Advertisement
ಸುದ್ದಿಗಳು

ಕ್ಯಾಂಪಸ್ ಫ್ರಂಟ್ ಸಂಸ್ಥಾಪನಾ ದಿನಾಚರಣೆ: ‌ಬೆಳ್ಳಾರೆ ಏರಿಯಾ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ

Share

ಪುತ್ತೂರು: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಇದರ ಹತ್ತನೇ ವರ್ಷಾಚರಣೆ ಸಂಸ್ಥಾಪನಾ ದಿನಾಚರಣೆಯ ಪ್ರಯುಕ್ತ ಕ್ಯಾಂಪಸ್ ಫ್ರಂಟ್ ಬೆಳ್ಳಾರೆ ಏರಿಯಾ ವತಿಯಿಂದ ಬೆಳ್ಳಾರೆ ಜಂಕ್ಷನ್ ನಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.

ಕ್ಯಾಂಪಸ್ ಫ್ರಂಟ್ ಬೆಳ್ಳಾರೆ ಏರಿಯಾ ಅಧ್ಯಕ್ಷರಾದ ನಿಝಾಮ್ ಬೆಳ್ಳಾರೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಧ್ವಜಾರೋಹಣ ನೆರವೇರಿಸಿದರು. ಕ್ಯಾಂಪಸ್ ಫ್ರಂಟ್ ಘನತೆಯಿಂದ ಫ್ಯಾಸಿಸ್ಟ್ ವರ್ಗದ ಮುಂದೆ ರಾಜಿ ರಹಿತ ಹೋರಾಟದೊಂದಿಗೆ, ಅವರ ಮುಂದೆ ತಲೆ ತಗ್ಗಿಸದೆ ಘನತೆಯೊಂದಿಗೆ ಹತ್ತು ವರ್ಷವನ್ನು ಕ್ಯಾಂಪಸ್ ಫ್ರಂಟ್ ನೆರವೇರಿಸಿದೆ ಎಂದು ಕ್ಯಾಂಪಸ್ ಫ್ರಂಟ್ ಪುತ್ತೂರು ತಾಲೂಕು ಸಮಿತಿ ಸದಸ್ಯರಾದ ಅನ್ಸಾರ್ ಬೆಳ್ಳಾರೆ ಸಂದರ್ಭೋಚಿತವಾಗಿ “ಘನತೆಯ ಹತ್ತು ವರ್ಷಗಳ” ಸಂದೇಶವನ್ನು ನೀಡಿದರು.

ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಬೆಳ್ಳಾರೆ ಘಟಕ ಅದ್ಯಕ್ಷ ಹಫೀಝ್, ಕಾರ್ಯದರ್ಶಿ ಸುಹೈಲ್, ಬೆಳ್ಳಾರೆ ಕಾಲೇಜು ಕಾರ್ಯದರ್ಶಿ ರಮೀಝ್ ಅಲೆಕ್ಕಾಡಿ, ಫ್ರೌಢಶಾಲಾ ಘಟಕದ ಅಧ್ಯಕ್ಷ ಸುಹೈಲ್, ಪಾಪ್ಯುಲರ್ ಫ್ರಂಟ್ ಬೆಳ್ಳಾರೆ ಡಿವಿಜನ್ ಕಾರ್ಯದರ್ಶಿ ಸಿದ್ದೀಕ್, ಪಾಪ್ಯುಲರ್ ಫ್ರಂಟ್ ಏರಿಯಾ ಅಧ್ಯಕ್ಷರಾದ ಸಹೀದ್ ಉಪಸ್ಥಿತರಿದ್ದರು. ಕ್ಯಾಂಪಸ್ ಫ್ರಂಟ್ ಬೆಳ್ಳಾರೆ ಏರಿಯಾ ಕಾರ್ಯದರ್ಶಿ ಜಾಬಿರ್ ಬೆಳ್ಳಾರೆ ಸ್ವಾಗತಿಸಿ, ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 19-07-2026 | ಜುಲೈ 20 ರಿಂದ ಮಳೆ ಇಳಿಮುಖ…! ಕರಾವಳಿ–ಮಲೆನಾಡಿನಲ್ಲಿ ಮಾತ್ರ ಅಲ್ಲಲ್ಲಿ ಮಳೆ ಮುಂದುವರಿಕೆ

ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…

6 hours ago

ಹಲಸಿನ ಬೀಜದ ಸಿಪ್ಪೆಯಿಂದ ಕೈಗಾರಿಕಾ ಬಳಕೆಯ ಸೆಲ್ಯುಲೋಸ್..! ರೈತರಿಗೆ ಮೌಲ್ಯವರ್ಧನೆಯ ಹೊಸ ಅವಕಾಶ

ಹಲಸಿನ ಬೀಜದ ಸಿಪ್ಪೆಯಿಂದ ಮೈಕ್ರೋಕ್ರಿಸ್ಟಲೈನ್ ಸೆಲ್ಯುಲೋಸ್ ಉತ್ಪಾದಿಸುವಲ್ಲಿ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ. ಕೃಷಿ ತ್ಯಾಜ್ಯವನ್ನು…

11 hours ago

ಅಪ್ಪ ಯಾಕೆ ವಿಚಿತ್ರವಾಗಿ ಕಾಣುತ್ತಾನೆ?

ಬಾಲ್ಯದಲ್ಲಿ ಕಠೋರನಂತೆ ಕಾಣುವ ಅಪ್ಪನ ನಿಜವಾದ ಪ್ರೀತಿ ಮತ್ತು ತ್ಯಾಗ ನಮ್ಮ ಬದುಕಿನ…

11 hours ago

ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ | ಜುಲೈ 21ರಂದು ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗೆ ನೇರ ಸಂದರ್ಶನ

ಕ್ಯಾಲಿಬರ್ ಕಂಪೆನಿ ವತಿಯಿಂದ ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗಳಿಗೆ ಜುಲೈ…

22 hours ago

ಜುಲೈ 31 ರೊಳಗೆ ಬೆಳೆವಿಮೆ ನೋಂದಣಿ ಮಾಡಿಸಿಕೊಳ್ಳಿ – ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ಅವಕಾಶ

ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಾರರಿಗೆ ಹವಾಮಾನ ಆಧಾರಿತ ಬೆಳೆವಿಮೆ…

23 hours ago

ಕರಾವಳಿ–ಹವಾಮಾನ ವರದಿ | 18-07-2026 | ಮಲೆನಾಡಿನಲ್ಲಿ ಇನ್ನೂ 10 ದಿನ ಮಳೆ ಮುಂದುವರಿಕೆ…! ಉತ್ತರ ಒಳನಾಡಿನಲ್ಲಿ ಜುಲೈ 19 ರಿಂದ ಮಳೆ ಇಳಿಮುಖ

ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಮಳೆ ಮುಂದುವರಿಯುವ…

1 day ago