Advertisement
ಸುದ್ದಿಗಳು

ಕೊಳವೆ ಬಾವಿಯಲ್ಲಿ ಕಲುಷಿತ ಜಲ ಪತ್ತೆ : ನೀರನ್ನು ಬಳಸದಂತೆ ಕೂಡಿಗೆ ಶಾಲೆಗೆ ಸೂಚನೆ

Share

ಮಡಿಕೇರಿ : ಕೂಡಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಮೂರು ವರ್ಷಗಳ ಹಿಂದೆ ಕೊರೆಸಲಾಗಿರುವ ಕೊಳವೆ ಬಾವಿಯಲ್ಲಿನ ನೀರು ಕಲುಷಿತಗೊಂಡಿದ್ದು, ಈ ನೀರನ್ನು ಕುಡಿಯಲು ಉಪಯೋಗಿಸಬಾರದೆಂದು ಆರೋಗ್ಯ ಇಲಾಖೆ ಅಧಿಕಾರಿಗಳು ಶಾಲೆಯ ಮುಖ್ಯಸ್ಥರಿಗೆ ಹಾಗೂ ಗ್ರಾ.ಪಂ ಗೆ ತಿಳಿಸಿದ್ದಾರೆ.

ಆರೋಗ್ಯ ಇಲಾಖೆಯವರು ಪ್ರತಿವರ್ಷದಂತೆ ಆ ವ್ಯಾಪ್ತಿಯ ಕೊಳವೆ ಬಾವಿಗಳ ನೀರನ್ನು ಪ್ರಯೋಗಾಲಯದಲ್ಲಿ ಪರೀಕ್ಷಿಸಿ, ಕುಡಿಯಲು ಯೋಗ್ಯವೇ ಅಥವಾ ಯೋಗ್ಯವಾಗಲ್ಲವೆ ಎಂಬುದನ್ನು ತಿಳಿಸುತ್ತಾರೆ. ಅದರಂತೆ ಕಳೆದ ತಿಂಗಳಲ್ಲಿ ಕೂಡಿಗೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿರುವ ಕೊಳವೆ ಬಾವಿಯ ನೀರನ್ನು ಪರೀಕ್ಷಿಸಲಾಗಿ, ನೀರು ಕುಡಿಯಲು ಯೋಗ್ಯವಾಗಿಲ್ಲ ಕಲುಷಿತಗೊಂಡಿದ್ದು, ಶಾಲೆಯಲ್ಲಿ ಕುಡಿಯಲು ಹಾಗೂ ಆಹಾರ ತಯಾರಿಸಲು ಬಳಸಬಾರದೆಂದು ಸೂಚಿಸಿದ್ದರು.

ಆದರೂ, ಈ ಕೊಳವೆ ಬಾವಿಯ ನೀರನ್ನು ಬಳಸುತ್ತಿದ್ದ ಹಿನ್ನೆಲೆಯಲ್ಲಿ ಕಳೆದ ಎರಡು ದಿನಗಳ ಹಿಂದೆ ಆರೋಗ್ಯ ಇಲಾಖೆಯವರು ಮತ್ತೊಮ್ಮೆ ಪ್ರಯೋಗಾಲಯದಲ್ಲಿ ನೀರನ್ನು ಪರೀಕ್ಷಿಸಿ ಕಲುಷಿತಗೊಂಡು ಕುಡಿಯಲು ಯೋಗ್ಯವಲ್ಲದ ನೀರಾಗಿರುವುದನ್ನು ಮತ್ತೊಮ್ಮೆ ದೃಢೀಕರಿಸಿದರು. ಶಾಲೆಯ ಮುಖ್ಯೋಪಾಧ್ಯಾಯರಿಗೆ ವಿಷಯ ತಿಳಿಸಿ, ವಿದ್ಯಾರ್ಥಿಗಳಿಗೆ ಕುಡಿಯಲು ಹಾಗೂ ಆಹಾಯ ತಯಾರಿಸಲು ಈ ನೀರನ್ನು ಬಳಸದಂತೆ ಸೂಚಿಸಿದ್ದಾರೆ.

ಕೊಳವೆ ಬಾವಿಯಲ್ಲಿ ಕಲುಷಿತ ನೀರು ದೊರೆಯುತ್ತಿರುವ ಬಗ್ಗೆ ಗ್ರಾ.ಪಂ ಈಗಾಗಲೇ ಜಿ.ಪಂ ಗಮನ ಸೆಳೆದಿದೆ ಎಂದು ಗ್ರಾ.ಪಂ ಅಧಿಕಾರಿಗಳು ತಿಳಿಸಿದರು. ಸ್ಥಳೀಯ ಎರಡು ಬಡಾವಣೆಗಳಿಗೂ ಇದೇ ಕೊಳವೆ ಬಾವಿಯ ನೀರು ಸರಬರಾಜಾಗುತ್ತಿದ್ದು, ಇಲ್ಲಿನ ನಿವಾಸಿಗಳಿಗೂ ನೀರನ್ನು ಬಳಸದಂತೆ ತಿಳಿಸಲಾಗಿದೆ ಎಂದರು. ಶುದ್ಧ ಕುಡಿಯುವ ನೀರು ದೊರೆಯುವಲ್ಲಿಯವರೆಗೆ ಈ ಕೊಳವೆ ಬಾವಿಯ ನೀರನ್ನು ಶಾಲೆಯ ಚಟುವಟಿಕೆಗಳಿಗೆ ಮತ್ತು ವಿದ್ಯಾರ್ಥಿಗಳಿಗೆ ಬಳಕೆ ಮಾಡಲು ಅವಕಾಶ ನೀಡುವುದಿಲ್ಲವೆಂದು ಶಾಲಾ ಮುಖ್ಯ ಶಿಕ್ಷಕರು ಸ್ಪಷ್ಟ ಪಡಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

17 hours ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

17 hours ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

1 day ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

2 days ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

2 days ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

2 days ago