Advertisement
ಕೃಷಿ

ಕೋಟೆಮುಂಡುಗಾರಿನಲ್ಲಿ ರೈತರೊಂದಿಗೆ ಸಂವಾದ

Share

ಬೆಳ್ಳಾರೆ: ಕಳಂಜ ಬಾಳಿಲ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಕಳಂಜ ರೈತ ಸ್ನೇಹಿತರ ಕೂಟದ ಜಂಟಿ ಸಹಯೋಗದಲ್ಲಿ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಸೂಕ್ಷ್ಮ ಜೀವಾಣು ಹಾಗು ಸಾವಯವ ಗೊಬ್ಬರ ತಯಾರಿಕ ಘಟಕದ ಉತ್ಪನ್ನ ಸಾವಯವ ಸೂಕ್ಷ್ಮಾಣು ಪೋಷಕಾಂಶ ಗೊಬ್ಬರದ ಕುರಿತು ಮಾಹಿತಿ ಹಾಗೂ ರೈತರೊಂದಿಗೆ ಸಂವಾದ ಕಾರ್ಯಕ್ರಮವು ಕೋಟೆಮುಂಡುಗಾರಿನ ಸಂಘದ ಪ್ರಧಾನ ಕಚೇರಿ ಸಭಾಭವನದಲ್ಲಿ ನಡೆಯಿತು.

ಮಾಹಿತಿ ಮತ್ತು ತರಬೇತುದಾರ ವಿಷ್ಣುಮೂರ್ತಿ.ಜಿ.ರಾವ್ ಸಾವಯವ ಪೋಷಕಾಂಶ ಗೊಬ್ಬರ ತಯಾರಿಕೆ ಮತ್ತು ಬಳಸುವಿಕೆಯ ರೀತಿ, ಗೊಬ್ಬರದ ಪ್ರಮಾಣದ ಕುರಿತು ಸಮಗ್ರವಾಗಿ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಮಾಹಿತಿದಾರ ಮತ್ತು ಗ್ರಾಮದ ಕೃಷಿಕರ ಮಧ್ಯೆ ವಿವಿಧ ಪ್ರಶ್ನೋತ್ತರ ಹಾಗು ಚರ್ಚೆಗಳು ನಡೆಯಿತು.

ಕಾರ್ಯಕ್ರಮದಲ್ಲಿ ಕಳಂಜ ಬಾಳಿಲ ಪ್ರಾಕೃಪಸ ಸಂಘದ ಅಧ್ಯಕ್ಷ ಸುಧಾಕರ.ರೈ ಎ.ಎಂ, ಉಪಾಧ್ಯಕ್ಷ ಲಿಂಗಪ್ಪ ಗೌಡ ತಂಟೆಪ್ಪಾಡಿ, ನಿರ್ದೇಶಕರಾದ ಕುಞ್ಞಂಣ್ಣ ನಾಯ್ಕ ಬಾಳೆಗುಡ್ಡೆ, ಮುಗುಪ್ಪು ಕೂಸಪ್ಪ ಗೌಡ, ವಿಶ್ವನಾಥ ರೈ ಕಳಂಜ, ಕಾರ್ಯನಿರ್ವಹಣಾಧಿಕಾರಿ ವೆಂಕಪ್ಪಯ್ಯ.ಕೆ, ಹಾಗೂ ಕಳಂಜ ಗ್ರಾಮದ ರೈತರು, ಕೃಷಿಕರು ಉಪಸ್ಥಿತರಿದ್ದರು.

ಕಳಂಜ ರೈತ ಸ್ನೇಹಿತರ ಕೂಟದ ಸಂಚಾಲಕ ಪವನ ವೆಂಕಟ್ರಮಣ ಭಟ್ ಪ್ರಸ್ತಾವನೆಗೈದು ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 day ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

2 days ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

2 days ago