ಕುಂಬ್ರ:ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ಕಾವು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಕೆರೆಗೆ ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಡೆದಿದೆ.
ಮೃತರನ್ನು ಶುಂಠಿ ಕೊಪ್ಪ ನಿವಾಸಿಗಳೆಂದು ಅಶೋಕ್ ಎಂಬವರ ಕುಟುಂಬ ಎಂದು ತಿಳಿದುಬಂದಿದ್ದು, ಓರ್ವ ಪುರುಷ, ಮಹಿಳೆ ಮತ್ತು ಇಬ್ಬರು ಕಾರಿನಲ್ಲಿದ್ದು ಒಂದೇ ಕುಟುಂಬದವರೆಂದು ಸ್ಥಳೀಯರು ತಿಳಿಸಿದ್ದಾರೆ.
ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.
ಕೌಡಿಚಾರ್ ಬಳಿ ಬೆಳಿಗ್ಗೆ 7 ಗಂಟೆಯ ಹೊತ್ತಿಗೆ ಪುತ್ತೂರು ತಾಲೂಕು ಕೌಡಿಚಾರ್-ಅರಿಯಡ್ಕ ಮಧ್ಯೆ ಮಡ್ಯಂಗಳ ಎಂಬಲ್ಲಿ ಆಲ್ಟೊ ಕಾರು ರಸ್ತೆಬದಿಯ ಕೆರೆಗೆ ಬಿದ್ದಿತ್ತು.ಕಾರು ಸುಳ್ಯ ಕಡೆಯಿಂದ ಪುತ್ತೂರು ಕಡೆಗೆ ಹೋಗುತ್ತಿತ್ತು. ರಸ್ತೆಬದಿಯ ಕೆರೆಗೆ ಕಾರು ಬಿದ್ದ ಶಬ್ದ ಕೇಳಿ ಸಮೀಪದ ಮನೆಯವರು ಓಡಿ ಬಂದು ನೋಡುವಾಗ ಕಾರು ನೀರಲ್ಲಿ ಮುಳುಗಿರುವುದು ಗೊತ್ತಾಯಿತು. ಬಳಿಕ ಜನ ಸೇರಿ ಕಾರಿನಲ್ಲಿದ್ದ ನಾಲ್ವರನ್ನೂ ಹೊರತೆಗೆಯಲಾಯಿತು. ಆದರೆ ಆ ವೇಳೆಗಾಗಲೇ ನಾಲ್ಲರೂ ಕೊನೆಯುಸಿರೆಳೆದಿದ್ದರು.ಆಲ್ಟೊ ಕಾರು ಇದಾಗಿದೆ. ಮೃತದೇಹಗಳನ್ನು ಪುತ್ತೂರಿನ ಆಸ್ಪತ್ರೆಗೆ ಕಳುಹಿಸಲಾಗಿದೆ.
ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…
ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…