Advertisement
ಸುದ್ದಿಗಳು

ಕೊಳವೆ ಬಾವಿಯಲ್ಲಿ ಕಲುಷಿತ ಜಲ ಪತ್ತೆ : ನೀರನ್ನು ಬಳಸದಂತೆ ಕೂಡಿಗೆ ಶಾಲೆಗೆ ಸೂಚನೆ

Share

ಮಡಿಕೇರಿ : ಕೂಡಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಮೂರು ವರ್ಷಗಳ ಹಿಂದೆ ಕೊರೆಸಲಾಗಿರುವ ಕೊಳವೆ ಬಾವಿಯಲ್ಲಿನ ನೀರು ಕಲುಷಿತಗೊಂಡಿದ್ದು, ಈ ನೀರನ್ನು ಕುಡಿಯಲು ಉಪಯೋಗಿಸಬಾರದೆಂದು ಆರೋಗ್ಯ ಇಲಾಖೆ ಅಧಿಕಾರಿಗಳು ಶಾಲೆಯ ಮುಖ್ಯಸ್ಥರಿಗೆ ಹಾಗೂ ಗ್ರಾ.ಪಂ ಗೆ ತಿಳಿಸಿದ್ದಾರೆ.

ಆರೋಗ್ಯ ಇಲಾಖೆಯವರು ಪ್ರತಿವರ್ಷದಂತೆ ಆ ವ್ಯಾಪ್ತಿಯ ಕೊಳವೆ ಬಾವಿಗಳ ನೀರನ್ನು ಪ್ರಯೋಗಾಲಯದಲ್ಲಿ ಪರೀಕ್ಷಿಸಿ, ಕುಡಿಯಲು ಯೋಗ್ಯವೇ ಅಥವಾ ಯೋಗ್ಯವಾಗಲ್ಲವೆ ಎಂಬುದನ್ನು ತಿಳಿಸುತ್ತಾರೆ. ಅದರಂತೆ ಕಳೆದ ತಿಂಗಳಲ್ಲಿ ಕೂಡಿಗೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿರುವ ಕೊಳವೆ ಬಾವಿಯ ನೀರನ್ನು ಪರೀಕ್ಷಿಸಲಾಗಿ, ನೀರು ಕುಡಿಯಲು ಯೋಗ್ಯವಾಗಿಲ್ಲ ಕಲುಷಿತಗೊಂಡಿದ್ದು, ಶಾಲೆಯಲ್ಲಿ ಕುಡಿಯಲು ಹಾಗೂ ಆಹಾರ ತಯಾರಿಸಲು ಬಳಸಬಾರದೆಂದು ಸೂಚಿಸಿದ್ದರು.

ಆದರೂ, ಈ ಕೊಳವೆ ಬಾವಿಯ ನೀರನ್ನು ಬಳಸುತ್ತಿದ್ದ ಹಿನ್ನೆಲೆಯಲ್ಲಿ ಕಳೆದ ಎರಡು ದಿನಗಳ ಹಿಂದೆ ಆರೋಗ್ಯ ಇಲಾಖೆಯವರು ಮತ್ತೊಮ್ಮೆ ಪ್ರಯೋಗಾಲಯದಲ್ಲಿ ನೀರನ್ನು ಪರೀಕ್ಷಿಸಿ ಕಲುಷಿತಗೊಂಡು ಕುಡಿಯಲು ಯೋಗ್ಯವಲ್ಲದ ನೀರಾಗಿರುವುದನ್ನು ಮತ್ತೊಮ್ಮೆ ದೃಢೀಕರಿಸಿದರು. ಶಾಲೆಯ ಮುಖ್ಯೋಪಾಧ್ಯಾಯರಿಗೆ ವಿಷಯ ತಿಳಿಸಿ, ವಿದ್ಯಾರ್ಥಿಗಳಿಗೆ ಕುಡಿಯಲು ಹಾಗೂ ಆಹಾಯ ತಯಾರಿಸಲು ಈ ನೀರನ್ನು ಬಳಸದಂತೆ ಸೂಚಿಸಿದ್ದಾರೆ.

