ಕಳಂಜ : ಕೋಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಶ್ರೀ ದುರ್ಗಾ ಮಾತೆಯ ಸನ್ನಿಧಿಯಲ್ಲಿ ನವರಾತ್ರಿ ಉತ್ಸವ ಜರುಗುತ್ತಿದೆ. ಇದರ ಅಂಗವಾಗಿ ಪ್ರತಿನಿತ್ಯ ಸಂಜೆ 7 ರಿಂದ 8 ರ ತನಕ ವಿವಿಧ ಭಜನಾ ಮಂಡಳಿಗಳ ವತಿಯಿಂದ ಭಜನಾ ಕಾರ್ಯಕ್ರಮ, ಶ್ರೀ ದೇವರ ಸನ್ನಿಧಿಯಲ್ಲಿ ರಂಗಪೂಜೆ ಮುಂತಾದ ಕಾರ್ಯಕ್ರಮಗಳು ಜರುಗುತ್ತಿವೆ.
ಶ್ರೀ ಸತ್ಯಸಾಯಿ ಸೇವಾ ಸಮಿತಿ ಚೊಕ್ಕಾಡಿ, ಶ್ರೀ ರಾಮ ಭಜನಾ ಮಂಡಳಿ ಕಲ್ಲಡ್ಕ, ದೇವರಕಾನ ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂಡಳಿ ಮುರುಳ್ಯ, ಶ್ರೀ ರಾಮ ಭಜನಾ ಮಂಡಳಿ ಕಿಲಂಗೋಡಿ, ಶ್ರೀ ವಿಷ್ಣುಮೂರ್ತಿ ಸೇವಾ ಸಂಘ ಕಳಂಜ, ಶ್ರೀ ದೇವಿ ಭಜನಾ ಮಂಡಳಿ ಚೊಕ್ಕಾಡಿ, ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ಬೆಳ್ಳಾರೆ, ಶ್ರೀ ವಿದ್ಯಾಅನಿಕೇತನ ಶಿಶುಮಂದಿರ ಕಳಂಜ ದ ಮುಂತಾದ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ಜರುಗಿತು.
ಇಂದು ನವರಾತ್ರಿ ಉತ್ಸವ ಸಮಾಪ್ತಿಗೊಳ್ಳಲಿದ್ದು, ಶ್ರೀ ಮಂಜುನಾಥ ಭಜನಾ ಮಂಡಳಿ ಕೋಟೆ ಮುಂಡುಗಾರು ಇವರ ವತಿಯಿಂದ ನೃತ್ಯ ಭಜನೆ, ವೇ.ಮೂ.ಶ್ರೀ ಕಾಯಾರ ಶಾಂತಕುಮಾರ ಭಟ್ಟರ ಹಿರಿತನದಲ್ಲಿ ಸಾಮೂಹಿಕ ಶ್ರೀ ಚಂಡಿಕಾ ಹವನ, ರಂಗಪೂಜೆ ಮುಂತಾದ ಕಾರ್ಯಕ್ರಮಗಳು ಜರುಗಲಿವೆ.
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…