Advertisement
ರಾಜ್ಯ

ಕೋಸ್ಟಲ್ ಫುಡ್ ಫೆಸ್ಟಿವಲ್’ : ಘಮಘಮಿಸಿದ ಭಕ್ಷ್ಯ ಭೋಜನ : ಕರಾವಳಿ ಖಾದ್ಯಕ್ಕೆ ಮನಸೋತ ಗ್ರಾಹಕ

Share

ಮಡಿಕೇರಿ  : ಕರಾವಳಿಯ ವಿಶೇಷ ಮೀನುಗಳ ಭಕ್ಷ್ಯ ಬೋಜನ… ದಕ್ಷಿಣ ಕನ್ನಡದ ಶಾಖಾಹಾರಿ ಪದಾರ್ಥಗಳಿಗೆ ಮನಸೋತ ಜನತೆ… ಮಂಗಳೂರು ಶೈಲಿಯ ಆಹಾರದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ ಗ್ರಾಹಕರು… ಇಂತಹದೊಂದು ವಿಶಿಷ್ಟ ‘ಕೋಸ್ಟಲ್ ಫುಡ್ ಫೆಸ್ಟಿವಲ್’ ಸಿಲಿಕಾನ್ ಸಿಟಿ ಬೆಂಗಳೂರಿನ ಬೊಮ್ಮ ಸಂದ್ರದ ಸೌಥೆಂಡ್ ಹೋಟೆಲ್‍ನಲ್ಲಿ ನಡೆಯಿತು.

Advertisement
Advertisement

ಬೆಂಗಳೂರಿನ ಬೊಮ್ಮಸಂದ್ರದ ಹೊಸೂರು ಮುಖ್ಯ ರಸ್ತೆಯಲ್ಲಿರುವ ಸೌಥೆಂಡ್ ಟಿ.ಜಿ.ಐ ಬೋಟಿಕ್ ಹೊಟೇಲ್‍ನ ಅರ್ಬನ್ ಉಡುಪಿ ರೆಸ್ಟೋರೆಂಟ್‍ನಲ್ಲಿ ‘ಕೋಸ್ಟಲ್ ಫುಡ್ ಫಿಯಸ್ಟಾ’ ಎಂಬ ಆಹಾರ ಮೇಳ ಸಿಲಿಕಾನ್ ಸಿಟಿ ಬೆಂಗಳೂರಿನ ಜನತೆಯನ್ನು ತನ್ನತ್ತ ಆಕರ್ಷಿಸಿತು. ಆಹಾರ ಮೇಳದಲ್ಲಿ ವಿವಿಧ ಬಗೆಯ ಮೀನುಗಳ ಫ್ರೈ, ಮಂಗಳೂರು ಶೈಲಿಯ ನಾನಾ ಬಗೆಯ ಸ್ವಾದಿಷ್ಟಕರ ಮೀನಿನ, ಏಡಿಗಳ ಖಾದ್ಯ ಹಾಗೂ ಕರಾವಳಿಯ ಇತರ ಆಹಾರ ಪದಾರ್ಥಗಳು ಗಮ್ಮೆಂದವು. ಒಂದೆಡೆ ಆಹಾರ ಮೇಳದಲ್ಲಿ ಕರಾವಳಿ ಆಹಾರದ ರುಚಿ ಸವಿಯುತ್ತಿದ್ದ ಗ್ರಾಹಕರಿಗೆ ಬೆಂಗಳೂರು ಕಲಾವಿದರ ಸುಮಧುರ ಸಂಗೀತ ವಿಶೇಷ ರಸದೌತಣ ನೀಡಿತು.