ಕೊಳವೆ ಬಾವಿಯಲ್ಲಿ ಕಲುಷಿತ ನೀರು ದೊರೆಯುತ್ತಿರುವ ಬಗ್ಗೆ ಗ್ರಾ.ಪಂ ಈಗಾಗಲೇ ಜಿ.ಪಂ ಗಮನ ಸೆಳೆದಿದೆ ಎಂದು ಗ್ರಾ.ಪಂ ಅಧಿಕಾರಿಗಳು ತಿಳಿಸಿದರು. ಸ್ಥಳೀಯ ಎರಡು ಬಡಾವಣೆಗಳಿಗೂ ಇದೇ ಕೊಳವೆ ಬಾವಿಯ ನೀರು ಸರಬರಾಜಾಗುತ್ತಿದ್ದು, ಇಲ್ಲಿನ ನಿವಾಸಿಗಳಿಗೂ ನೀರನ್ನು ಬಳಸದಂತೆ ತಿಳಿಸಲಾಗಿದೆ ಎಂದರು. ಶುದ್ಧ ಕುಡಿಯುವ ನೀರು ದೊರೆಯುವಲ್ಲಿಯವರೆಗೆ ಈ ಕೊಳವೆ ಬಾವಿಯ ನೀರನ್ನು ಶಾಲೆಯ ಚಟುವಟಿಕೆಗಳಿಗೆ ಮತ್ತು ವಿದ್ಯಾರ್ಥಿಗಳಿಗೆ ಬಳಕೆ ಮಾಡಲು ಅವಕಾಶ ನೀಡುವುದಿಲ್ಲವೆಂದು ಶಾಲಾ ಮುಖ್ಯ ಶಿಕ್ಷಕರು ಸ್ಪಷ್ಟ ಪಡಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಯನಾಡಿನಲ್ಲಿ ಮತ್ತೆ ಭೂಕುಸಿತ ಭೀತಿ- ಸುರಂಗ ಯೋಜನಾ ಸ್ಥಳದಲ್ಲಿ ಮಣ್ಣು ಕುಸಿತ, ಹಲವರು ಸಿಲುಕಿರುವ ಶಂಕೆ

ವಯನಾಡಿನ ಮೆಪ್ಪಾಡಿ ಸಮೀಪ ಸುರಂಗ ಯೋಜನಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ…

2 hours ago

ಹವಾಮಾನ ವರದಿ | 07-07-2026 | ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ – ಜುಲೈ 11 ರಿಂದ ಮಳೆ ತೀವ್ರ ಇಳಿಕೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ…

3 hours ago

ತೂಗುಸೇತುವೆಗಳ ಸರದಾರ ಡಾ. ಗಿರೀಶ್‌ ಭಾರದ್ವಾಜ್‌ ಅವರಿಗೆ ಗ್ರಾಮೀಣ ಭಾರತದ ಭಾವಪೂರ್ಣ ನಮನ

ತೂಗುಸೇತುವೆಗಳ ಮೂಲಕ ಸಾವಿರಾರು ಗ್ರಾಮಗಳ ಬದುಕನ್ನು ಜೋಡಿಸಿದ ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ಗೆ…

3 hours ago

ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ ನಿಧನ – ‘ತೂಗುಸೇತುವೆಗಳ ಸರದಾರ’ ಇನ್ನಿಲ್ಲ

ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್‌ ಭಾರದ್ವಾಜ್‌ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…

7 hours ago

ಸಂಕಷ್ಟದಿಂದ ರೈತರನ್ನು ರಕ್ಷಿಸುವ ಶಕ್ತಿ ಗೋ ಆಧಾರಿತ ಆರ್ಥಿಕತೆಗಿದೆ – ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್

ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…

7 hours ago

ಜೂನ್‌ನಲ್ಲಿ 40% ಮಳೆ ಕೊರತೆ – ಜುಲೈನಲ್ಲಿ ಮುಂಗಾರು ಭರ್ಜರಿ..! ದೇಶಾದ್ಯಂತ ಮಳೆ ಚುರುಕು

ಜೂನ್‌ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…

18 hours ago