Advertisement
ಸುದ್ದಿಗಳು

ಕೊಳವೆ ಬಾವಿಯಲ್ಲಿ ಕಲುಷಿತ ಜಲ ಪತ್ತೆ : ನೀರನ್ನು ಬಳಸದಂತೆ ಕೂಡಿಗೆ ಶಾಲೆಗೆ ಸೂಚನೆ

Share

ಮಡಿಕೇರಿ : ಕೂಡಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಮೂರು ವರ್ಷಗಳ ಹಿಂದೆ ಕೊರೆಸಲಾಗಿರುವ ಕೊಳವೆ ಬಾವಿಯಲ್ಲಿನ ನೀರು ಕಲುಷಿತಗೊಂಡಿದ್ದು, ಈ ನೀರನ್ನು ಕುಡಿಯಲು ಉಪಯೋಗಿಸಬಾರದೆಂದು ಆರೋಗ್ಯ ಇಲಾಖೆ ಅಧಿಕಾರಿಗಳು ಶಾಲೆಯ ಮುಖ್ಯಸ್ಥರಿಗೆ ಹಾಗೂ ಗ್ರಾ.ಪಂ ಗೆ ತಿಳಿಸಿದ್ದಾರೆ.

ಆರೋಗ್ಯ ಇಲಾಖೆಯವರು ಪ್ರತಿವರ್ಷದಂತೆ ಆ ವ್ಯಾಪ್ತಿಯ ಕೊಳವೆ ಬಾವಿಗಳ ನೀರನ್ನು ಪ್ರಯೋಗಾಲಯದಲ್ಲಿ ಪರೀಕ್ಷಿಸಿ, ಕುಡಿಯಲು ಯೋಗ್ಯವೇ ಅಥವಾ ಯೋಗ್ಯವಾಗಲ್ಲವೆ ಎಂಬುದನ್ನು ತಿಳಿಸುತ್ತಾರೆ. ಅದರಂತೆ ಕಳೆದ ತಿಂಗಳಲ್ಲಿ ಕೂಡಿಗೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿರುವ ಕೊಳವೆ ಬಾವಿಯ ನೀರನ್ನು ಪರೀಕ್ಷಿಸಲಾಗಿ, ನೀರು ಕುಡಿಯಲು ಯೋಗ್ಯವಾಗಿಲ್ಲ ಕಲುಷಿತಗೊಂಡಿದ್ದು, ಶಾಲೆಯಲ್ಲಿ ಕುಡಿಯಲು ಹಾಗೂ ಆಹಾರ ತಯಾರಿಸಲು ಬಳಸಬಾರದೆಂದು ಸೂಚಿಸಿದ್ದರು.

ಆದರೂ, ಈ ಕೊಳವೆ ಬಾವಿಯ ನೀರನ್ನು ಬಳಸುತ್ತಿದ್ದ ಹಿನ್ನೆಲೆಯಲ್ಲಿ ಕಳೆದ ಎರಡು ದಿನಗಳ ಹಿಂದೆ ಆರೋಗ್ಯ ಇಲಾಖೆಯವರು ಮತ್ತೊಮ್ಮೆ ಪ್ರಯೋಗಾಲಯದಲ್ಲಿ ನೀರನ್ನು ಪರೀಕ್ಷಿಸಿ ಕಲುಷಿತಗೊಂಡು ಕುಡಿಯಲು ಯೋಗ್ಯವಲ್ಲದ ನೀರಾಗಿರುವುದನ್ನು ಮತ್ತೊಮ್ಮೆ ದೃಢೀಕರಿಸಿದರು. ಶಾಲೆಯ ಮುಖ್ಯೋಪಾಧ್ಯಾಯರಿಗೆ ವಿಷಯ ತಿಳಿಸಿ, ವಿದ್ಯಾರ್ಥಿಗಳಿಗೆ ಕುಡಿಯಲು ಹಾಗೂ ಆಹಾಯ ತಯಾರಿಸಲು ಈ ನೀರನ್ನು ಬಳಸದಂತೆ ಸೂಚಿಸಿದ್ದಾರೆ.

ಕೊಳವೆ ಬಾವಿಯಲ್ಲಿ ಕಲುಷಿತ ನೀರು ದೊರೆಯುತ್ತಿರುವ ಬಗ್ಗೆ ಗ್ರಾ.ಪಂ ಈಗಾಗಲೇ ಜಿ.ಪಂ ಗಮನ ಸೆಳೆದಿದೆ ಎಂದು ಗ್ರಾ.ಪಂ ಅಧಿಕಾರಿಗಳು ತಿಳಿಸಿದರು. ಸ್ಥಳೀಯ ಎರಡು ಬಡಾವಣೆಗಳಿಗೂ ಇದೇ ಕೊಳವೆ ಬಾವಿಯ ನೀರು ಸರಬರಾಜಾಗುತ್ತಿದ್ದು, ಇಲ್ಲಿನ ನಿವಾಸಿಗಳಿಗೂ ನೀರನ್ನು ಬಳಸದಂತೆ ತಿಳಿಸಲಾಗಿದೆ ಎಂದರು. ಶುದ್ಧ ಕುಡಿಯುವ ನೀರು ದೊರೆಯುವಲ್ಲಿಯವರೆಗೆ ಈ ಕೊಳವೆ ಬಾವಿಯ ನೀರನ್ನು ಶಾಲೆಯ ಚಟುವಟಿಕೆಗಳಿಗೆ ಮತ್ತು ವಿದ್ಯಾರ್ಥಿಗಳಿಗೆ ಬಳಕೆ ಮಾಡಲು ಅವಕಾಶ ನೀಡುವುದಿಲ್ಲವೆಂದು ಶಾಲಾ ಮುಖ್ಯ ಶಿಕ್ಷಕರು ಸ್ಪಷ್ಟ ಪಡಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

6 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

11 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

12 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

1 day ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

1 day ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

1 day ago