ಕೋಟೆಮುಂಡುಗಾರಿನಲ್ಲಿ ರೈತರೊಂದಿಗೆ ಸಂವಾದ

June 9, 2019
2:00 PM

ಬೆಳ್ಳಾರೆ: ಕಳಂಜ ಬಾಳಿಲ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಕಳಂಜ ರೈತ ಸ್ನೇಹಿತರ ಕೂಟದ ಜಂಟಿ ಸಹಯೋಗದಲ್ಲಿ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಸೂಕ್ಷ್ಮ ಜೀವಾಣು ಹಾಗು ಸಾವಯವ ಗೊಬ್ಬರ ತಯಾರಿಕ ಘಟಕದ ಉತ್ಪನ್ನ ಸಾವಯವ ಸೂಕ್ಷ್ಮಾಣು ಪೋಷಕಾಂಶ ಗೊಬ್ಬರದ ಕುರಿತು ಮಾಹಿತಿ ಹಾಗೂ ರೈತರೊಂದಿಗೆ ಸಂವಾದ ಕಾರ್ಯಕ್ರಮವು ಕೋಟೆಮುಂಡುಗಾರಿನ ಸಂಘದ ಪ್ರಧಾನ ಕಚೇರಿ ಸಭಾಭವನದಲ್ಲಿ ನಡೆಯಿತು.

ಮಾಹಿತಿ ಮತ್ತು ತರಬೇತುದಾರ ವಿಷ್ಣುಮೂರ್ತಿ.ಜಿ.ರಾವ್ ಸಾವಯವ ಪೋಷಕಾಂಶ ಗೊಬ್ಬರ ತಯಾರಿಕೆ ಮತ್ತು ಬಳಸುವಿಕೆಯ ರೀತಿ, ಗೊಬ್ಬರದ ಪ್ರಮಾಣದ ಕುರಿತು ಸಮಗ್ರವಾಗಿ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಮಾಹಿತಿದಾರ ಮತ್ತು ಗ್ರಾಮದ ಕೃಷಿಕರ ಮಧ್ಯೆ ವಿವಿಧ ಪ್ರಶ್ನೋತ್ತರ ಹಾಗು ಚರ್ಚೆಗಳು ನಡೆಯಿತು.

ಕಾರ್ಯಕ್ರಮದಲ್ಲಿ ಕಳಂಜ ಬಾಳಿಲ ಪ್ರಾಕೃಪಸ ಸಂಘದ ಅಧ್ಯಕ್ಷ ಸುಧಾಕರ.ರೈ ಎ.ಎಂ, ಉಪಾಧ್ಯಕ್ಷ ಲಿಂಗಪ್ಪ ಗೌಡ ತಂಟೆಪ್ಪಾಡಿ, ನಿರ್ದೇಶಕರಾದ ಕುಞ್ಞಂಣ್ಣ ನಾಯ್ಕ ಬಾಳೆಗುಡ್ಡೆ, ಮುಗುಪ್ಪು ಕೂಸಪ್ಪ ಗೌಡ, ವಿಶ್ವನಾಥ ರೈ ಕಳಂಜ, ಕಾರ್ಯನಿರ್ವಹಣಾಧಿಕಾರಿ ವೆಂಕಪ್ಪಯ್ಯ.ಕೆ, ಹಾಗೂ ಕಳಂಜ ಗ್ರಾಮದ ರೈತರು, ಕೃಷಿಕರು ಉಪಸ್ಥಿತರಿದ್ದರು.

ಕಳಂಜ ರೈತ ಸ್ನೇಹಿತರ ಕೂಟದ ಸಂಚಾಲಕ ಪವನ ವೆಂಕಟ್ರಮಣ ಭಟ್ ಪ್ರಸ್ತಾವನೆಗೈದು ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ
August 23, 2026
7:58 PM
by: ದ ರೂರಲ್ ಮಿರರ್.ಕಾಂ
ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ
August 23, 2026
2:16 PM
by: ದ ರೂರಲ್ ಮಿರರ್.ಕಾಂ
ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!
August 21, 2026
6:53 AM
by: ದ ರೂರಲ್ ಮಿರರ್.ಕಾಂ
ಭಾರತದ ಕೃಷಿ ರಫ್ತಿನಲ್ಲಿ ದೊಡ್ಡ ಬದಲಾವಣೆ – ಎಮ್ಮೆ ಮಾಂಸ ರಫ್ತು 5 ಬಿಲಿಯನ್ ಡಾಲರ್ ಗುರಿಯತ್ತ..!
August 20, 2026
9:46 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror