ಕೌಕ್ರಾಡಿ: ಶಾಲಾ ವಿದ್ಯಾರ್ಥಿಗಳು ಪ್ರವಾಸಕ್ಕೆಂದು ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಹಲವರು ಗಾಯಗೊಂಡ ಘಟನೆ ನೆಲ್ಯಾಡಿ ಸಮೀಪದ ಕೊಕ್ಕಡ ಎಂಬಲ್ಲಿ ಶುಕ್ರವಾರದಂದು ಸಂಭವಿಸಿದೆ.
ಬೆಳಗಾವಿ ಜಿಲ್ಲೆಯ ಶಾಲಾ ವಿದ್ಯಾರ್ಥಿಗಳು ಶೈಕ್ಷಣಿಕ ಖಾಸಗಿ ಬಸ್ ನಲ್ಲಿ ಪ್ರವಾಸ ತೆರಳುತ್ತಿದ್ದ ವೇಳೆ ಕೊಕ್ಕಡ ಸಮೀಪದ ಕಾಪಿನ ಬಾಗಿಲು ಎಂಬಲ್ಲಿ ತಮಿಳುನಾಡು ಮೂಲದವರಿದ್ದ ಕಾರು ನಡುವೆ ಢಿಕ್ಕಿ ಸಂಭವಿಸಿ ಬಸ್ಸು ಪಲ್ಟಿಯಾಗಿದೆ. ಬಸ್ ನಲ್ಲಿ ಸುಮಾರು 50 ವಿದ್ಯಾರ್ಥಿಗಳಿದ್ದರು ಎಂದು ಹೇಳಲಾಗಿದೆ. ಘಟನೆಯಲ್ಲಿ 15 ಮಕ್ಕಳು, ಶಿಕ್ಷಕ ಹಾಗೂ ಚಾಲಕ ಗಾಯಗೊಂಡಿದ್ದು ಅವರನ್ನು ಬೆಳ್ತಂಗಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಉಪ್ಪಿನಂಗಡಿ, ನೆಲ್ಯಾಡಿ, ಧರ್ಮಸ್ಥಳ ಪೊಲೀಸ್ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಕಾರ್ ವಿರುದ್ಧ ದಿಕ್ಕಿನಲ್ಲಿ ಬಂದ ಕಾರಣ ಬಸ್ ಮಗುಚಿ ಬಿದ್ದು ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…