ಕೋಟೆಮುಂಡುಗಾರಿನಲ್ಲಿ ರೈತರೊಂದಿಗೆ ಸಂವಾದ

June 9, 2019
2:00 PM

ಬೆಳ್ಳಾರೆ: ಕಳಂಜ ಬಾಳಿಲ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಕಳಂಜ ರೈತ ಸ್ನೇಹಿತರ ಕೂಟದ ಜಂಟಿ ಸಹಯೋಗದಲ್ಲಿ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಸೂಕ್ಷ್ಮ ಜೀವಾಣು ಹಾಗು ಸಾವಯವ ಗೊಬ್ಬರ ತಯಾರಿಕ ಘಟಕದ ಉತ್ಪನ್ನ ಸಾವಯವ ಸೂಕ್ಷ್ಮಾಣು ಪೋಷಕಾಂಶ ಗೊಬ್ಬರದ ಕುರಿತು ಮಾಹಿತಿ ಹಾಗೂ ರೈತರೊಂದಿಗೆ ಸಂವಾದ ಕಾರ್ಯಕ್ರಮವು ಕೋಟೆಮುಂಡುಗಾರಿನ ಸಂಘದ ಪ್ರಧಾನ ಕಚೇರಿ ಸಭಾಭವನದಲ್ಲಿ ನಡೆಯಿತು.

Advertisement

ಮಾಹಿತಿ ಮತ್ತು ತರಬೇತುದಾರ ವಿಷ್ಣುಮೂರ್ತಿ.ಜಿ.ರಾವ್ ಸಾವಯವ ಪೋಷಕಾಂಶ ಗೊಬ್ಬರ ತಯಾರಿಕೆ ಮತ್ತು ಬಳಸುವಿಕೆಯ ರೀತಿ, ಗೊಬ್ಬರದ ಪ್ರಮಾಣದ ಕುರಿತು ಸಮಗ್ರವಾಗಿ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಮಾಹಿತಿದಾರ ಮತ್ತು ಗ್ರಾಮದ ಕೃಷಿಕರ ಮಧ್ಯೆ ವಿವಿಧ ಪ್ರಶ್ನೋತ್ತರ ಹಾಗು ಚರ್ಚೆಗಳು ನಡೆಯಿತು.

ಕಾರ್ಯಕ್ರಮದಲ್ಲಿ ಕಳಂಜ ಬಾಳಿಲ ಪ್ರಾಕೃಪಸ ಸಂಘದ ಅಧ್ಯಕ್ಷ ಸುಧಾಕರ.ರೈ ಎ.ಎಂ, ಉಪಾಧ್ಯಕ್ಷ ಲಿಂಗಪ್ಪ ಗೌಡ ತಂಟೆಪ್ಪಾಡಿ, ನಿರ್ದೇಶಕರಾದ ಕುಞ್ಞಂಣ್ಣ ನಾಯ್ಕ ಬಾಳೆಗುಡ್ಡೆ, ಮುಗುಪ್ಪು ಕೂಸಪ್ಪ ಗೌಡ, ವಿಶ್ವನಾಥ ರೈ ಕಳಂಜ, ಕಾರ್ಯನಿರ್ವಹಣಾಧಿಕಾರಿ ವೆಂಕಪ್ಪಯ್ಯ.ಕೆ, ಹಾಗೂ ಕಳಂಜ ಗ್ರಾಮದ ರೈತರು, ಕೃಷಿಕರು ಉಪಸ್ಥಿತರಿದ್ದರು.

ಕಳಂಜ ರೈತ ಸ್ನೇಹಿತರ ಕೂಟದ ಸಂಚಾಲಕ ಪವನ ವೆಂಕಟ್ರಮಣ ಭಟ್ ಪ್ರಸ್ತಾವನೆಗೈದು ಕಾರ್ಯಕ್ರಮ ನಿರೂಪಿಸಿದರು.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವ |
April 28, 2025
10:21 PM
by: The Rural Mirror ಸುದ್ದಿಜಾಲ
ಬಾಗಲಕೋಟೆ ಮುಧೋಳ ಸೇಬು ಬೆಳೆಗಾರನ ಬಗ್ಗೆ ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ ಮೆಚ್ಚುಗೆ
April 28, 2025
7:02 AM
by: The Rural Mirror ಸುದ್ದಿಜಾಲ
ಬೆಳಗಾವಿಯಲ್ಲಿ 3 ದಿನಗಳ ಮಾವು, ಜೇನು ಮೇಳ | ರೈತರಿಂದ ಪ್ರದರ್ಶನ, ಗ್ರಾಹಕರಿಗೆ ನೇರ ಮಾರಾಟ
April 26, 2025
9:54 PM
by: The Rural Mirror ಸುದ್ದಿಜಾಲ
ರಬ್ಬರ್ ತೋಟಗಳ ಮಾಹಿತಿ ಸಂಗ್ರಹ | ರಬ್ಬರ್ ತೋಟಗಳ ಜಿಯೋ-ಮ್ಯಾಪಿಂಗ್
April 25, 2025
9:15 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group