ಬೆಳ್ಳಾರೆ: ಕಳಂಜ ಬಾಳಿಲ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಕಳಂಜ ರೈತ ಸ್ನೇಹಿತರ ಕೂಟದ ಜಂಟಿ ಸಹಯೋಗದಲ್ಲಿ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಸೂಕ್ಷ್ಮ ಜೀವಾಣು ಹಾಗು ಸಾವಯವ ಗೊಬ್ಬರ ತಯಾರಿಕ ಘಟಕದ ಉತ್ಪನ್ನ ಸಾವಯವ ಸೂಕ್ಷ್ಮಾಣು ಪೋಷಕಾಂಶ ಗೊಬ್ಬರದ ಕುರಿತು ಮಾಹಿತಿ ಹಾಗೂ ರೈತರೊಂದಿಗೆ ಸಂವಾದ ಕಾರ್ಯಕ್ರಮವು ಕೋಟೆಮುಂಡುಗಾರಿನ ಸಂಘದ ಪ್ರಧಾನ ಕಚೇರಿ ಸಭಾಭವನದಲ್ಲಿ ನಡೆಯಿತು.
ಮಾಹಿತಿ ಮತ್ತು ತರಬೇತುದಾರ ವಿಷ್ಣುಮೂರ್ತಿ.ಜಿ.ರಾವ್ ಸಾವಯವ ಪೋಷಕಾಂಶ ಗೊಬ್ಬರ ತಯಾರಿಕೆ ಮತ್ತು ಬಳಸುವಿಕೆಯ ರೀತಿ, ಗೊಬ್ಬರದ ಪ್ರಮಾಣದ ಕುರಿತು ಸಮಗ್ರವಾಗಿ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಮಾಹಿತಿದಾರ ಮತ್ತು ಗ್ರಾಮದ ಕೃಷಿಕರ ಮಧ್ಯೆ ವಿವಿಧ ಪ್ರಶ್ನೋತ್ತರ ಹಾಗು ಚರ್ಚೆಗಳು ನಡೆಯಿತು.
ಕಾರ್ಯಕ್ರಮದಲ್ಲಿ ಕಳಂಜ ಬಾಳಿಲ ಪ್ರಾಕೃಪಸ ಸಂಘದ ಅಧ್ಯಕ್ಷ ಸುಧಾಕರ.ರೈ ಎ.ಎಂ, ಉಪಾಧ್ಯಕ್ಷ ಲಿಂಗಪ್ಪ ಗೌಡ ತಂಟೆಪ್ಪಾಡಿ, ನಿರ್ದೇಶಕರಾದ ಕುಞ್ಞಂಣ್ಣ ನಾಯ್ಕ ಬಾಳೆಗುಡ್ಡೆ, ಮುಗುಪ್ಪು ಕೂಸಪ್ಪ ಗೌಡ, ವಿಶ್ವನಾಥ ರೈ ಕಳಂಜ, ಕಾರ್ಯನಿರ್ವಹಣಾಧಿಕಾರಿ ವೆಂಕಪ್ಪಯ್ಯ.ಕೆ, ಹಾಗೂ ಕಳಂಜ ಗ್ರಾಮದ ರೈತರು, ಕೃಷಿಕರು ಉಪಸ್ಥಿತರಿದ್ದರು.
ಕಳಂಜ ರೈತ ಸ್ನೇಹಿತರ ಕೂಟದ ಸಂಚಾಲಕ ಪವನ ವೆಂಕಟ್ರಮಣ ಭಟ್ ಪ್ರಸ್ತಾವನೆಗೈದು ಕಾರ್ಯಕ್ರಮ ನಿರೂಪಿಸಿದರು.
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…