ಜು. 21ರ ವರೆಗೆ ನಡೆಯಲಿರುವ ಆಹಾರ ಮೇಳವನ್ನು ಮೂಲತಃ ಕೊಡಗಿನ ಮರಗೋಡಿನ ನಿವಾಸಿ ಬೆಂಗಳೂರಿನಲ್ಲಿ ನೆಲೆಸಿರುವ ಬಿಜೆಪಿ ಮುಖಂಡ ಚೆರಿಯಮನೆ ರತ್ನಕುಮಾರ್ ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಬೊಮ್ಮಸಂದ್ರದ ಪುರಸಭಾ ಕಮಿಷನರ್ ರಮೇಶ್, ಹೆಬ್ಗೋಡಿ ನಗರಸಭಾ ಕಮಿಷನರ್ ನರಸಿಂಹ ಮೂರ್ತಿ, ಉಪಾಧ್ಯಕ್ಷ ರಾಜೇಂದ್ರ, ಸದಸ್ಯ ರಕೇಶ್, ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆಯ ಜಂಟಿ ನಿರ್ದೇಕ ಪ್ರಭಾಕರ್, ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಪ್ರದಾನ ವ್ಯವಸ್ಥಾಪಕರಾದ ಜಿ.ವಿ. ಚಂದ್ರಕುಮಾರ್, ಡಿ.ವೈ.ಎಸ್.ಪಿ. ನಂಜುಂಡಗೌಡ, ಎಂ.ಆರ್.ಎಫ್ ಟಯರ್ಸ್‍ನ ಕಿರಣ್ ಕುಮಾರ್, ಬೆಂಗಳೂರು ಕೆಂಪೇಗೌಡ ಒಕ್ಕಲಿಗರ ಸಂಘದ ಪದಾಧಿಕಾರಿಗಳಾದ ಶೈಲೇಶ್, ಸೂರಿ, ಕಾಂತರಾಜು, ನಾಗರಾಜು, ರಾಜು, ಬೆಂಗಳೂರು ಇಸ್ರೋ ಕೇಂದ್ರದ ರವಿಗೌಡ, ಬಿಜೆಪಿ ಮುಖಂಡ ಪುರುಷೋತ್ತಮ ಮತ್ತಿತರರು ಉಪಸ್ಥಿತರಿದ್ದರು.

ಕೋಸ್ಟಲ್ ಫುಡ್ ಫಿಯಿಸ್ಟಾದಲ್ಲಿ ಕೃತಕ ಮರದ ದೋಣಿಯನ್ನು ತಯಾರಿಸಿ ಅದರ ಮೇಲೆ ವಿವಿಧ ಬಗೆಯ ಕರಾವಳಿಯ ಖಾದ್ಯಗಳನ್ನು ಅಲಂಕರಿಸ್ಪಟ್ಟಿದ್ದು, ಮೇಳದ ವಿಶೇಷವಾಗಿತ್ತು.
ಸೌಥೆಂಡ್ ಹೋಟೆಲ್‍ನ ನಿರ್ದೇಶಕರುಗಳಾದ ಪದ್ಮನಾಭ ಪಾಯಡ್, ಪ್ರದಾ ಶೆಟ್ಟಿ, ಚೆರಿಯಮನೆ ರತ್ನಕುಮಾರ್, ಹೋಟೆಲ್‍ನ ವ್ಯವಸ್ಥಪಕರಾದ ಅರುಣ್ ಪ್ರಸಾದ್, ಸುಂಟಿಕೊಪ್ಪ ಕೀರ್ತನ್ ಇವರುಗಳ ಮಾರ್ಗದರ್ಶನದಲ್ಲಿ ನಡೆದ ಆಹಾರ ಉತ್ಸವ ಯಶಸ್ವಿಯೊಂದಿಗೆ ಜನಪ್ರಿಯತೆ ಪಡೆದುಕೊಂಡಿತು. ಈ ಕೋಸ್ಟಲ್ ಫುಡ್ ಫೆಸ್ಟಿವಲ್ ಜು. 21ರ ವರೆಗೆ ನಡೆಯಲಿದ್ದು, ಭಾಗವಹಿಸುವವರು ಮೊ.ಸಂ. 7094492803 ನ್ನು ಸಂಪರ್ಕಿಸಬಹುದಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಬಳಕೆಯ ನಿಯಂತ್ರಣಕ್ಕೆ ‘MPOWER’ ನೀತಿ ಅಗತ್ಯ : ವಿಶ್ವ ಆರೋಗ್ಯ ಸಂಸ್ಥೆ

ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…

3 hours ago

ಅರೆಕಾನಟ್ ಚಾಲೆಂಜ್ : ಅಡಿಕೆ ನಿಯಂತ್ರಣ ಕುರಿತು WHO ಉತ್ಸುಕತೆ – ಕ್ಲಿನಿಕಲ್ ಪರೀಕ್ಷೆಗಳ ಅಗತ್ಯಕ್ಕೆ ತಜ್ಞರ ಒತ್ತಾಯ

ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…

3 hours ago

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ

ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…

13 hours ago

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ

ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…

13 hours ago

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ

ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್‌…

13 hours ago

ಮಾಯಾಮೃಗ ಮಾಯಾಮೃಗ….

ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…

13 hours ago