ಕುಂಬ್ರ:ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ಕಾವು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಕೆರೆಗೆ ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಡೆದಿದೆ.
ಮೃತರನ್ನು ಶುಂಠಿ ಕೊಪ್ಪ ನಿವಾಸಿಗಳೆಂದು ಅಶೋಕ್ ಎಂಬವರ ಕುಟುಂಬ ಎಂದು ತಿಳಿದುಬಂದಿದ್ದು, ಓರ್ವ ಪುರುಷ, ಮಹಿಳೆ ಮತ್ತು ಇಬ್ಬರು ಕಾರಿನಲ್ಲಿದ್ದು ಒಂದೇ ಕುಟುಂಬದವರೆಂದು ಸ್ಥಳೀಯರು ತಿಳಿಸಿದ್ದಾರೆ.
ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.
ಕೌಡಿಚಾರ್ ಬಳಿ ಬೆಳಿಗ್ಗೆ 7 ಗಂಟೆಯ ಹೊತ್ತಿಗೆ ಪುತ್ತೂರು ತಾಲೂಕು ಕೌಡಿಚಾರ್-ಅರಿಯಡ್ಕ ಮಧ್ಯೆ ಮಡ್ಯಂಗಳ ಎಂಬಲ್ಲಿ ಆಲ್ಟೊ ಕಾರು ರಸ್ತೆಬದಿಯ ಕೆರೆಗೆ ಬಿದ್ದಿತ್ತು.ಕಾರು ಸುಳ್ಯ ಕಡೆಯಿಂದ ಪುತ್ತೂರು ಕಡೆಗೆ ಹೋಗುತ್ತಿತ್ತು. ರಸ್ತೆಬದಿಯ ಕೆರೆಗೆ ಕಾರು ಬಿದ್ದ ಶಬ್ದ ಕೇಳಿ ಸಮೀಪದ ಮನೆಯವರು ಓಡಿ ಬಂದು ನೋಡುವಾಗ ಕಾರು ನೀರಲ್ಲಿ ಮುಳುಗಿರುವುದು ಗೊತ್ತಾಯಿತು. ಬಳಿಕ ಜನ ಸೇರಿ ಕಾರಿನಲ್ಲಿದ್ದ ನಾಲ್ವರನ್ನೂ ಹೊರತೆಗೆಯಲಾಯಿತು. ಆದರೆ ಆ ವೇಳೆಗಾಗಲೇ ನಾಲ್ಲರೂ ಕೊನೆಯುಸಿರೆಳೆದಿದ್ದರು.ಆಲ್ಟೊ ಕಾರು ಇದಾಗಿದೆ. ಮೃತದೇಹಗಳನ್ನು ಪುತ್ತೂರಿನ ಆಸ್ಪತ್ರೆಗೆ ಕಳುಹಿಸಲಾಗಿದೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…