ಮಡಿಕೇರಿ : ಕೂಡಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಮೂರು ವರ್ಷಗಳ ಹಿಂದೆ ಕೊರೆಸಲಾಗಿರುವ ಕೊಳವೆ ಬಾವಿಯಲ್ಲಿನ ನೀರು ಕಲುಷಿತಗೊಂಡಿದ್ದು, ಈ ನೀರನ್ನು ಕುಡಿಯಲು ಉಪಯೋಗಿಸಬಾರದೆಂದು ಆರೋಗ್ಯ ಇಲಾಖೆ ಅಧಿಕಾರಿಗಳು ಶಾಲೆಯ ಮುಖ್ಯಸ್ಥರಿಗೆ ಹಾಗೂ ಗ್ರಾ.ಪಂ ಗೆ ತಿಳಿಸಿದ್ದಾರೆ.
ಆರೋಗ್ಯ ಇಲಾಖೆಯವರು ಪ್ರತಿವರ್ಷದಂತೆ ಆ ವ್ಯಾಪ್ತಿಯ ಕೊಳವೆ ಬಾವಿಗಳ ನೀರನ್ನು ಪ್ರಯೋಗಾಲಯದಲ್ಲಿ ಪರೀಕ್ಷಿಸಿ, ಕುಡಿಯಲು ಯೋಗ್ಯವೇ ಅಥವಾ ಯೋಗ್ಯವಾಗಲ್ಲವೆ ಎಂಬುದನ್ನು ತಿಳಿಸುತ್ತಾರೆ. ಅದರಂತೆ ಕಳೆದ ತಿಂಗಳಲ್ಲಿ ಕೂಡಿಗೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿರುವ ಕೊಳವೆ ಬಾವಿಯ ನೀರನ್ನು ಪರೀಕ್ಷಿಸಲಾಗಿ, ನೀರು ಕುಡಿಯಲು ಯೋಗ್ಯವಾಗಿಲ್ಲ ಕಲುಷಿತಗೊಂಡಿದ್ದು, ಶಾಲೆಯಲ್ಲಿ ಕುಡಿಯಲು ಹಾಗೂ ಆಹಾರ ತಯಾರಿಸಲು ಬಳಸಬಾರದೆಂದು ಸೂಚಿಸಿದ್ದರು.
ಆದರೂ, ಈ ಕೊಳವೆ ಬಾವಿಯ ನೀರನ್ನು ಬಳಸುತ್ತಿದ್ದ ಹಿನ್ನೆಲೆಯಲ್ಲಿ ಕಳೆದ ಎರಡು ದಿನಗಳ ಹಿಂದೆ ಆರೋಗ್ಯ ಇಲಾಖೆಯವರು ಮತ್ತೊಮ್ಮೆ ಪ್ರಯೋಗಾಲಯದಲ್ಲಿ ನೀರನ್ನು ಪರೀಕ್ಷಿಸಿ ಕಲುಷಿತಗೊಂಡು ಕುಡಿಯಲು ಯೋಗ್ಯವಲ್ಲದ ನೀರಾಗಿರುವುದನ್ನು ಮತ್ತೊಮ್ಮೆ ದೃಢೀಕರಿಸಿದರು. ಶಾಲೆಯ ಮುಖ್ಯೋಪಾಧ್ಯಾಯರಿಗೆ ವಿಷಯ ತಿಳಿಸಿ, ವಿದ್ಯಾರ್ಥಿಗಳಿಗೆ ಕುಡಿಯಲು ಹಾಗೂ ಆಹಾಯ ತಯಾರಿಸಲು ಈ ನೀರನ್ನು ಬಳಸದಂತೆ ಸೂಚಿಸಿದ್ದಾರೆ.
ಕೊಳವೆ ಬಾವಿಯಲ್ಲಿ ಕಲುಷಿತ ನೀರು ದೊರೆಯುತ್ತಿರುವ ಬಗ್ಗೆ ಗ್ರಾ.ಪಂ ಈಗಾಗಲೇ ಜಿ.ಪಂ ಗಮನ ಸೆಳೆದಿದೆ ಎಂದು ಗ್ರಾ.ಪಂ ಅಧಿಕಾರಿಗಳು ತಿಳಿಸಿದರು. ಸ್ಥಳೀಯ ಎರಡು ಬಡಾವಣೆಗಳಿಗೂ ಇದೇ ಕೊಳವೆ ಬಾವಿಯ ನೀರು ಸರಬರಾಜಾಗುತ್ತಿದ್ದು, ಇಲ್ಲಿನ ನಿವಾಸಿಗಳಿಗೂ ನೀರನ್ನು ಬಳಸದಂತೆ ತಿಳಿಸಲಾಗಿದೆ ಎಂದರು. ಶುದ್ಧ ಕುಡಿಯುವ ನೀರು ದೊರೆಯುವಲ್ಲಿಯವರೆಗೆ ಈ ಕೊಳವೆ ಬಾವಿಯ ನೀರನ್ನು ಶಾಲೆಯ ಚಟುವಟಿಕೆಗಳಿಗೆ ಮತ್ತು ವಿದ್ಯಾರ್ಥಿಗಳಿಗೆ ಬಳಕೆ ಮಾಡಲು ಅವಕಾಶ ನೀಡುವುದಿಲ್ಲವೆಂದು ಶಾಲಾ ಮುಖ್ಯ ಶಿಕ್ಷಕರು ಸ್ಪಷ್ಟ ಪಡಿಸಿದರು.
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…