ಕಳಂಜ : ಕೋಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಶ್ರೀ ದುರ್ಗಾ ಮಾತೆಯ ಸನ್ನಿಧಿಯಲ್ಲಿ ನವರಾತ್ರಿ ಉತ್ಸವ ಜರುಗುತ್ತಿದೆ. ಇದರ ಅಂಗವಾಗಿ ಪ್ರತಿನಿತ್ಯ ಸಂಜೆ 7 ರಿಂದ 8 ರ ತನಕ ವಿವಿಧ ಭಜನಾ ಮಂಡಳಿಗಳ ವತಿಯಿಂದ ಭಜನಾ ಕಾರ್ಯಕ್ರಮ, ಶ್ರೀ ದೇವರ ಸನ್ನಿಧಿಯಲ್ಲಿ ರಂಗಪೂಜೆ ಮುಂತಾದ ಕಾರ್ಯಕ್ರಮಗಳು ಜರುಗುತ್ತಿವೆ.
ಶ್ರೀ ಸತ್ಯಸಾಯಿ ಸೇವಾ ಸಮಿತಿ ಚೊಕ್ಕಾಡಿ, ಶ್ರೀ ರಾಮ ಭಜನಾ ಮಂಡಳಿ ಕಲ್ಲಡ್ಕ, ದೇವರಕಾನ ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂಡಳಿ ಮುರುಳ್ಯ, ಶ್ರೀ ರಾಮ ಭಜನಾ ಮಂಡಳಿ ಕಿಲಂಗೋಡಿ, ಶ್ರೀ ವಿಷ್ಣುಮೂರ್ತಿ ಸೇವಾ ಸಂಘ ಕಳಂಜ, ಶ್ರೀ ದೇವಿ ಭಜನಾ ಮಂಡಳಿ ಚೊಕ್ಕಾಡಿ, ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ಬೆಳ್ಳಾರೆ, ಶ್ರೀ ವಿದ್ಯಾಅನಿಕೇತನ ಶಿಶುಮಂದಿರ ಕಳಂಜ ದ ಮುಂತಾದ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ಜರುಗಿತು.
ಇಂದು ನವರಾತ್ರಿ ಉತ್ಸವ ಸಮಾಪ್ತಿಗೊಳ್ಳಲಿದ್ದು, ಶ್ರೀ ಮಂಜುನಾಥ ಭಜನಾ ಮಂಡಳಿ ಕೋಟೆ ಮುಂಡುಗಾರು ಇವರ ವತಿಯಿಂದ ನೃತ್ಯ ಭಜನೆ, ವೇ.ಮೂ.ಶ್ರೀ ಕಾಯಾರ ಶಾಂತಕುಮಾರ ಭಟ್ಟರ ಹಿರಿತನದಲ್ಲಿ ಸಾಮೂಹಿಕ ಶ್ರೀ ಚಂಡಿಕಾ ಹವನ, ರಂಗಪೂಜೆ ಮುಂತಾದ ಕಾರ್ಯಕ್ರಮಗಳು ಜರುಗಲಿವೆ.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…