Advertisement
ರಾಜ್ಯ

ಕೋಸ್ಟಲ್ ಫುಡ್ ಫೆಸ್ಟಿವಲ್’ : ಘಮಘಮಿಸಿದ ಭಕ್ಷ್ಯ ಭೋಜನ : ಕರಾವಳಿ ಖಾದ್ಯಕ್ಕೆ ಮನಸೋತ ಗ್ರಾಹಕ

Share

ಮಡಿಕೇರಿ  : ಕರಾವಳಿಯ ವಿಶೇಷ ಮೀನುಗಳ ಭಕ್ಷ್ಯ ಬೋಜನ… ದಕ್ಷಿಣ ಕನ್ನಡದ ಶಾಖಾಹಾರಿ ಪದಾರ್ಥಗಳಿಗೆ ಮನಸೋತ ಜನತೆ… ಮಂಗಳೂರು ಶೈಲಿಯ ಆಹಾರದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ ಗ್ರಾಹಕರು… ಇಂತಹದೊಂದು ವಿಶಿಷ್ಟ ‘ಕೋಸ್ಟಲ್ ಫುಡ್ ಫೆಸ್ಟಿವಲ್’ ಸಿಲಿಕಾನ್ ಸಿಟಿ ಬೆಂಗಳೂರಿನ ಬೊಮ್ಮ ಸಂದ್ರದ ಸೌಥೆಂಡ್ ಹೋಟೆಲ್‍ನಲ್ಲಿ ನಡೆಯಿತು.

ಬೆಂಗಳೂರಿನ ಬೊಮ್ಮಸಂದ್ರದ ಹೊಸೂರು ಮುಖ್ಯ ರಸ್ತೆಯಲ್ಲಿರುವ ಸೌಥೆಂಡ್ ಟಿ.ಜಿ.ಐ ಬೋಟಿಕ್ ಹೊಟೇಲ್‍ನ ಅರ್ಬನ್ ಉಡುಪಿ ರೆಸ್ಟೋರೆಂಟ್‍ನಲ್ಲಿ ‘ಕೋಸ್ಟಲ್ ಫುಡ್ ಫಿಯಸ್ಟಾ’ ಎಂಬ ಆಹಾರ ಮೇಳ ಸಿಲಿಕಾನ್ ಸಿಟಿ ಬೆಂಗಳೂರಿನ ಜನತೆಯನ್ನು ತನ್ನತ್ತ ಆಕರ್ಷಿಸಿತು. ಆಹಾರ ಮೇಳದಲ್ಲಿ ವಿವಿಧ ಬಗೆಯ ಮೀನುಗಳ ಫ್ರೈ, ಮಂಗಳೂರು ಶೈಲಿಯ ನಾನಾ ಬಗೆಯ ಸ್ವಾದಿಷ್ಟಕರ ಮೀನಿನ, ಏಡಿಗಳ ಖಾದ್ಯ ಹಾಗೂ ಕರಾವಳಿಯ ಇತರ ಆಹಾರ ಪದಾರ್ಥಗಳು ಗಮ್ಮೆಂದವು. ಒಂದೆಡೆ ಆಹಾರ ಮೇಳದಲ್ಲಿ ಕರಾವಳಿ ಆಹಾರದ ರುಚಿ ಸವಿಯುತ್ತಿದ್ದ ಗ್ರಾಹಕರಿಗೆ ಬೆಂಗಳೂರು ಕಲಾವಿದರ ಸುಮಧುರ ಸಂಗೀತ ವಿಶೇಷ ರಸದೌತಣ ನೀಡಿತು.

