ಬೆಳ್ಳಾರೆ: ಕಳಂಜ ಬಾಳಿಲ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಕಳಂಜ ರೈತ ಸ್ನೇಹಿತರ ಕೂಟದ ಜಂಟಿ ಸಹಯೋಗದಲ್ಲಿ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಸೂಕ್ಷ್ಮ ಜೀವಾಣು ಹಾಗು ಸಾವಯವ ಗೊಬ್ಬರ ತಯಾರಿಕ ಘಟಕದ ಉತ್ಪನ್ನ ಸಾವಯವ ಸೂಕ್ಷ್ಮಾಣು ಪೋಷಕಾಂಶ ಗೊಬ್ಬರದ ಕುರಿತು ಮಾಹಿತಿ ಹಾಗೂ ರೈತರೊಂದಿಗೆ ಸಂವಾದ ಕಾರ್ಯಕ್ರಮವು ಕೋಟೆಮುಂಡುಗಾರಿನ ಸಂಘದ ಪ್ರಧಾನ ಕಚೇರಿ ಸಭಾಭವನದಲ್ಲಿ ನಡೆಯಿತು.
ಮಾಹಿತಿ ಮತ್ತು ತರಬೇತುದಾರ ವಿಷ್ಣುಮೂರ್ತಿ.ಜಿ.ರಾವ್ ಸಾವಯವ ಪೋಷಕಾಂಶ ಗೊಬ್ಬರ ತಯಾರಿಕೆ ಮತ್ತು ಬಳಸುವಿಕೆಯ ರೀತಿ, ಗೊಬ್ಬರದ ಪ್ರಮಾಣದ ಕುರಿತು ಸಮಗ್ರವಾಗಿ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಮಾಹಿತಿದಾರ ಮತ್ತು ಗ್ರಾಮದ ಕೃಷಿಕರ ಮಧ್ಯೆ ವಿವಿಧ ಪ್ರಶ್ನೋತ್ತರ ಹಾಗು ಚರ್ಚೆಗಳು ನಡೆಯಿತು.
ಕಾರ್ಯಕ್ರಮದಲ್ಲಿ ಕಳಂಜ ಬಾಳಿಲ ಪ್ರಾಕೃಪಸ ಸಂಘದ ಅಧ್ಯಕ್ಷ ಸುಧಾಕರ.ರೈ ಎ.ಎಂ, ಉಪಾಧ್ಯಕ್ಷ ಲಿಂಗಪ್ಪ ಗೌಡ ತಂಟೆಪ್ಪಾಡಿ, ನಿರ್ದೇಶಕರಾದ ಕುಞ್ಞಂಣ್ಣ ನಾಯ್ಕ ಬಾಳೆಗುಡ್ಡೆ, ಮುಗುಪ್ಪು ಕೂಸಪ್ಪ ಗೌಡ, ವಿಶ್ವನಾಥ ರೈ ಕಳಂಜ, ಕಾರ್ಯನಿರ್ವಹಣಾಧಿಕಾರಿ ವೆಂಕಪ್ಪಯ್ಯ.ಕೆ, ಹಾಗೂ ಕಳಂಜ ಗ್ರಾಮದ ರೈತರು, ಕೃಷಿಕರು ಉಪಸ್ಥಿತರಿದ್ದರು.
ಕಳಂಜ ರೈತ ಸ್ನೇಹಿತರ ಕೂಟದ ಸಂಚಾಲಕ ಪವನ ವೆಂಕಟ್ರಮಣ ಭಟ್ ಪ್ರಸ್ತಾವನೆಗೈದು ಕಾರ್ಯಕ್ರಮ ನಿರೂಪಿಸಿದರು.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…