಬಾವಿಗೆ ತುಂಬುತ್ತದೆ. ಇಲ್ಲಿ ಬಳಕೆ ಮಾಡಿರುವ ಫಿಲ್ಟರ್ ಹಾಗೂ ಜಲಮರುಪೂರಣ ವ್ಯವಸ್ಥೆ  ಮಾದರಿ ಎನಿಸಿದೆ.


ಪಂಜ: ಜಲಮರುಪೂರಣ ಆಗಲೇ ಬೇಕು. ಇದಕ್ಕೆ ಇಂಗುಗುಂಡಿ ಒಂದು ಮಾರ್ಗವಾದರೆ ಇತರ ಹಲವಾರು ಮಾರ್ಗಗಳು ಇವೆ. ಇದರಲ್ಲಿ ಕೊಳವೆ ಬಾವಿ ರೀಜಾರ್ಜ್ ಕೂಡಾ ಒಂದು ಉಪಾಯ. ಬೋರ್ ವೆಲ್ ರೀಚಾರ್ಜ್ ಮಾಡುವ ಹಲವಾರು ಮಂದಿ ಇದ್ದಾರೆ. ಆದರೆ ಪಂಜದ ಸಂಗಾತಿ ಸ್ಟೋರ್ಸ್ ನ ವೆಂಕಟ್ರಮಣ ಭಟ್ ಅವರ ಯೋಜನಾಬದ್ಧ ವ್ಯವಸ್ಥೆ ಗಮನಸೆಳೆದಿದೆ.

ವೆಂಕಟ್ರಮಣ ಭಟ್ ಅವರು ಇದುವರೆಗೆ 24 ಕೊಳವೆ ಬಾವಿ ತೆಗೆದಿದ್ದಾರೆ. ಅದರಲ್ಲಿ ಕೆಲವುದರಲ್ಲಿ ಮಾತ್ರಾ ನೀರಿದೆ. ಬೇಸಗೆಯಲ್ಲಿ  ತೋಟ ಒಣಗುತ್ತದೆ ಎಂದು ಅನಿಸಿದ ತಕ್ಷಣವೇ ಕೊಳವೆಬಾವಿ ತೆಗೆಯುತ್ತಿದ್ದರು. ಈ ವರ್ಷ ಅವರಿಗೆ ಕೊಳವೆಬಾವಿ ರೀಜಾರ್ಜ್ ಮಾಡಬೇಕು ಎಂದು ಅನಿಸಿತು. ಕೊಳವೆ ಬಾವಿ ತೆಗೆಯುವುದೇ ಪರಿಹಾರವಲ್ಲ. ತೆಗೆದ ನೀರನ್ನು ತುಂಬಿಸಬೇಕು. ಅಂತರ್ಜಲ ತುಂಬಿಸುವುದೂ ನಮ್ಮ ಕರ್ತವ್ಯ ಎಂದು 24 ಕೊಳವೆ ಬಾವಿಗೂ ರೀಜಾರ್ಜ್ ಮಾಡಲು ಯೋಜನೆ ಹಾಕಿಕೊಂಡರು. ಇದರ ಫಲವಾಗಿ ಈ ವರ್ಷ ಕನಿಷ್ಟ 3 ಕೊಳವೆಬಾವಿಗೆ ರೀಚಾರ್ಜ್ ಮಾಡುವ ಉದ್ದೇಶ ಇರಿಸಿಕೊಂಡು ಕೆಲಸಕ್ಕೆ ಇಳಿದರು.

