ಕುಂಬ್ರ:ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ಕಾವು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಕೆರೆಗೆ ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಡೆದಿದೆ.
ಮೃತರನ್ನು ಶುಂಠಿ ಕೊಪ್ಪ ನಿವಾಸಿಗಳೆಂದು ಅಶೋಕ್ ಎಂಬವರ ಕುಟುಂಬ ಎಂದು ತಿಳಿದುಬಂದಿದ್ದು, ಓರ್ವ ಪುರುಷ, ಮಹಿಳೆ ಮತ್ತು ಇಬ್ಬರು ಕಾರಿನಲ್ಲಿದ್ದು ಒಂದೇ ಕುಟುಂಬದವರೆಂದು ಸ್ಥಳೀಯರು ತಿಳಿಸಿದ್ದಾರೆ.
ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.
ಕೌಡಿಚಾರ್ ಬಳಿ ಬೆಳಿಗ್ಗೆ 7 ಗಂಟೆಯ ಹೊತ್ತಿಗೆ ಪುತ್ತೂರು ತಾಲೂಕು ಕೌಡಿಚಾರ್-ಅರಿಯಡ್ಕ ಮಧ್ಯೆ ಮಡ್ಯಂಗಳ ಎಂಬಲ್ಲಿ ಆಲ್ಟೊ ಕಾರು ರಸ್ತೆಬದಿಯ ಕೆರೆಗೆ ಬಿದ್ದಿತ್ತು.ಕಾರು ಸುಳ್ಯ ಕಡೆಯಿಂದ ಪುತ್ತೂರು ಕಡೆಗೆ ಹೋಗುತ್ತಿತ್ತು. ರಸ್ತೆಬದಿಯ ಕೆರೆಗೆ ಕಾರು ಬಿದ್ದ ಶಬ್ದ ಕೇಳಿ ಸಮೀಪದ ಮನೆಯವರು ಓಡಿ ಬಂದು ನೋಡುವಾಗ ಕಾರು ನೀರಲ್ಲಿ ಮುಳುಗಿರುವುದು ಗೊತ್ತಾಯಿತು. ಬಳಿಕ ಜನ ಸೇರಿ ಕಾರಿನಲ್ಲಿದ್ದ ನಾಲ್ವರನ್ನೂ ಹೊರತೆಗೆಯಲಾಯಿತು. ಆದರೆ ಆ ವೇಳೆಗಾಗಲೇ ನಾಲ್ಲರೂ ಕೊನೆಯುಸಿರೆಳೆದಿದ್ದರು.ಆಲ್ಟೊ ಕಾರು ಇದಾಗಿದೆ. ಮೃತದೇಹಗಳನ್ನು ಪುತ್ತೂರಿನ ಆಸ್ಪತ್ರೆಗೆ ಕಳುಹಿಸಲಾಗಿದೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…