ಕುಂಬ್ರ:ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ಕಾವು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಕೆರೆಗೆ ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಡೆದಿದೆ.
ಮೃತರನ್ನು ಶುಂಠಿ ಕೊಪ್ಪ ನಿವಾಸಿಗಳೆಂದು ಅಶೋಕ್ ಎಂಬವರ ಕುಟುಂಬ ಎಂದು ತಿಳಿದುಬಂದಿದ್ದು, ಓರ್ವ ಪುರುಷ, ಮಹಿಳೆ ಮತ್ತು ಇಬ್ಬರು ಕಾರಿನಲ್ಲಿದ್ದು ಒಂದೇ ಕುಟುಂಬದವರೆಂದು ಸ್ಥಳೀಯರು ತಿಳಿಸಿದ್ದಾರೆ.
ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.
ಕೌಡಿಚಾರ್ ಬಳಿ ಬೆಳಿಗ್ಗೆ 7 ಗಂಟೆಯ ಹೊತ್ತಿಗೆ ಪುತ್ತೂರು ತಾಲೂಕು ಕೌಡಿಚಾರ್-ಅರಿಯಡ್ಕ ಮಧ್ಯೆ ಮಡ್ಯಂಗಳ ಎಂಬಲ್ಲಿ ಆಲ್ಟೊ ಕಾರು ರಸ್ತೆಬದಿಯ ಕೆರೆಗೆ ಬಿದ್ದಿತ್ತು.ಕಾರು ಸುಳ್ಯ ಕಡೆಯಿಂದ ಪುತ್ತೂರು ಕಡೆಗೆ ಹೋಗುತ್ತಿತ್ತು. ರಸ್ತೆಬದಿಯ ಕೆರೆಗೆ ಕಾರು ಬಿದ್ದ ಶಬ್ದ ಕೇಳಿ ಸಮೀಪದ ಮನೆಯವರು ಓಡಿ ಬಂದು ನೋಡುವಾಗ ಕಾರು ನೀರಲ್ಲಿ ಮುಳುಗಿರುವುದು ಗೊತ್ತಾಯಿತು. ಬಳಿಕ ಜನ ಸೇರಿ ಕಾರಿನಲ್ಲಿದ್ದ ನಾಲ್ವರನ್ನೂ ಹೊರತೆಗೆಯಲಾಯಿತು. ಆದರೆ ಆ ವೇಳೆಗಾಗಲೇ ನಾಲ್ಲರೂ ಕೊನೆಯುಸಿರೆಳೆದಿದ್ದರು.ಆಲ್ಟೊ ಕಾರು ಇದಾಗಿದೆ. ಮೃತದೇಹಗಳನ್ನು ಪುತ್ತೂರಿನ ಆಸ್ಪತ್ರೆಗೆ ಕಳುಹಿಸಲಾಗಿದೆ.
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…