ಬೆಳ್ಳಾರೆ: ಕಳಂಜ ಬಾಳಿಲ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಕಳಂಜ ರೈತ ಸ್ನೇಹಿತರ ಕೂಟದ ಜಂಟಿ ಸಹಯೋಗದಲ್ಲಿ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಸೂಕ್ಷ್ಮ ಜೀವಾಣು ಹಾಗು ಸಾವಯವ ಗೊಬ್ಬರ ತಯಾರಿಕ ಘಟಕದ ಉತ್ಪನ್ನ ಸಾವಯವ ಸೂಕ್ಷ್ಮಾಣು ಪೋಷಕಾಂಶ ಗೊಬ್ಬರದ ಕುರಿತು ಮಾಹಿತಿ ಹಾಗೂ ರೈತರೊಂದಿಗೆ ಸಂವಾದ ಕಾರ್ಯಕ್ರಮವು ಕೋಟೆಮುಂಡುಗಾರಿನ ಸಂಘದ ಪ್ರಧಾನ ಕಚೇರಿ ಸಭಾಭವನದಲ್ಲಿ ನಡೆಯಿತು.
ಮಾಹಿತಿ ಮತ್ತು ತರಬೇತುದಾರ ವಿಷ್ಣುಮೂರ್ತಿ.ಜಿ.ರಾವ್ ಸಾವಯವ ಪೋಷಕಾಂಶ ಗೊಬ್ಬರ ತಯಾರಿಕೆ ಮತ್ತು ಬಳಸುವಿಕೆಯ ರೀತಿ, ಗೊಬ್ಬರದ ಪ್ರಮಾಣದ ಕುರಿತು ಸಮಗ್ರವಾಗಿ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಮಾಹಿತಿದಾರ ಮತ್ತು ಗ್ರಾಮದ ಕೃಷಿಕರ ಮಧ್ಯೆ ವಿವಿಧ ಪ್ರಶ್ನೋತ್ತರ ಹಾಗು ಚರ್ಚೆಗಳು ನಡೆಯಿತು.
ಕಾರ್ಯಕ್ರಮದಲ್ಲಿ ಕಳಂಜ ಬಾಳಿಲ ಪ್ರಾಕೃಪಸ ಸಂಘದ ಅಧ್ಯಕ್ಷ ಸುಧಾಕರ.ರೈ ಎ.ಎಂ, ಉಪಾಧ್ಯಕ್ಷ ಲಿಂಗಪ್ಪ ಗೌಡ ತಂಟೆಪ್ಪಾಡಿ, ನಿರ್ದೇಶಕರಾದ ಕುಞ್ಞಂಣ್ಣ ನಾಯ್ಕ ಬಾಳೆಗುಡ್ಡೆ, ಮುಗುಪ್ಪು ಕೂಸಪ್ಪ ಗೌಡ, ವಿಶ್ವನಾಥ ರೈ ಕಳಂಜ, ಕಾರ್ಯನಿರ್ವಹಣಾಧಿಕಾರಿ ವೆಂಕಪ್ಪಯ್ಯ.ಕೆ, ಹಾಗೂ ಕಳಂಜ ಗ್ರಾಮದ ರೈತರು, ಕೃಷಿಕರು ಉಪಸ್ಥಿತರಿದ್ದರು.
ಕಳಂಜ ರೈತ ಸ್ನೇಹಿತರ ಕೂಟದ ಸಂಚಾಲಕ ಪವನ ವೆಂಕಟ್ರಮಣ ಭಟ್ ಪ್ರಸ್ತಾವನೆಗೈದು ಕಾರ್ಯಕ್ರಮ ನಿರೂಪಿಸಿದರು.
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…
ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…
ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…