 

 

 

ಮನೆಯ ಛಾವಣಿ ನೀರನ್ನು ಸಂಗ್ರಹ ಮಾಡಿ ಅದಕ್ಕೆ ವಿಶೇಷ ಮಾದರಿಯ ಪಿಲ್ಟರ್ ಅಳವಡಿಕೆ ಮಾಡಿ ಆ ನೀರು ಮೊದಲನೇ ಕೊಳವೆಬಾವಿಗೆ ಸೇರುತ್ತದೆ. ಆ ಕೊಳವೆಬಾವಿ ಎಲ್ಲಾ ನೀರನ್ನು ಏಕಕಾಲಕ್ಕೆ ತೆಗೆದುಕೊಳ್ಳುವುದಿಲ್ಲ. ಕೊಂಚ ಕೊಂಚವೇ ರೀಜಾರ್ಜ್ ಆಗುತ್ತದೆ. ಹೆಚ್ಚಾದ ನೀರು ಕೊಳವೆಬಾವಿಯ ಮೇಲ್ಭಾಗದಲ್ಲಿ ತೆಗೆದು ತೂತಿನ ಮೂಲಕ ನೀರು ಇನ್ನೊಂದು ಕೊಳವೆಬಾವಿಗೆ ಹೋಗುತ್ತದೆ. ಅದರಲ್ಲೂ ಹೆಚ್ಚಾದ ನೀರು ಮತ್ತೊಂದು ಕೊಳವೆಬಾವಿಗೆ ಹೋಗುತ್ತದೆ. ಎಲ್ಲವೂ ಅಂಡರ್ ಗ್ರೌಂಡ್ ಪೈಪ್ ಮೂಲಕ ವ್ಯವಸ್ಥೆ. ಇದು ಅವರ ಯೋಜನೆ.

 

 

ಮನೆಯ ಛಾವಣಿಗೆ ಅಳವಡಿಕೆ ಮಾಡಿರುವ ಪಿಲ್ಟರ್ ಕೂಡಾ ಆಧುನಿಕ ವಿನ್ಯಾಸ ಹಾಗೂ ವ್ಯವಸ್ಥೆ ಒಳಗೊಂಡಿದೆ ಎಂದು ಅವರು ಹೇಳುತ್ತಾರೆ. ಮಳೆ ಬಂದಾಗ ಛಾವಭಿಯಲ್ಲಿದ್ದ ಕಸ, ಕಡ್ಡಿಗಳು ನೀರಿನ ಜೊತೆ ಬರುತ್ತದೆ. ಇದು ಕೊಳವೆಬಾವಿಗೆ ಸೇರದಂತೆ ಪಿಲ್ಟರ್ ಇದೆ. ಅದರ ಜೊತೆಗೆ ಪಿಲ್ಟರ್ ಕೆಳಭಾಗದಲ್ಲಿ ಟ್ಯಾಪ್ ಇದೆ. ಇದು ಬಿಟ್ಟಿದ್ದರೆ ಸೆಲ್ಫ್ ಕ್ಲೀನಿಂಗ್ ಆಗುತ್ತದೆ ಎನ್ನುತ್ತಾರೆ ಅವರು. ಇಲ್ಲಿ ಅಲ್ಪ ಪ್ರಮಾಣದ ನೀರು ಭೂಮಿಗೆ ಹೋದರೂ ಪರವಾಗಿಲ್ಲ. ಆದರೆ ಸ್ವಚ್ಛವಾದ ನೀರು ಕೊಳವೆಬಾವಿಗೆ ಇಳಿಯುತ್ತದೆ ಎಂದು ಹೇಳುತ್ತಾರೆ ವೆಂಕಟ್ರಮಣ ಭಟ್. ಇದೀಗ ಈ ಮಾದರಿಯ ಫಿಲ್ಟರ್ ಕೂಡಾ ಗಮನಸೆಳೆದಿದೆ.

