Advertisement
ನಮ್ಮೂರ ಸುದ್ದಿ

ಕೋಟೆ ಫೌಂಡೇಶನ್ ಟ್ರಸ್ಟ್ ವತಿಯಿಂದ ಬ್ಯಾಗ್ ವಿತರಣೆ

Share

ಬೆಳ್ಳಾರೆ: ದಿ| ಕೋಟೆ ವಸಂತಕುಮಾರ್ ಅವರ ಕೋಟೆ ಫೌಂಡೇಶನ್ ವತಿಯಿಂದ ನ್ಯಾಸ್‍ಡಾಗ್ ಹಾಗೂ ಬೆಂಗಳೂರಿನ ರೈಟ್ ಟು ಲಿವ್ ಸಂಸ್ಥೆಗಳ ಪ್ರಾಯೋಜಕತ್ವದಲ್ಲಿ ಕೋಟೆಮುಂಡುಗಾರಿನ ದಕಜಿಪಹಿಪ್ರಾ ಶಾಲಾ ವಿದ್ಯಾರ್ಥಿಗಳು ಹಾಗು ಅಂಗನವಾಡಿ ಮಕ್ಕಳಿಗೆ ಬ್ಯಾಗ್ ವಿತರಣಾ ಕಾರ್ಯಕ್ರಮ ಶಾಲಾ ಸಭಾಂಗಣದಲ್ಲಿ ನಡೆಯಿತು.

ಬ್ಯಾಗ್‍ಗಳನ್ನು ವಿತರಿಸಿ ಮಾತನಡಿದ ಕೋಟೆ ಫೌಂಡೇಶನ್ ಟ್ರಸ್ಟ್ ಸಂಚಾಲಕ ಹಾಗೂ ಬೆಂಗಳೂರಿನ ರೈಟ್ ಟು ಲಿವ್ ಮುಖ್ಯಸ್ಥ ರಘುರಾಮ್ ಕೋಟೆ  ಕಲಿತ ಶಾಲೆಯನ್ನು ನಾವು ಜೀವನದಲ್ಲಿ ಸದಾ ನೆನಪಿಸುತ್ತಿರಬೇಕು ಎಂದು ಹೇಳಿದರು.
ಸುಮಾರು 50ಕ್ಕೂ ಹೆಚ್ಚಿನ ವಿದ್ಯಾರ್ಥಿಗಳಿಗೆ ಬ್ಯಾಗುಗಳನ್ನು ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ಗಂಗಾಧರ ವಹಿಸಿದರು. ವೇದಿಕೆಯಲ್ಲಿ ಗಣಪ್ಪಯ್ಯ ಪೆರುವಾಜೆ, ರೈಟ್ ಟು ಲಿವ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಶ್ರೀಧರ್, ನ್ಯಾಶ್‍ಡಾಗ್ ಸಂಸ್ಥೆಯ ಸದಸ್ಯ ಶ್ರವಣ್‍ಕುಮಾರ್, ಶಾಲಾ ಎಸ್‍ಡಿಎಂಸಿ ಸದಸ್ಯ ಹಾಗು ಕಳಂಜ ಗ್ರಾ.ಪಂ ಸದಸ್ಯ ಲಕ್ಷ್ಮೀಶ ಕಜೆಮೂಲೆ ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕಿ ಮೋಹಿನಿ ಸ್ವಾಗತಿಸಿ, ರಾಣಿ ವಂದಿಸಿದರು. ಹಿರಿಯ ಶಿಕ್ಷಕಿ ರೋಹಿಣಿ ಕಾರ್ಯಕ್ರಮ ನಿರೂಪಿಸಿದರು.

ಮುಂಡುಗಾರಿನ ದಕಜಿಪಹಿಪ್ರಾ ಶಾಲೆಯಲ್ಲಿರುವ ಅತೀ ಬಡ ಕುಟುಂಬದ ವಿದ್ಯಾರ್ಥಿಗಳು ಆರ್ಥಿಕ ಸಂಕಷ್ಟವಿದ್ದರೆ ಮುಂದಿನ ದಿನಗಳಲ್ಲಿ ಅತ್ಯುನ್ನತ ವಿದ್ಯಾಭ್ಯಾಸ ಪಡೆಯಲು ಇಚ್ಛಿಸಿದಲ್ಲಿ ರೈಟ್ ಟು ಲಿವ್ ಸಂಸ್ಥೆಯನ್ನು ಸಂಪರ್ಕಿಸಿದರೆ ಅಂತಹ ವಿದ್ಯಾರ್ಥಿಗಳಿಗೆ ಸಹಾಯದ ಹಸ್ತವನ್ನು ಚಾಚುವುದಾಗಿ ರೈಟ್ ಟು ಲಿವ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಶ್ರೀಧರ್ ಹಾಗೂ ಕೋಟೆ ಫೌಂಡೇಶನ್ ಸಂಚಾಲಕ ರಘುರಾಮ ಕೋಟೆ ಭರವಸೆ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

18 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago