Advertisement
ಸುದ್ದಿಗಳು

ಕೋಟಿಲಿಂಗೇಶ್ವರ ದೇವಳಕ್ಕೆ ಚೊಕ್ಕಾಡಿಯಿಂದ ಕೊಡಿಮರ

Share

ಚೊಕ್ಕಾಡಿ: ಇತಿಹಾಸ ಪ್ರಸಿದ್ಧ ಕೋಟೆಶ್ವರದ ಕೋಟಿಲಿಂಗೇಶ್ವರ ದೇವಸ್ಥಾನದ ಕೊಡಿಮರಕ್ಕೆ ಅಮರಪಡ್ನೂರು ಗ್ರಾಮದ ಚೊಕ್ಕಾಡಿಯಿಂದ ಮರ ಸಾಗಿಸಲಾಗಿದೆ.

ಚೊಕ್ಕಾಡಿಯ ಇಂದಿರಾ ಕೊಯಿಂಗುಳಿಯವರ ಜಮೀನಿನಿಂದ ಕೋಟೆಶ್ವರ ಕೋಟಿಲಿಂಗೇಶ್ವರ ದೇವಸ್ಥಾನಕ್ಕೆ ಕೊಡಿಮರವನ್ನು ಗುರುತಿಸಲಾಗಿತ್ತು. ತಂತ್ರಿಗಳಾದ ಪ್ರಸನ್ನಕುಮಾರ್ ಐತಾಳ್ ಮತ್ತು ಪರಮೇಶ್ವರ ಐತಾಳ್ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನೆರವೇರಿತು. ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಮರ ತುಂಬಿದ ಲಾರಿಗೆ ಹಸಿರು ನಿಶಾನೆ ತೋರಿ ಚಾಲನೆ ನೀಡಿದರು. ಚೊಕ್ಕಾಡಿಯಿಂದ ಮರ ಸಾಗಿಸಲು ಉದಯ ಕುಕ್ಕೇಲು, ಪವನ್ ಮುಂಡ್ರಾಜೆ, ಪ್ರಮೋದ್ ಮಂಡೇಕೋಲು ನೇತೃತ್ವ ವಹಿಸಿದರು.

ಕೋಟಿಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಒನಾ ಸಮಿತಿ ಅಧ್ಯಕ್ಷ ಗೋಪಾಲಕೃಷ್ನ ಶೆಟ್ಟಿ ಮಾರ್ಕೋಡು, ಜೀರ್ನೋದ್ಧಾರ ಸಮಿತಿ ಅಧ್ಯಕ್ಷ ಕೃಷ್ಣದೇವ ಕಾರಂತ, ದೇವಳದ ಕಾರ್ಯನಿರ್ವಹಣಾಧಿಕಾರಿ ಗಣೇಶ್ ರಾವ್, ಶಿಲ್ಪಿ ರಾಜಗೋಪಾಲ ಆಚಾರ್ಯ, ಕಾಪು ದಿನಕರ ಶೆಟಿ, ಹರಿಯಣ್ಣ ಚಾತ್ರಬೆಟ್ಟು, ಮಲ್ಯಾಡಿ ಶಿವರಾಮ ಶೆಟ್ಟಿ, ಹರೀಶ್ ಬಿಜಾಡಿ, ಮಾರ್ಕೋಡು ಸುಬ್ಬಣ್ಣ ಶೆಟ್ಟಿ, ಪ್ರಭಾಕರ್ ಕುಂಭಾಸಿ, ಗಣೇಶ್ ಭಟ್ ಗೋಪಾಡಿ, ಶ್ರೀನಿವಾಸ್ ಕುಂದರ್, ಶಂಕರನಾರಾಯಣ ಉಡುಪ, ಗುರುರಾಜ ಎಂಜಿನಿಯರ್, ಪಾಂಡುರಂಗ ಜೋಗಿ, ಸುಬ್ರಹ್ಮಣ್ಯ ಶೆಟ್ಟಿಗಾರ್, ಕೋಟೆಶ್ವರ ಹಿಂದುಪರ ಸಂಘಟನೆ ಸದಸ್ಯರು, ಚೊಕ್ಕಾಡಿ ಬಜರಂಗ ದಳ ಸದಸ್ಯರು ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 day ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

2 days ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

2 days ago