Advertisement
ಕೃಷಿ

ಕೋಟೆಮುಂಡುಗಾರಿನಲ್ಲಿ ರೈತರೊಂದಿಗೆ ಸಂವಾದ

Share

ಬೆಳ್ಳಾರೆ: ಕಳಂಜ ಬಾಳಿಲ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಕಳಂಜ ರೈತ ಸ್ನೇಹಿತರ ಕೂಟದ ಜಂಟಿ ಸಹಯೋಗದಲ್ಲಿ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಸೂಕ್ಷ್ಮ ಜೀವಾಣು ಹಾಗು ಸಾವಯವ ಗೊಬ್ಬರ ತಯಾರಿಕ ಘಟಕದ ಉತ್ಪನ್ನ ಸಾವಯವ ಸೂಕ್ಷ್ಮಾಣು ಪೋಷಕಾಂಶ ಗೊಬ್ಬರದ ಕುರಿತು ಮಾಹಿತಿ ಹಾಗೂ ರೈತರೊಂದಿಗೆ ಸಂವಾದ ಕಾರ್ಯಕ್ರಮವು ಕೋಟೆಮುಂಡುಗಾರಿನ ಸಂಘದ ಪ್ರಧಾನ ಕಚೇರಿ ಸಭಾಭವನದಲ್ಲಿ ನಡೆಯಿತು.

ಮಾಹಿತಿ ಮತ್ತು ತರಬೇತುದಾರ ವಿಷ್ಣುಮೂರ್ತಿ.ಜಿ.ರಾವ್ ಸಾವಯವ ಪೋಷಕಾಂಶ ಗೊಬ್ಬರ ತಯಾರಿಕೆ ಮತ್ತು ಬಳಸುವಿಕೆಯ ರೀತಿ, ಗೊಬ್ಬರದ ಪ್ರಮಾಣದ ಕುರಿತು ಸಮಗ್ರವಾಗಿ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಮಾಹಿತಿದಾರ ಮತ್ತು ಗ್ರಾಮದ ಕೃಷಿಕರ ಮಧ್ಯೆ ವಿವಿಧ ಪ್ರಶ್ನೋತ್ತರ ಹಾಗು ಚರ್ಚೆಗಳು ನಡೆಯಿತು.

ಕಾರ್ಯಕ್ರಮದಲ್ಲಿ ಕಳಂಜ ಬಾಳಿಲ ಪ್ರಾಕೃಪಸ ಸಂಘದ ಅಧ್ಯಕ್ಷ ಸುಧಾಕರ.ರೈ ಎ.ಎಂ, ಉಪಾಧ್ಯಕ್ಷ ಲಿಂಗಪ್ಪ ಗೌಡ ತಂಟೆಪ್ಪಾಡಿ, ನಿರ್ದೇಶಕರಾದ ಕುಞ್ಞಂಣ್ಣ ನಾಯ್ಕ ಬಾಳೆಗುಡ್ಡೆ, ಮುಗುಪ್ಪು ಕೂಸಪ್ಪ ಗೌಡ, ವಿಶ್ವನಾಥ ರೈ ಕಳಂಜ, ಕಾರ್ಯನಿರ್ವಹಣಾಧಿಕಾರಿ ವೆಂಕಪ್ಪಯ್ಯ.ಕೆ, ಹಾಗೂ ಕಳಂಜ ಗ್ರಾಮದ ರೈತರು, ಕೃಷಿಕರು ಉಪಸ್ಥಿತರಿದ್ದರು.

ಕಳಂಜ ರೈತ ಸ್ನೇಹಿತರ ಕೂಟದ ಸಂಚಾಲಕ ಪವನ ವೆಂಕಟ್ರಮಣ ಭಟ್ ಪ್ರಸ್ತಾವನೆಗೈದು ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

6 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

1 day ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

1 day ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago