ಪುತ್ತೂರು: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಇದರ ಹತ್ತನೇ ವರ್ಷಾಚರಣೆ ಸಂಸ್ಥಾಪನಾ ದಿನಾಚರಣೆಯ ಪ್ರಯುಕ್ತ ಕ್ಯಾಂಪಸ್ ಫ್ರಂಟ್ ಬೆಳ್ಳಾರೆ ಏರಿಯಾ ವತಿಯಿಂದ ಬೆಳ್ಳಾರೆ ಜಂಕ್ಷನ್ ನಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.
ಕ್ಯಾಂಪಸ್ ಫ್ರಂಟ್ ಬೆಳ್ಳಾರೆ ಏರಿಯಾ ಅಧ್ಯಕ್ಷರಾದ ನಿಝಾಮ್ ಬೆಳ್ಳಾರೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಧ್ವಜಾರೋಹಣ ನೆರವೇರಿಸಿದರು. ಕ್ಯಾಂಪಸ್ ಫ್ರಂಟ್ ಘನತೆಯಿಂದ ಫ್ಯಾಸಿಸ್ಟ್ ವರ್ಗದ ಮುಂದೆ ರಾಜಿ ರಹಿತ ಹೋರಾಟದೊಂದಿಗೆ, ಅವರ ಮುಂದೆ ತಲೆ ತಗ್ಗಿಸದೆ ಘನತೆಯೊಂದಿಗೆ ಹತ್ತು ವರ್ಷವನ್ನು ಕ್ಯಾಂಪಸ್ ಫ್ರಂಟ್ ನೆರವೇರಿಸಿದೆ ಎಂದು ಕ್ಯಾಂಪಸ್ ಫ್ರಂಟ್ ಪುತ್ತೂರು ತಾಲೂಕು ಸಮಿತಿ ಸದಸ್ಯರಾದ ಅನ್ಸಾರ್ ಬೆಳ್ಳಾರೆ ಸಂದರ್ಭೋಚಿತವಾಗಿ “ಘನತೆಯ ಹತ್ತು ವರ್ಷಗಳ” ಸಂದೇಶವನ್ನು ನೀಡಿದರು.
ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಬೆಳ್ಳಾರೆ ಘಟಕ ಅದ್ಯಕ್ಷ ಹಫೀಝ್, ಕಾರ್ಯದರ್ಶಿ ಸುಹೈಲ್, ಬೆಳ್ಳಾರೆ ಕಾಲೇಜು ಕಾರ್ಯದರ್ಶಿ ರಮೀಝ್ ಅಲೆಕ್ಕಾಡಿ, ಫ್ರೌಢಶಾಲಾ ಘಟಕದ ಅಧ್ಯಕ್ಷ ಸುಹೈಲ್, ಪಾಪ್ಯುಲರ್ ಫ್ರಂಟ್ ಬೆಳ್ಳಾರೆ ಡಿವಿಜನ್ ಕಾರ್ಯದರ್ಶಿ ಸಿದ್ದೀಕ್, ಪಾಪ್ಯುಲರ್ ಫ್ರಂಟ್ ಏರಿಯಾ ಅಧ್ಯಕ್ಷರಾದ ಸಹೀದ್ ಉಪಸ್ಥಿತರಿದ್ದರು. ಕ್ಯಾಂಪಸ್ ಫ್ರಂಟ್ ಬೆಳ್ಳಾರೆ ಏರಿಯಾ ಕಾರ್ಯದರ್ಶಿ ಜಾಬಿರ್ ಬೆಳ್ಳಾರೆ ಸ್ವಾಗತಿಸಿ, ವಂದಿಸಿದರು.
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…