ಮಡಿಕೇರಿ : ಕೂಡಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಮೂರು ವರ್ಷಗಳ ಹಿಂದೆ ಕೊರೆಸಲಾಗಿರುವ ಕೊಳವೆ ಬಾವಿಯಲ್ಲಿನ ನೀರು ಕಲುಷಿತಗೊಂಡಿದ್ದು, ಈ ನೀರನ್ನು ಕುಡಿಯಲು ಉಪಯೋಗಿಸಬಾರದೆಂದು ಆರೋಗ್ಯ ಇಲಾಖೆ ಅಧಿಕಾರಿಗಳು ಶಾಲೆಯ ಮುಖ್ಯಸ್ಥರಿಗೆ ಹಾಗೂ ಗ್ರಾ.ಪಂ ಗೆ ತಿಳಿಸಿದ್ದಾರೆ.
ಆರೋಗ್ಯ ಇಲಾಖೆಯವರು ಪ್ರತಿವರ್ಷದಂತೆ ಆ ವ್ಯಾಪ್ತಿಯ ಕೊಳವೆ ಬಾವಿಗಳ ನೀರನ್ನು ಪ್ರಯೋಗಾಲಯದಲ್ಲಿ ಪರೀಕ್ಷಿಸಿ, ಕುಡಿಯಲು ಯೋಗ್ಯವೇ ಅಥವಾ ಯೋಗ್ಯವಾಗಲ್ಲವೆ ಎಂಬುದನ್ನು ತಿಳಿಸುತ್ತಾರೆ. ಅದರಂತೆ ಕಳೆದ ತಿಂಗಳಲ್ಲಿ ಕೂಡಿಗೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿರುವ ಕೊಳವೆ ಬಾವಿಯ ನೀರನ್ನು ಪರೀಕ್ಷಿಸಲಾಗಿ, ನೀರು ಕುಡಿಯಲು ಯೋಗ್ಯವಾಗಿಲ್ಲ ಕಲುಷಿತಗೊಂಡಿದ್ದು, ಶಾಲೆಯಲ್ಲಿ ಕುಡಿಯಲು ಹಾಗೂ ಆಹಾರ ತಯಾರಿಸಲು ಬಳಸಬಾರದೆಂದು ಸೂಚಿಸಿದ್ದರು.
ಆದರೂ, ಈ ಕೊಳವೆ ಬಾವಿಯ ನೀರನ್ನು ಬಳಸುತ್ತಿದ್ದ ಹಿನ್ನೆಲೆಯಲ್ಲಿ ಕಳೆದ ಎರಡು ದಿನಗಳ ಹಿಂದೆ ಆರೋಗ್ಯ ಇಲಾಖೆಯವರು ಮತ್ತೊಮ್ಮೆ ಪ್ರಯೋಗಾಲಯದಲ್ಲಿ ನೀರನ್ನು ಪರೀಕ್ಷಿಸಿ ಕಲುಷಿತಗೊಂಡು ಕುಡಿಯಲು ಯೋಗ್ಯವಲ್ಲದ ನೀರಾಗಿರುವುದನ್ನು ಮತ್ತೊಮ್ಮೆ ದೃಢೀಕರಿಸಿದರು. ಶಾಲೆಯ ಮುಖ್ಯೋಪಾಧ್ಯಾಯರಿಗೆ ವಿಷಯ ತಿಳಿಸಿ, ವಿದ್ಯಾರ್ಥಿಗಳಿಗೆ ಕುಡಿಯಲು ಹಾಗೂ ಆಹಾಯ ತಯಾರಿಸಲು ಈ ನೀರನ್ನು ಬಳಸದಂತೆ ಸೂಚಿಸಿದ್ದಾರೆ.
ಕೊಳವೆ ಬಾವಿಯಲ್ಲಿ ಕಲುಷಿತ ನೀರು ದೊರೆಯುತ್ತಿರುವ ಬಗ್ಗೆ ಗ್ರಾ.ಪಂ ಈಗಾಗಲೇ ಜಿ.ಪಂ ಗಮನ ಸೆಳೆದಿದೆ ಎಂದು ಗ್ರಾ.ಪಂ ಅಧಿಕಾರಿಗಳು ತಿಳಿಸಿದರು. ಸ್ಥಳೀಯ ಎರಡು ಬಡಾವಣೆಗಳಿಗೂ ಇದೇ ಕೊಳವೆ ಬಾವಿಯ ನೀರು ಸರಬರಾಜಾಗುತ್ತಿದ್ದು, ಇಲ್ಲಿನ ನಿವಾಸಿಗಳಿಗೂ ನೀರನ್ನು ಬಳಸದಂತೆ ತಿಳಿಸಲಾಗಿದೆ ಎಂದರು. ಶುದ್ಧ ಕುಡಿಯುವ ನೀರು ದೊರೆಯುವಲ್ಲಿಯವರೆಗೆ ಈ ಕೊಳವೆ ಬಾವಿಯ ನೀರನ್ನು ಶಾಲೆಯ ಚಟುವಟಿಕೆಗಳಿಗೆ ಮತ್ತು ವಿದ್ಯಾರ್ಥಿಗಳಿಗೆ ಬಳಕೆ ಮಾಡಲು ಅವಕಾಶ ನೀಡುವುದಿಲ್ಲವೆಂದು ಶಾಲಾ ಮುಖ್ಯ ಶಿಕ್ಷಕರು ಸ್ಪಷ್ಟ ಪಡಿಸಿದರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…