ವೆಂಕಟ್ರಮಣ ಭಟ್

ವೆಂಕಟ್ರಮಣ ಭಟ್ ಹೇಳುವ ಪ್ರಕಾರ ಪ್ರತಿಯೊಬ್ಬರೂ ಜಲಪಮರುಪೂರಣ ಮಾಡಬೇಕು. ನಾನು ಅನೇಕ ವರ್ಷಗಳಿಂದ ಭೂಮಿಯ ಒಳಗಿದ್ದ ನೀರು ತೆಗೆದೆ. ನಿರಂತರವಾಗಿ ಕೊಳವೆಬಾವಿ ತೆಗೆದೆ. ಈಚೆಗೆ ತೆಗೆದ ಕೊಳವೆಬಾವಿಯಲ್ಲಿ ಉತ್ತಮ ನೀರಿತ್ತು. ಆದರೆ ನಂತರ ಕಡಿಮೆಯಾಗುತ್ತಾ ಸಾಗಿದೆ. ಈಗ ಜ್ಞಾನೋದಯವಾಗಿದೆ, ನಾವು ತೆಗೆದ ನೀರನ್ನು ಭೂಮಿಗೆ ಮತ್ತೆ ತುಂಬಿಸಲೇಬೇಕು.ಈ ರೀತಿ ಮಾಡುವುದರಿಂದ ನನಗೆ ಮಾತ್ರಾ ಪ್ರಯೋಜನ ಎಂದು ಭಾವಿಸಬಾರದು. ಇದೊಂದು ಸಾಮಾಜಿಕ ಕಾರ್ಯ ಎಂದು ಈ ಕೆಲಸ ಮಾಡಬೇಕು,  ಈ ಮೂಲಕ ಭೂಮಿಯ  ಋಣ ತೀರಿಸಬೇಕು ಎನ್ನುತ್ತಾರೆ.

 

 

ಅವರೇ ಲೆಕ್ಕ ಹಾಕಿ ಹೇಳುವ ಪ್ರಕಾರ

1 ಮೀಟರ್ ಪ್ರದೇಶದಲ್ಲಿ (ಸುಮಾರು10*10) ಸರಾಸರಿ ವರ್ಷದಲ್ಲಿ (ಜೂನ್-ಜೂನ್) 4500 ಲೀಟರ್ ಮಳೆ ನೀರು ಸಂಗ್ರಹವಾಗುತ್ತದೆ. ಒಬ್ಬನಿಗೆ ಒಂದು ದಿನಕ್ಕೆ ಸರಾಸರಿ 90 ರಿಂದ 100 ಲೀಟರ್ ನೀರು ಬೇಕಾಗುತ್ತದೆ. ಹೀಗಾಗಿ ಒಂದು ವರ್ಷ ಸಂಗ್ರಹವಾದ ಮಳೆ ನೀರು ಒಬ್ಬ ವ್ಯಕ್ತಿಗೆ 45 ದಿನಕ್ಕೆ ಸಾಕಾಗಬಹುದು.  ಈ ಪ್ರಕಾರ ವರ್ಷಕ್ಕೆ ಎಷ್ಟು ನೀರು ಬೇಕಾಗುತ್ತದೆ ಎನ್ನುವುದನ್ನು ಲೆಕ್ಕ ಹಾಕಿ ಅಷ್ಟು  ಪ್ರದೇಶದ ನೀರು ಸಂಗ್ರಹ ಮಾಡಿ ಬಳಕೆ ಮಾಡಬಹುದು ಎನ್ನುತ್ತಾರೆ ವೆಂಕಟ್ರಮಣ ಭಟ್.

 

 

 

ಜಲಮರುಪೂರಣದ ಬಗ್ಗೆ ಯಾವುದೇ ಸಂದರ್ಭದಲ್ಲಿ ಉಚಿತ ಮಾಹಿತಿ ನೀಡಲು ವೆಂಕಟ್ರಮಣ ಭಟ್ ಅವರು ಸಿದ್ಧರಿದ್ದಾರೆ. ಈ ಬಗ್ಗೆ ಕರೆ ಮಾಡಿ ನಂತರ ಭೇಟಿ ನೀಡಬಹುದು ಎಂದು ಅವರ ಸಂಪರ್ಕ ಸಂಖ್ಯೆ : 9686477505

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ

ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…

12 hours ago

Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ

18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…

12 hours ago

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…

13 hours ago

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

21 hours ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

21 hours ago

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

2 days ago