ಮಂಗಳೂರು: ದಿವಂಗತ ವಾರಣಾಶಿ ಸುಬ್ರಾಯ ಭಟ್ಟರು ನೇತೃತ್ವದಲ್ಲಿ, ಕೃಷಿಕ ಸಮುದಾಯದ ಉದ್ಧಾರಕ್ಕಾಗಿ 1973 ಜುಲೈ 11ರಂದು ರೂಪುಗೊಂಡ ಕ್ಯಾಂಪ್ಕೊ ಸಂಸ್ಥೆಯು, ಕಳೆದ 47 ವರ್ಷಗಳಲ್ಲಿ ತನ್ನ ಸದಸ್ಯ ಬೆಳೆಗಾರರಿಗೆ ತಮ್ಮ ಉತ್ಪನ್ನಗಳಿಗೆ ಸ್ಥಿರ ಬೆಲೆಯೊಂದಿಗೆ ಸೂಕ್ತ ಮಾರುಕಟ್ಟೆಯನ್ನೊದಗಿಸುವುದರೊಂದಿಗೆ ಇನ್ನಿತರ ರೀತಿಯಲ್ಲಿ ನಿರಂತರ ಸೇವೆಯನ್ನು ನೀಡುತ್ತಾ ಬಂದಿದೆ. ಇಂದು ಸಂಸ್ಥೆಯು ಹೆಮ್ಮರವಾಗಿ ಬೆಳೆದು, 1850 ಕೋಟಿ ರೂಪಾಯಿಗಳ ಬೃಹತ್ ವಹಿವಾಟನ್ನು ದಾಖಲಿಸಿದೆಯೆಂದರೆ ಇದು ಸುಬ್ರಾಯ ಭಟ್ಟರ ದೂರದರ್ಶಿ ನಿರ್ಧಾರಗಳ ಫಲವಾಗಿದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಹೇಳಿದರು.
ಅವರು ಶನಿವಾರದಂದು ಮಂಗಳೂರಿನ ಕ್ಯಾಂಪ್ಕೊ ಮುಖ್ಯಕಚೇರಿಯಲ್ಲಿ ಕ್ಯಾಂಪ್ಕೊ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡುತ್ತಿದ್ದರು. ಸಂಸ್ಥೆಯ ಹಿರಿಯ ನಿರ್ದೇಶಕರು ಮತ್ತು ಮಾಜಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಎ.ಎಸ್.ಭಟ್ ಅವರು ಸಂಸ್ಥೆಯ ಹುಟ್ಟು, ಬೆಳೆದು ಬಂದ ಹಾದಿಯ ಬಗ್ಗೆ ಮಾತನಾಡಿ, ವಾರಣಾಶಿಯವರು ಹಾಕಿಕೊಟ್ಟ ಭದ್ರ ಬುನಾದಿ, ತೋರಿದ ಹಾದಿಯಲ್ಲಿ ಸಾಗಿದ ಸಂಸ್ಥೆಯ ಸಾಧನೆಗಳು ಅಪಾರ. ಮುಂದಿನ ದಿನಗಳಲ್ಲಿ ಸಂಸ್ಥೆಯು ಸಾಧಿಸುವುದು ಬಹಳಷ್ಟಿದೆ ಎಂದರು.
ಸಂಸ್ಥೆಯ ನಿರ್ದೇಶಕರುಗಳಾದ ಕಿಶೋರ್ ಕುಮಾರ್ ಕೊಡ್ಗಿ, ಕೃಷ್ಣ ಪ್ರಸಾದ್ ಮಡ್ತಿಲ ಮಾತನಾಡಿದರು. ಪ್ರಭಾರ ವ್ಯವಸ್ಥಾಪಕ ನಿರ್ದೇಶಕರಾದ ರೇಷ್ಮಾ ಮಲ್ಯ ಉಪಸ್ಥಿತರಿದ್ದರು.
ಪುತ್ತೂರು ಕ್ಯಾಂಪ್ಕೊ ಚಾಕೊಲೇಟ್ ಕಾರ್ಖಾನೆ ಮತ್ತು ದೇಶಾದ್ಯಂತವಿರುವ ಕ್ಯಾಂಪ್ಕೊ ಶಾಖೆಗಳಲ್ಲಿ ಸಂಸ್ಥಾಪನಾ ದಿನವನ್ನು ಆಚರಿಸಲಾಯಿತು.
ರಾಜ್ಯದಲ್ಲಿ ಸುಮಾರು ಒಂದೂವರೆ ಲಕ್ಷ ಹೆಕ್ಟೇರ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತದೆ. ಇದರಲ್ಲಿ ಕೋಲಾರ…
ಅಡಿಕೆ ಬೆಳೆಗಾರರು ವಿವಿಧ ಸಂಕಷ್ಟ ಮತ್ತು ಸವಾಲುಗಳನ್ನು ಎದುರಿಸುತ್ತಿದ್ದಾರೆ, ಅವುಗಳಿಗೆ ಪರಿಹಾರ ಕಂಡುಕೊಳ್ಳಬೇಕಾದರೆ…
ಜೂನ್ 30 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ನಂತರ ಅಲ್ಲಲ್ಲಿ ಸಾಮಾನ್ಯ…
ರಾಷ್ಟ್ರೀಯ ರಾಜಧಾನಿ ದೆಹಲಿಗೆ ಮುಂಗಾರು ಮಳೆ ವಿಳಂಬವಾಗಿದ್ದು ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಸಾಮಾನ್ಯವಾಗಿ…
ಒಂದೇ ತಾಯಿಯ ಗರ್ಭದಿಂದ ಸಂಜನಿಸಿದ ಸಹೋದರರ ಗುಣಗಳಲ್ಲಿ ವ್ಯತ್ಯಾಸಗಳಿವೆ. ವ್ಯಕ್ತಿತ್ವ ರೂಪೀಕರಣದಲ್ಲೂ ಭಿನ್ನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490