ಜು. 21ರ ವರೆಗೆ ನಡೆಯಲಿರುವ ಆಹಾರ ಮೇಳವನ್ನು ಮೂಲತಃ ಕೊಡಗಿನ ಮರಗೋಡಿನ ನಿವಾಸಿ ಬೆಂಗಳೂರಿನಲ್ಲಿ ನೆಲೆಸಿರುವ ಬಿಜೆಪಿ ಮುಖಂಡ ಚೆರಿಯಮನೆ ರತ್ನಕುಮಾರ್ ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಬೊಮ್ಮಸಂದ್ರದ ಪುರಸಭಾ ಕಮಿಷನರ್ ರಮೇಶ್, ಹೆಬ್ಗೋಡಿ ನಗರಸಭಾ ಕಮಿಷನರ್ ನರಸಿಂಹ ಮೂರ್ತಿ, ಉಪಾಧ್ಯಕ್ಷ ರಾಜೇಂದ್ರ, ಸದಸ್ಯ ರಕೇಶ್, ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆಯ ಜಂಟಿ ನಿರ್ದೇಕ ಪ್ರಭಾಕರ್, ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಪ್ರದಾನ ವ್ಯವಸ್ಥಾಪಕರಾದ ಜಿ.ವಿ. ಚಂದ್ರಕುಮಾರ್, ಡಿ.ವೈ.ಎಸ್.ಪಿ. ನಂಜುಂಡಗೌಡ, ಎಂ.ಆರ್.ಎಫ್ ಟಯರ್ಸ್‍ನ ಕಿರಣ್ ಕುಮಾರ್, ಬೆಂಗಳೂರು ಕೆಂಪೇಗೌಡ ಒಕ್ಕಲಿಗರ ಸಂಘದ ಪದಾಧಿಕಾರಿಗಳಾದ ಶೈಲೇಶ್, ಸೂರಿ, ಕಾಂತರಾಜು, ನಾಗರಾಜು, ರಾಜು, ಬೆಂಗಳೂರು ಇಸ್ರೋ ಕೇಂದ್ರದ ರವಿಗೌಡ, ಬಿಜೆಪಿ ಮುಖಂಡ ಪುರುಷೋತ್ತಮ ಮತ್ತಿತರರು ಉಪಸ್ಥಿತರಿದ್ದರು.

ಕೋಸ್ಟಲ್ ಫುಡ್ ಫಿಯಿಸ್ಟಾದಲ್ಲಿ ಕೃತಕ ಮರದ ದೋಣಿಯನ್ನು ತಯಾರಿಸಿ ಅದರ ಮೇಲೆ ವಿವಿಧ ಬಗೆಯ ಕರಾವಳಿಯ ಖಾದ್ಯಗಳನ್ನು ಅಲಂಕರಿಸ್ಪಟ್ಟಿದ್ದು, ಮೇಳದ ವಿಶೇಷವಾಗಿತ್ತು.
ಸೌಥೆಂಡ್ ಹೋಟೆಲ್‍ನ ನಿರ್ದೇಶಕರುಗಳಾದ ಪದ್ಮನಾಭ ಪಾಯಡ್, ಪ್ರದಾ ಶೆಟ್ಟಿ, ಚೆರಿಯಮನೆ ರತ್ನಕುಮಾರ್, ಹೋಟೆಲ್‍ನ ವ್ಯವಸ್ಥಪಕರಾದ ಅರುಣ್ ಪ್ರಸಾದ್, ಸುಂಟಿಕೊಪ್ಪ ಕೀರ್ತನ್ ಇವರುಗಳ ಮಾರ್ಗದರ್ಶನದಲ್ಲಿ ನಡೆದ ಆಹಾರ ಉತ್ಸವ ಯಶಸ್ವಿಯೊಂದಿಗೆ ಜನಪ್ರಿಯತೆ ಪಡೆದುಕೊಂಡಿತು. ಈ ಕೋಸ್ಟಲ್ ಫುಡ್ ಫೆಸ್ಟಿವಲ್ ಜು. 21ರ ವರೆಗೆ ನಡೆಯಲಿದ್ದು, ಭಾಗವಹಿಸುವವರು ಮೊ.ಸಂ. 7094492803 ನ್ನು ಸಂಪರ್ಕಿಸಬಹುದಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

3 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

4 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 day ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago