Advertisement
ಸುದ್ದಿಗಳು

ಕೊಳವೆ ಬಾವಿಯಲ್ಲಿ ಕಲುಷಿತ ಜಲ ಪತ್ತೆ : ನೀರನ್ನು ಬಳಸದಂತೆ ಕೂಡಿಗೆ ಶಾಲೆಗೆ ಸೂಚನೆ

Share

ಮಡಿಕೇರಿ : ಕೂಡಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಮೂರು ವರ್ಷಗಳ ಹಿಂದೆ ಕೊರೆಸಲಾಗಿರುವ ಕೊಳವೆ ಬಾವಿಯಲ್ಲಿನ ನೀರು ಕಲುಷಿತಗೊಂಡಿದ್ದು, ಈ ನೀರನ್ನು ಕುಡಿಯಲು ಉಪಯೋಗಿಸಬಾರದೆಂದು ಆರೋಗ್ಯ ಇಲಾಖೆ ಅಧಿಕಾರಿಗಳು ಶಾಲೆಯ ಮುಖ್ಯಸ್ಥರಿಗೆ ಹಾಗೂ ಗ್ರಾ.ಪಂ ಗೆ ತಿಳಿಸಿದ್ದಾರೆ.

Advertisement

ಆರೋಗ್ಯ ಇಲಾಖೆಯವರು ಪ್ರತಿವರ್ಷದಂತೆ ಆ ವ್ಯಾಪ್ತಿಯ ಕೊಳವೆ ಬಾವಿಗಳ ನೀರನ್ನು ಪ್ರಯೋಗಾಲಯದಲ್ಲಿ ಪರೀಕ್ಷಿಸಿ, ಕುಡಿಯಲು ಯೋಗ್ಯವೇ ಅಥವಾ ಯೋಗ್ಯವಾಗಲ್ಲವೆ ಎಂಬುದನ್ನು ತಿಳಿಸುತ್ತಾರೆ. ಅದರಂತೆ ಕಳೆದ ತಿಂಗಳಲ್ಲಿ ಕೂಡಿಗೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿರುವ ಕೊಳವೆ ಬಾವಿಯ ನೀರನ್ನು ಪರೀಕ್ಷಿಸಲಾಗಿ, ನೀರು ಕುಡಿಯಲು ಯೋಗ್ಯವಾಗಿಲ್ಲ ಕಲುಷಿತಗೊಂಡಿದ್ದು, ಶಾಲೆಯಲ್ಲಿ ಕುಡಿಯಲು ಹಾಗೂ ಆಹಾರ ತಯಾರಿಸಲು ಬಳಸಬಾರದೆಂದು ಸೂಚಿಸಿದ್ದರು.

ಆದರೂ, ಈ ಕೊಳವೆ ಬಾವಿಯ ನೀರನ್ನು ಬಳಸುತ್ತಿದ್ದ ಹಿನ್ನೆಲೆಯಲ್ಲಿ ಕಳೆದ ಎರಡು ದಿನಗಳ ಹಿಂದೆ ಆರೋಗ್ಯ ಇಲಾಖೆಯವರು ಮತ್ತೊಮ್ಮೆ ಪ್ರಯೋಗಾಲಯದಲ್ಲಿ ನೀರನ್ನು ಪರೀಕ್ಷಿಸಿ ಕಲುಷಿತಗೊಂಡು ಕುಡಿಯಲು ಯೋಗ್ಯವಲ್ಲದ ನೀರಾಗಿರುವುದನ್ನು ಮತ್ತೊಮ್ಮೆ ದೃಢೀಕರಿಸಿದರು. ಶಾಲೆಯ ಮುಖ್ಯೋಪಾಧ್ಯಾಯರಿಗೆ ವಿಷಯ ತಿಳಿಸಿ, ವಿದ್ಯಾರ್ಥಿಗಳಿಗೆ ಕುಡಿಯಲು ಹಾಗೂ ಆಹಾಯ ತಯಾರಿಸಲು ಈ ನೀರನ್ನು ಬಳಸದಂತೆ ಸೂಚಿಸಿದ್ದಾರೆ.

ಕೊಳವೆ ಬಾವಿಯಲ್ಲಿ ಕಲುಷಿತ ನೀರು ದೊರೆಯುತ್ತಿರುವ ಬಗ್ಗೆ ಗ್ರಾ.ಪಂ ಈಗಾಗಲೇ ಜಿ.ಪಂ ಗಮನ ಸೆಳೆದಿದೆ ಎಂದು ಗ್ರಾ.ಪಂ ಅಧಿಕಾರಿಗಳು ತಿಳಿಸಿದರು. ಸ್ಥಳೀಯ ಎರಡು ಬಡಾವಣೆಗಳಿಗೂ ಇದೇ ಕೊಳವೆ ಬಾವಿಯ ನೀರು ಸರಬರಾಜಾಗುತ್ತಿದ್ದು, ಇಲ್ಲಿನ ನಿವಾಸಿಗಳಿಗೂ ನೀರನ್ನು ಬಳಸದಂತೆ ತಿಳಿಸಲಾಗಿದೆ ಎಂದರು. ಶುದ್ಧ ಕುಡಿಯುವ ನೀರು ದೊರೆಯುವಲ್ಲಿಯವರೆಗೆ ಈ ಕೊಳವೆ ಬಾವಿಯ ನೀರನ್ನು ಶಾಲೆಯ ಚಟುವಟಿಕೆಗಳಿಗೆ ಮತ್ತು ವಿದ್ಯಾರ್ಥಿಗಳಿಗೆ ಬಳಕೆ ಮಾಡಲು ಅವಕಾಶ ನೀಡುವುದಿಲ್ಲವೆಂದು ಶಾಲಾ ಮುಖ್ಯ ಶಿಕ್ಷಕರು ಸ್ಪಷ್ಟ ಪಡಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

14 hours ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

2 days ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

2 days ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

2 days ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

2 days ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

2 days ago