ಕಳಂಜ : ಕೋಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಶ್ರೀ ದುರ್ಗಾ ಮಾತೆಯ ಸನ್ನಿಧಿಯಲ್ಲಿ ನವರಾತ್ರಿ ಉತ್ಸವ ಜರುಗುತ್ತಿದೆ. ಇದರ ಅಂಗವಾಗಿ ಪ್ರತಿನಿತ್ಯ ಸಂಜೆ 7 ರಿಂದ 8 ರ ತನಕ ವಿವಿಧ ಭಜನಾ ಮಂಡಳಿಗಳ ವತಿಯಿಂದ ಭಜನಾ ಕಾರ್ಯಕ್ರಮ, ಶ್ರೀ ದೇವರ ಸನ್ನಿಧಿಯಲ್ಲಿ ರಂಗಪೂಜೆ ಮುಂತಾದ ಕಾರ್ಯಕ್ರಮಗಳು ಜರುಗುತ್ತಿವೆ.
ಶ್ರೀ ಸತ್ಯಸಾಯಿ ಸೇವಾ ಸಮಿತಿ ಚೊಕ್ಕಾಡಿ, ಶ್ರೀ ರಾಮ ಭಜನಾ ಮಂಡಳಿ ಕಲ್ಲಡ್ಕ, ದೇವರಕಾನ ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂಡಳಿ ಮುರುಳ್ಯ, ಶ್ರೀ ರಾಮ ಭಜನಾ ಮಂಡಳಿ ಕಿಲಂಗೋಡಿ, ಶ್ರೀ ವಿಷ್ಣುಮೂರ್ತಿ ಸೇವಾ ಸಂಘ ಕಳಂಜ, ಶ್ರೀ ದೇವಿ ಭಜನಾ ಮಂಡಳಿ ಚೊಕ್ಕಾಡಿ, ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ಬೆಳ್ಳಾರೆ, ಶ್ರೀ ವಿದ್ಯಾಅನಿಕೇತನ ಶಿಶುಮಂದಿರ ಕಳಂಜ ದ ಮುಂತಾದ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ಜರುಗಿತು.
ಇಂದು ನವರಾತ್ರಿ ಉತ್ಸವ ಸಮಾಪ್ತಿಗೊಳ್ಳಲಿದ್ದು, ಶ್ರೀ ಮಂಜುನಾಥ ಭಜನಾ ಮಂಡಳಿ ಕೋಟೆ ಮುಂಡುಗಾರು ಇವರ ವತಿಯಿಂದ ನೃತ್ಯ ಭಜನೆ, ವೇ.ಮೂ.ಶ್ರೀ ಕಾಯಾರ ಶಾಂತಕುಮಾರ ಭಟ್ಟರ ಹಿರಿತನದಲ್ಲಿ ಸಾಮೂಹಿಕ ಶ್ರೀ ಚಂಡಿಕಾ ಹವನ, ರಂಗಪೂಜೆ ಮುಂತಾದ ಕಾರ್ಯಕ್ರಮಗಳು ಜರುಗಲಿವೆ.
ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…