ಕುಂಬ್ರ:ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ಕಾವು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಕೆರೆಗೆ ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಡೆದಿದೆ.
ಮೃತರನ್ನು ಶುಂಠಿ ಕೊಪ್ಪ ನಿವಾಸಿಗಳೆಂದು ಅಶೋಕ್ ಎಂಬವರ ಕುಟುಂಬ ಎಂದು ತಿಳಿದುಬಂದಿದ್ದು, ಓರ್ವ ಪುರುಷ, ಮಹಿಳೆ ಮತ್ತು ಇಬ್ಬರು ಕಾರಿನಲ್ಲಿದ್ದು ಒಂದೇ ಕುಟುಂಬದವರೆಂದು ಸ್ಥಳೀಯರು ತಿಳಿಸಿದ್ದಾರೆ.
ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.
ಕೌಡಿಚಾರ್ ಬಳಿ ಬೆಳಿಗ್ಗೆ 7 ಗಂಟೆಯ ಹೊತ್ತಿಗೆ ಪುತ್ತೂರು ತಾಲೂಕು ಕೌಡಿಚಾರ್-ಅರಿಯಡ್ಕ ಮಧ್ಯೆ ಮಡ್ಯಂಗಳ ಎಂಬಲ್ಲಿ ಆಲ್ಟೊ ಕಾರು ರಸ್ತೆಬದಿಯ ಕೆರೆಗೆ ಬಿದ್ದಿತ್ತು.ಕಾರು ಸುಳ್ಯ ಕಡೆಯಿಂದ ಪುತ್ತೂರು ಕಡೆಗೆ ಹೋಗುತ್ತಿತ್ತು. ರಸ್ತೆಬದಿಯ ಕೆರೆಗೆ ಕಾರು ಬಿದ್ದ ಶಬ್ದ ಕೇಳಿ ಸಮೀಪದ ಮನೆಯವರು ಓಡಿ ಬಂದು ನೋಡುವಾಗ ಕಾರು ನೀರಲ್ಲಿ ಮುಳುಗಿರುವುದು ಗೊತ್ತಾಯಿತು. ಬಳಿಕ ಜನ ಸೇರಿ ಕಾರಿನಲ್ಲಿದ್ದ ನಾಲ್ವರನ್ನೂ ಹೊರತೆಗೆಯಲಾಯಿತು. ಆದರೆ ಆ ವೇಳೆಗಾಗಲೇ ನಾಲ್ಲರೂ ಕೊನೆಯುಸಿರೆಳೆದಿದ್ದರು.ಆಲ್ಟೊ ಕಾರು ಇದಾಗಿದೆ. ಮೃತದೇಹಗಳನ್ನು ಪುತ್ತೂರಿನ ಆಸ್ಪತ್ರೆಗೆ ಕಳುಹಿಸಲಾಗಿದೆ.
ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…