ಕುಂಬ್ರ:ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ಕಾವು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಕೆರೆಗೆ ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಡೆದಿದೆ.
ಮೃತರನ್ನು ಶುಂಠಿ ಕೊಪ್ಪ ನಿವಾಸಿಗಳೆಂದು ಅಶೋಕ್ ಎಂಬವರ ಕುಟುಂಬ ಎಂದು ತಿಳಿದುಬಂದಿದ್ದು, ಓರ್ವ ಪುರುಷ, ಮಹಿಳೆ ಮತ್ತು ಇಬ್ಬರು ಕಾರಿನಲ್ಲಿದ್ದು ಒಂದೇ ಕುಟುಂಬದವರೆಂದು ಸ್ಥಳೀಯರು ತಿಳಿಸಿದ್ದಾರೆ.
ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.
ಕೌಡಿಚಾರ್ ಬಳಿ ಬೆಳಿಗ್ಗೆ 7 ಗಂಟೆಯ ಹೊತ್ತಿಗೆ ಪುತ್ತೂರು ತಾಲೂಕು ಕೌಡಿಚಾರ್-ಅರಿಯಡ್ಕ ಮಧ್ಯೆ ಮಡ್ಯಂಗಳ ಎಂಬಲ್ಲಿ ಆಲ್ಟೊ ಕಾರು ರಸ್ತೆಬದಿಯ ಕೆರೆಗೆ ಬಿದ್ದಿತ್ತು.ಕಾರು ಸುಳ್ಯ ಕಡೆಯಿಂದ ಪುತ್ತೂರು ಕಡೆಗೆ ಹೋಗುತ್ತಿತ್ತು. ರಸ್ತೆಬದಿಯ ಕೆರೆಗೆ ಕಾರು ಬಿದ್ದ ಶಬ್ದ ಕೇಳಿ ಸಮೀಪದ ಮನೆಯವರು ಓಡಿ ಬಂದು ನೋಡುವಾಗ ಕಾರು ನೀರಲ್ಲಿ ಮುಳುಗಿರುವುದು ಗೊತ್ತಾಯಿತು. ಬಳಿಕ ಜನ ಸೇರಿ ಕಾರಿನಲ್ಲಿದ್ದ ನಾಲ್ವರನ್ನೂ ಹೊರತೆಗೆಯಲಾಯಿತು. ಆದರೆ ಆ ವೇಳೆಗಾಗಲೇ ನಾಲ್ಲರೂ ಕೊನೆಯುಸಿರೆಳೆದಿದ್ದರು.ಆಲ್ಟೊ ಕಾರು ಇದಾಗಿದೆ. ಮೃತದೇಹಗಳನ್ನು ಪುತ್ತೂರಿನ ಆಸ್ಪತ್ರೆಗೆ ಕಳುಹಿಸಲಾಗಿದೆ.
ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್ಡಿಆರ್ಎಫ್ ಪರಿಹಾರ ಮೊತ್ತ…
ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…
ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ…
ಜುಲೈ 10ರ ಬಳಿಕ ರಾಜ್ಯದಲ್ಲಿ ಮುಂಗಾರು ದುರ್ಬಲಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
1960ರ ವಿಜ್ಞಾನ ಲೇಖನವು 2026ರಲ್ಲಿ ಜಗತ್ತು ಅಂತ್ಯವಾಗುತ್ತದೆ ಎಂದು ಹೇಳಿಲ್ಲ. ಅದು ಕೇವಲ…
ಜುಲೈ 5ರಿಂದ 9ರವರೆಗೆ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ.…