ಕುಂಬ್ರ:ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ಕಾವು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಕೆರೆಗೆ ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಡೆದಿದೆ.
ಮೃತರನ್ನು ಶುಂಠಿ ಕೊಪ್ಪ ನಿವಾಸಿಗಳೆಂದು ಅಶೋಕ್ ಎಂಬವರ ಕುಟುಂಬ ಎಂದು ತಿಳಿದುಬಂದಿದ್ದು, ಓರ್ವ ಪುರುಷ, ಮಹಿಳೆ ಮತ್ತು ಇಬ್ಬರು ಕಾರಿನಲ್ಲಿದ್ದು ಒಂದೇ ಕುಟುಂಬದವರೆಂದು ಸ್ಥಳೀಯರು ತಿಳಿಸಿದ್ದಾರೆ.
ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.
ಕೌಡಿಚಾರ್ ಬಳಿ ಬೆಳಿಗ್ಗೆ 7 ಗಂಟೆಯ ಹೊತ್ತಿಗೆ ಪುತ್ತೂರು ತಾಲೂಕು ಕೌಡಿಚಾರ್-ಅರಿಯಡ್ಕ ಮಧ್ಯೆ ಮಡ್ಯಂಗಳ ಎಂಬಲ್ಲಿ ಆಲ್ಟೊ ಕಾರು ರಸ್ತೆಬದಿಯ ಕೆರೆಗೆ ಬಿದ್ದಿತ್ತು.ಕಾರು ಸುಳ್ಯ ಕಡೆಯಿಂದ ಪುತ್ತೂರು ಕಡೆಗೆ ಹೋಗುತ್ತಿತ್ತು. ರಸ್ತೆಬದಿಯ ಕೆರೆಗೆ ಕಾರು ಬಿದ್ದ ಶಬ್ದ ಕೇಳಿ ಸಮೀಪದ ಮನೆಯವರು ಓಡಿ ಬಂದು ನೋಡುವಾಗ ಕಾರು ನೀರಲ್ಲಿ ಮುಳುಗಿರುವುದು ಗೊತ್ತಾಯಿತು. ಬಳಿಕ ಜನ ಸೇರಿ ಕಾರಿನಲ್ಲಿದ್ದ ನಾಲ್ವರನ್ನೂ ಹೊರತೆಗೆಯಲಾಯಿತು. ಆದರೆ ಆ ವೇಳೆಗಾಗಲೇ ನಾಲ್ಲರೂ ಕೊನೆಯುಸಿರೆಳೆದಿದ್ದರು.ಆಲ್ಟೊ ಕಾರು ಇದಾಗಿದೆ. ಮೃತದೇಹಗಳನ್ನು ಪುತ್ತೂರಿನ ಆಸ್ಪತ್ರೆಗೆ ಕಳುಹಿಸಲಾಗಿದೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…