Advertisement
ನಮ್ಮೂರ ಸುದ್ದಿ

ಕೋಟೆ ಫೌಂಡೇಶನ್ ಟ್ರಸ್ಟ್ ವತಿಯಿಂದ ಬ್ಯಾಗ್ ವಿತರಣೆ

Share

ಬೆಳ್ಳಾರೆ: ದಿ| ಕೋಟೆ ವಸಂತಕುಮಾರ್ ಅವರ ಕೋಟೆ ಫೌಂಡೇಶನ್ ವತಿಯಿಂದ ನ್ಯಾಸ್‍ಡಾಗ್ ಹಾಗೂ ಬೆಂಗಳೂರಿನ ರೈಟ್ ಟು ಲಿವ್ ಸಂಸ್ಥೆಗಳ ಪ್ರಾಯೋಜಕತ್ವದಲ್ಲಿ ಕೋಟೆಮುಂಡುಗಾರಿನ ದಕಜಿಪಹಿಪ್ರಾ ಶಾಲಾ ವಿದ್ಯಾರ್ಥಿಗಳು ಹಾಗು ಅಂಗನವಾಡಿ ಮಕ್ಕಳಿಗೆ ಬ್ಯಾಗ್ ವಿತರಣಾ ಕಾರ್ಯಕ್ರಮ ಶಾಲಾ ಸಭಾಂಗಣದಲ್ಲಿ ನಡೆಯಿತು.

ಬ್ಯಾಗ್‍ಗಳನ್ನು ವಿತರಿಸಿ ಮಾತನಡಿದ ಕೋಟೆ ಫೌಂಡೇಶನ್ ಟ್ರಸ್ಟ್ ಸಂಚಾಲಕ ಹಾಗೂ ಬೆಂಗಳೂರಿನ ರೈಟ್ ಟು ಲಿವ್ ಮುಖ್ಯಸ್ಥ ರಘುರಾಮ್ ಕೋಟೆ  ಕಲಿತ ಶಾಲೆಯನ್ನು ನಾವು ಜೀವನದಲ್ಲಿ ಸದಾ ನೆನಪಿಸುತ್ತಿರಬೇಕು ಎಂದು ಹೇಳಿದರು.
ಸುಮಾರು 50ಕ್ಕೂ ಹೆಚ್ಚಿನ ವಿದ್ಯಾರ್ಥಿಗಳಿಗೆ ಬ್ಯಾಗುಗಳನ್ನು ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ಗಂಗಾಧರ ವಹಿಸಿದರು. ವೇದಿಕೆಯಲ್ಲಿ ಗಣಪ್ಪಯ್ಯ ಪೆರುವಾಜೆ, ರೈಟ್ ಟು ಲಿವ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಶ್ರೀಧರ್, ನ್ಯಾಶ್‍ಡಾಗ್ ಸಂಸ್ಥೆಯ ಸದಸ್ಯ ಶ್ರವಣ್‍ಕುಮಾರ್, ಶಾಲಾ ಎಸ್‍ಡಿಎಂಸಿ ಸದಸ್ಯ ಹಾಗು ಕಳಂಜ ಗ್ರಾ.ಪಂ ಸದಸ್ಯ ಲಕ್ಷ್ಮೀಶ ಕಜೆಮೂಲೆ ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕಿ ಮೋಹಿನಿ ಸ್ವಾಗತಿಸಿ, ರಾಣಿ ವಂದಿಸಿದರು. ಹಿರಿಯ ಶಿಕ್ಷಕಿ ರೋಹಿಣಿ ಕಾರ್ಯಕ್ರಮ ನಿರೂಪಿಸಿದರು.

ಮುಂಡುಗಾರಿನ ದಕಜಿಪಹಿಪ್ರಾ ಶಾಲೆಯಲ್ಲಿರುವ ಅತೀ ಬಡ ಕುಟುಂಬದ ವಿದ್ಯಾರ್ಥಿಗಳು ಆರ್ಥಿಕ ಸಂಕಷ್ಟವಿದ್ದರೆ ಮುಂದಿನ ದಿನಗಳಲ್ಲಿ ಅತ್ಯುನ್ನತ ವಿದ್ಯಾಭ್ಯಾಸ ಪಡೆಯಲು ಇಚ್ಛಿಸಿದಲ್ಲಿ ರೈಟ್ ಟು ಲಿವ್ ಸಂಸ್ಥೆಯನ್ನು ಸಂಪರ್ಕಿಸಿದರೆ ಅಂತಹ ವಿದ್ಯಾರ್ಥಿಗಳಿಗೆ ಸಹಾಯದ ಹಸ್ತವನ್ನು ಚಾಚುವುದಾಗಿ ರೈಟ್ ಟು ಲಿವ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಶ್ರೀಧರ್ ಹಾಗೂ ಕೋಟೆ ಫೌಂಡೇಶನ್ ಸಂಚಾಲಕ ರಘುರಾಮ ಕೋಟೆ ಭರವಸೆ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

21 hours ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

21 hours ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

2 days ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

2 days ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

2 days ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

2 days ago