ಕುಂಬ್ರ:ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ಕಾವು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಕೆರೆಗೆ ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಡೆದಿದೆ.
ಮೃತರನ್ನು ಶುಂಠಿ ಕೊಪ್ಪ ನಿವಾಸಿಗಳೆಂದು ಅಶೋಕ್ ಎಂಬವರ ಕುಟುಂಬ ಎಂದು ತಿಳಿದುಬಂದಿದ್ದು, ಓರ್ವ ಪುರುಷ, ಮಹಿಳೆ ಮತ್ತು ಇಬ್ಬರು ಕಾರಿನಲ್ಲಿದ್ದು ಒಂದೇ ಕುಟುಂಬದವರೆಂದು ಸ್ಥಳೀಯರು ತಿಳಿಸಿದ್ದಾರೆ.
ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.
ಕೌಡಿಚಾರ್ ಬಳಿ ಬೆಳಿಗ್ಗೆ 7 ಗಂಟೆಯ ಹೊತ್ತಿಗೆ ಪುತ್ತೂರು ತಾಲೂಕು ಕೌಡಿಚಾರ್-ಅರಿಯಡ್ಕ ಮಧ್ಯೆ ಮಡ್ಯಂಗಳ ಎಂಬಲ್ಲಿ ಆಲ್ಟೊ ಕಾರು ರಸ್ತೆಬದಿಯ ಕೆರೆಗೆ ಬಿದ್ದಿತ್ತು.ಕಾರು ಸುಳ್ಯ ಕಡೆಯಿಂದ ಪುತ್ತೂರು ಕಡೆಗೆ ಹೋಗುತ್ತಿತ್ತು. ರಸ್ತೆಬದಿಯ ಕೆರೆಗೆ ಕಾರು ಬಿದ್ದ ಶಬ್ದ ಕೇಳಿ ಸಮೀಪದ ಮನೆಯವರು ಓಡಿ ಬಂದು ನೋಡುವಾಗ ಕಾರು ನೀರಲ್ಲಿ ಮುಳುಗಿರುವುದು ಗೊತ್ತಾಯಿತು. ಬಳಿಕ ಜನ ಸೇರಿ ಕಾರಿನಲ್ಲಿದ್ದ ನಾಲ್ವರನ್ನೂ ಹೊರತೆಗೆಯಲಾಯಿತು. ಆದರೆ ಆ ವೇಳೆಗಾಗಲೇ ನಾಲ್ಲರೂ ಕೊನೆಯುಸಿರೆಳೆದಿದ್ದರು.ಆಲ್ಟೊ ಕಾರು ಇದಾಗಿದೆ. ಮೃತದೇಹಗಳನ್ನು ಪುತ್ತೂರಿನ ಆಸ್ಪತ್ರೆಗೆ ಕಳುಹಿಸಲಾಗಿದೆ.
ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…
ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…