ಕಳಂಜ : ಕೋಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಶ್ರೀ ದುರ್ಗಾ ಮಾತೆಯ ಸನ್ನಿಧಿಯಲ್ಲಿ ನವರಾತ್ರಿ ಉತ್ಸವ ಜರುಗುತ್ತಿದೆ. ಇದರ ಅಂಗವಾಗಿ ಪ್ರತಿನಿತ್ಯ ಸಂಜೆ 7 ರಿಂದ 8 ರ ತನಕ ವಿವಿಧ ಭಜನಾ ಮಂಡಳಿಗಳ ವತಿಯಿಂದ ಭಜನಾ ಕಾರ್ಯಕ್ರಮ, ಶ್ರೀ ದೇವರ ಸನ್ನಿಧಿಯಲ್ಲಿ ರಂಗಪೂಜೆ ಮುಂತಾದ ಕಾರ್ಯಕ್ರಮಗಳು ಜರುಗುತ್ತಿವೆ.
ಶ್ರೀ ಸತ್ಯಸಾಯಿ ಸೇವಾ ಸಮಿತಿ ಚೊಕ್ಕಾಡಿ, ಶ್ರೀ ರಾಮ ಭಜನಾ ಮಂಡಳಿ ಕಲ್ಲಡ್ಕ, ದೇವರಕಾನ ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂಡಳಿ ಮುರುಳ್ಯ, ಶ್ರೀ ರಾಮ ಭಜನಾ ಮಂಡಳಿ ಕಿಲಂಗೋಡಿ, ಶ್ರೀ ವಿಷ್ಣುಮೂರ್ತಿ ಸೇವಾ ಸಂಘ ಕಳಂಜ, ಶ್ರೀ ದೇವಿ ಭಜನಾ ಮಂಡಳಿ ಚೊಕ್ಕಾಡಿ, ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ಬೆಳ್ಳಾರೆ, ಶ್ರೀ ವಿದ್ಯಾಅನಿಕೇತನ ಶಿಶುಮಂದಿರ ಕಳಂಜ ದ ಮುಂತಾದ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ಜರುಗಿತು.
ಇಂದು ನವರಾತ್ರಿ ಉತ್ಸವ ಸಮಾಪ್ತಿಗೊಳ್ಳಲಿದ್ದು, ಶ್ರೀ ಮಂಜುನಾಥ ಭಜನಾ ಮಂಡಳಿ ಕೋಟೆ ಮುಂಡುಗಾರು ಇವರ ವತಿಯಿಂದ ನೃತ್ಯ ಭಜನೆ, ವೇ.ಮೂ.ಶ್ರೀ ಕಾಯಾರ ಶಾಂತಕುಮಾರ ಭಟ್ಟರ ಹಿರಿತನದಲ್ಲಿ ಸಾಮೂಹಿಕ ಶ್ರೀ ಚಂಡಿಕಾ ಹವನ, ರಂಗಪೂಜೆ ಮುಂತಾದ ಕಾರ್ಯಕ್ರಮಗಳು ಜರುಗಲಿವೆ.
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…