ಕುಂಬ್ರ:ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ಕಾವು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಕೆರೆಗೆ ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಡೆದಿದೆ.
ಮೃತರನ್ನು ಶುಂಠಿ ಕೊಪ್ಪ ನಿವಾಸಿಗಳೆಂದು ಅಶೋಕ್ ಎಂಬವರ ಕುಟುಂಬ ಎಂದು ತಿಳಿದುಬಂದಿದ್ದು, ಓರ್ವ ಪುರುಷ, ಮಹಿಳೆ ಮತ್ತು ಇಬ್ಬರು ಕಾರಿನಲ್ಲಿದ್ದು ಒಂದೇ ಕುಟುಂಬದವರೆಂದು ಸ್ಥಳೀಯರು ತಿಳಿಸಿದ್ದಾರೆ.
ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.
ಕೌಡಿಚಾರ್ ಬಳಿ ಬೆಳಿಗ್ಗೆ 7 ಗಂಟೆಯ ಹೊತ್ತಿಗೆ ಪುತ್ತೂರು ತಾಲೂಕು ಕೌಡಿಚಾರ್-ಅರಿಯಡ್ಕ ಮಧ್ಯೆ ಮಡ್ಯಂಗಳ ಎಂಬಲ್ಲಿ ಆಲ್ಟೊ ಕಾರು ರಸ್ತೆಬದಿಯ ಕೆರೆಗೆ ಬಿದ್ದಿತ್ತು.ಕಾರು ಸುಳ್ಯ ಕಡೆಯಿಂದ ಪುತ್ತೂರು ಕಡೆಗೆ ಹೋಗುತ್ತಿತ್ತು. ರಸ್ತೆಬದಿಯ ಕೆರೆಗೆ ಕಾರು ಬಿದ್ದ ಶಬ್ದ ಕೇಳಿ ಸಮೀಪದ ಮನೆಯವರು ಓಡಿ ಬಂದು ನೋಡುವಾಗ ಕಾರು ನೀರಲ್ಲಿ ಮುಳುಗಿರುವುದು ಗೊತ್ತಾಯಿತು. ಬಳಿಕ ಜನ ಸೇರಿ ಕಾರಿನಲ್ಲಿದ್ದ ನಾಲ್ವರನ್ನೂ ಹೊರತೆಗೆಯಲಾಯಿತು. ಆದರೆ ಆ ವೇಳೆಗಾಗಲೇ ನಾಲ್ಲರೂ ಕೊನೆಯುಸಿರೆಳೆದಿದ್ದರು.ಆಲ್ಟೊ ಕಾರು ಇದಾಗಿದೆ. ಮೃತದೇಹಗಳನ್ನು ಪುತ್ತೂರಿನ ಆಸ್ಪತ್ರೆಗೆ ಕಳುಹಿಸಲಾಗಿದೆ.
ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…
ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…
ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…
‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490