ಪುತ್ತೂರು: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಇದರ ಹತ್ತನೇ ವರ್ಷಾಚರಣೆ ಸಂಸ್ಥಾಪನಾ ದಿನಾಚರಣೆಯ ಪ್ರಯುಕ್ತ ಕ್ಯಾಂಪಸ್ ಫ್ರಂಟ್ ಬೆಳ್ಳಾರೆ ಏರಿಯಾ ವತಿಯಿಂದ ಬೆಳ್ಳಾರೆ ಜಂಕ್ಷನ್ ನಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.
ಕ್ಯಾಂಪಸ್ ಫ್ರಂಟ್ ಬೆಳ್ಳಾರೆ ಏರಿಯಾ ಅಧ್ಯಕ್ಷರಾದ ನಿಝಾಮ್ ಬೆಳ್ಳಾರೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಧ್ವಜಾರೋಹಣ ನೆರವೇರಿಸಿದರು. ಕ್ಯಾಂಪಸ್ ಫ್ರಂಟ್ ಘನತೆಯಿಂದ ಫ್ಯಾಸಿಸ್ಟ್ ವರ್ಗದ ಮುಂದೆ ರಾಜಿ ರಹಿತ ಹೋರಾಟದೊಂದಿಗೆ, ಅವರ ಮುಂದೆ ತಲೆ ತಗ್ಗಿಸದೆ ಘನತೆಯೊಂದಿಗೆ ಹತ್ತು ವರ್ಷವನ್ನು ಕ್ಯಾಂಪಸ್ ಫ್ರಂಟ್ ನೆರವೇರಿಸಿದೆ ಎಂದು ಕ್ಯಾಂಪಸ್ ಫ್ರಂಟ್ ಪುತ್ತೂರು ತಾಲೂಕು ಸಮಿತಿ ಸದಸ್ಯರಾದ ಅನ್ಸಾರ್ ಬೆಳ್ಳಾರೆ ಸಂದರ್ಭೋಚಿತವಾಗಿ “ಘನತೆಯ ಹತ್ತು ವರ್ಷಗಳ” ಸಂದೇಶವನ್ನು ನೀಡಿದರು.
ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಬೆಳ್ಳಾರೆ ಘಟಕ ಅದ್ಯಕ್ಷ ಹಫೀಝ್, ಕಾರ್ಯದರ್ಶಿ ಸುಹೈಲ್, ಬೆಳ್ಳಾರೆ ಕಾಲೇಜು ಕಾರ್ಯದರ್ಶಿ ರಮೀಝ್ ಅಲೆಕ್ಕಾಡಿ, ಫ್ರೌಢಶಾಲಾ ಘಟಕದ ಅಧ್ಯಕ್ಷ ಸುಹೈಲ್, ಪಾಪ್ಯುಲರ್ ಫ್ರಂಟ್ ಬೆಳ್ಳಾರೆ ಡಿವಿಜನ್ ಕಾರ್ಯದರ್ಶಿ ಸಿದ್ದೀಕ್, ಪಾಪ್ಯುಲರ್ ಫ್ರಂಟ್ ಏರಿಯಾ ಅಧ್ಯಕ್ಷರಾದ ಸಹೀದ್ ಉಪಸ್ಥಿತರಿದ್ದರು. ಕ್ಯಾಂಪಸ್ ಫ್ರಂಟ್ ಬೆಳ್ಳಾರೆ ಏರಿಯಾ ಕಾರ್ಯದರ್ಶಿ ಜಾಬಿರ್ ಬೆಳ್ಳಾರೆ ಸ್ವಾಗತಿಸಿ, ವಂದಿಸಿದರು.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…